ಬ್ರೇಕಿಂಗ್ ನ್ಯೂಸ್
07-03-21 03:02 pm Headline Karnataka News Network ಕರ್ನಾಟಕ
ದಾವಣಗೆರೆ,ಮಾ.7: ಡಿಜಿಟಲ್ ಯುಗ ಹಾಗೂ ಡಿಮಾನಿಟೀಷನ್ ಕಾಲದಲ್ಲಿ ಹೊಸಾ ಹೊಸಾ ನೋಟುಗಳು ಬರ್ತಾ ಇದ್ದು, ಹಳೇಯ ನೋಟುಗಳು ಕಣ್ಮರೆಯಾಗುತ್ತಿದೆ. ಇಂದಿನ ಕಾಲದ ಮಕ್ಕಳಿಗೆ ಹಳೆಯ ನೋಟು, ನಾಣ್ಯಗಳ ಪರಿಚಯವೇ ಇಲ್ಲದಂತಾಗಿದೆ. ಅಂತಹ ಮಕ್ಕಳಿಗೆ ರಾಜರ ಕಾಲದ ನ್ಯಾಣ್ಯಗಳಿಂದ ಹಿಡಿದು 150 ಕ್ಕೂ ಹೆಚ್ಚು ದೇಶಗಳ ನೋಟುಗಳನ್ನ ಪ್ರದರ್ಶನದ ಮೂಲಕ ಪರಿಚಯಿಸಲಾಯಿತು.
ನಾಣ್ಯ ಹಾಗೂ ನೋಟುಗಳ ಪ್ರದರ್ಶನ
ದಾವಣಗೆರೆಯ ಎಂಸಿಸಿಬಿ ಬ್ಲಾಕ್ನಲ್ಲಿರುವ ಸಮುದಾಯ ಭವನದಲ್ಲಿ, ರೋಟರಿ ಕ್ಲಬ್ ವತಿಯಿಂದ ಹಳೆಯ ನೋಟು ಹಾಗೂ ನಾಣ್ಯಗಳ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಬೆಳಗಾವಿಯ ಈರಪ್ಪ ಜಿ ಪರಮಶೆಟ್ಟಿ ಎನ್ನುವರು ಸಂಗ್ರಹಿಸಿದ್ದ ನಾಣ್ಯ ಹಾಗೂ ನೋಟುಗಳ ಪ್ರದರ್ಶನ ಹಮ್ಮಿಕೊಂಡಿದ್ದು, ಇದರಲ್ಲಿ ನೂರೈವತ್ತಕ್ಕೂ ಹೆಚ್ಚು ದೇಶಗಳ ನೋಟುಗಳನ್ನು ಹಾಗೂ ಚಂದ್ರಗುಪ್ತ ಮೌರ್ಯ, ಹೊಯ್ಸಳ, ಕದಂಬ, ಪೇಶ್ವೆಗಳ ಕಾಲದ ನಾಣ್ಯಗಳನ್ನು ಇಲ್ಲಿ ಪ್ರದರ್ಶನಕ್ಕೆ ಇಡಲಾಗಿತ್ತು.
ಚಿಕ್ಕ ವಯಸ್ಸಿನಿಂದ ಈ ಹವ್ಯಾಸ
ಅಲ್ಲದೆ 92 ಮಾದರಿಯ ಒಂದು ರೂಪಾಯಿ ನೋಟುಗಳನ್ನು ಪ್ರದರ್ಶನಕ್ಕೆ ಇಡಲಾಗಿದ್ದು, ಫ್ಯಾನ್ಸಿ ನಂಬರ್ಗಳ ನೋಟುಗಳು ಸೇರಿದಂತೆ ಮ್ಯಾಜಿಕ್ ನಂಬರ್ಗಳನ್ನು ಕೂಡ ಸಾರ್ವಜನಿಕರ ಪ್ರದರ್ಶನಕ್ಕೆ ಇಟ್ಟಿದ್ದರು. ಇನ್ನು ಈ ನೋಟು ಹಾಗೂ ನಾಣ್ಯಗಳ ಪ್ರದರ್ಶನ ಕಳೆದ ಹಲವು ವರ್ಷಗಳಿಂದ ಮಾಡಿಕೊಂಡು ಬರುತ್ತಿದ್ದು, ಚಿಕ್ಕ ವಯಸ್ಸಿನಿಂದ ಈ ಹವ್ಯಾಸ ಬಂದಿದ್ದು ಎನ್ನುತ್ತಾರೆ ಸಂಗ್ರಹಕಾರರು.
ವಿಧ್ಯಾರ್ಥಿಗಳ ಜೊತೆ ಸಾರ್ವಜನಿಕರು ಆಗಮಿಸಿ ಜ್ಞಾನವನ್ನು ಹೆಚ್ವಿಸಿಕೊಳ್ಳುತ್ತಿದ್ದಾರೆ
ಇನ್ನು ಈ ಸೂರಿನಡಿ ಮಕ್ಕಳಿಗೆ ವಿಶೇಷವಾಗಿ ನೋಟು ನಾಣ್ಯಗಳ ಬಗ್ಗೆ ಅಧ್ಯಾಯನ ನಡೆಸಲು ಈರಣ್ಣರವರಿಂದ ಮಾರ್ಗದರ್ಶನ ನೀಡುತ್ತಿದ್ದು, ಶಾಲಾ ಹಾಗೂ ಕಾಲೇಜು ವಿಧ್ಯಾರ್ಥಿಗಳು ಪ್ರದರ್ಶನದಲ್ಲಿ ಪಾಲ್ಗೊಂಡು ಜ್ಞಾನವನ್ನು ಹೆಚ್ವಿಸಿಕೊಳ್ಳಲು ಸಹಕಾರಿಯಾಗಿತ್ತು. ಇನ್ನು ರಿಸರ್ವ ಬ್ಯಾಂಕ್ನ ಗವರ್ನರ್ಗಳ ಅವಧಿಯಲ್ಲಿ ಯಾವ ಯಾವ ನೋಟುಗಳ ಮುದ್ರಣವಾಯ್ತು ಎನ್ನುವುದರ ಬಗ್ಗೆ ಕೂಡ ಮಾಹಿತಿ ನೀಡಿ ನೋಟುಗಳನ್ನು ಪ್ರದರ್ಶನಕ್ಕೆ ಇಟ್ಟಿದ್ದರು. ಇದರಿಂದ ವಿಧ್ಯಾರ್ಥಿಗಳು ಪ್ರದರ್ಶನ ಮೇಳದಲ್ಲಿ ಭಾಗವಹಿಸಿ ನೋಟುಗಳ ಬಗ್ಗೆ ಮಾಹಿತಿ ತಿಳಿದು ಜ್ಞಾನವನ್ನು ಹೆಚ್ವಿಸಿಕೊಂಡರು.
Old currency expo held in Davanagere, Karnataka. Hundreds flocked into the expo to see various currencies.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 11:26 am
HK News Desk
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm