ಬ್ರೇಕಿಂಗ್ ನ್ಯೂಸ್
07-03-21 10:07 pm Headline Karnataka News Network ಕರ್ನಾಟಕ
ಭಟ್ಕಳ, ಮಾ.7 : ಕೈಗೆ ಕಟ್ಟಿದ್ದ ವಾಚ್ ನಲ್ಲಿ ಚಿನ್ನ ಅಡಗಿಸಿಟ್ಟಿದ್ದಾನೆಂದು ನಂಬಿ ಭಟ್ಕಳ ಮೂಲದ ವ್ಯಕ್ತಿಯನ್ನು ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು, ಆತನ ದುಬಾರಿ ಬೆಲೆಯ ಕೈಗಡಿಯಾರವನ್ನು ಪುಡಿಗಟ್ಟಿ ಚಿನ್ನಕ್ಕಾಗಿ ಹುಡುಕಾಡಿದ ಘಟನೆ ಕೇರಳದ ಕ್ಯಾಲಿಕಟ್ನಲ್ಲಿ ನಡೆದಿದೆ.
ಭಟ್ಕಳ ಕಾರಗದ್ದೆ ನಿವಾಸಿ ಮಹ್ಮದ್ ಇಸ್ಮಾಯಿಲ್ ಅವರ ಸಹೋದರ ದುಬೈನಲ್ಲಿ ವ್ಯಾಪಾರ ವಹಿವಾಟು ಹೊಂದಿದ್ದು, ಇಸ್ಮಾಯಿಲ್ ವಿಸಿಟಿಂಗ್ ವೀಸಾ ಪಡೆದು ಸಹೋದರನ ಬಳಿ ತೆರಳಿದ್ದರು. ಇವರು ಊರಿಗೆ ವಾಪಸ್ಸಾಗುತ್ತಿದ್ದಾಗ ಮಾ.3 ರಂದು ಕೇರಳದ ಕ್ಯಾಲಿಕಟ್ ವಿಮಾನ ನಿಲ್ದಾಣಕ್ಕೆ ಬಂದಿದ್ದು, ಕಸ್ಟಮ್ಸ್ ಅಧಿಕಾರಿಗಳು ಇಸ್ಮಾಯಿಲ್ ಅವರನ್ನು ವಶಕ್ಕೆ ಪಡೆದಿದ್ದಾರೆ.
ಕೈಯಲ್ಲಿದ್ದ ಕೈಗಡಿಯಾರದ ಬಗ್ಗೆ ಸಂಶಯಗೊಂಡು ಅಧಿಕಾರಿಗಳು ವಶಕ್ಕೆ ಪಡೆದು ಅದನ್ನು ಒಡೆದು ಹಾಕಿದ್ದಾರೆ. ಗಡಿಯಾರದಲ್ಲಿ ಚಿನ್ನ ಇಲ್ಲದಿರುವುದನ್ನು ತಿಳಿದು ಪುಡಿಯಾದ ಗಡಿಯಾರವನ್ನು ಟ್ರೇನಲ್ಲಿ ಇಟ್ಟು ಇಸ್ಮಾಯಿಲ್ ಅವರಿಗೆ ಹಿಂದಿರುಗಿಸಿದ್ದಾರೆ. ಒಡೆದ ಗಡಿಯಾರ ಕಂಡು ಕಂಗಾಲಾದ ಇಸ್ಮಾಯಿಲ್, ತನ್ನ ಗಡಿಯಾರವನ್ನು ತನಗೆ ವಾಪಸ್ಸು ನೀಡುವಂತೆ ಪಟ್ಟು ಹಿಡಿದಿದ್ದಾರೆ. ಗಡಿಯಾರದ ಮೌಲ್ಯವನ್ನು ಕೇಳಿಸಿಕೊಂಡ ಕಸ್ಟಮ್ಸ್ ಅಧಿಕಾರಿಗಳೂ ತಬ್ಬಿಬ್ಬಾಗಿದ್ದಾರೆ. ಈ ಕುರಿತು ಇಸ್ಮಾಯಿಲ್ ಕ್ಯಾಲಿಕಟ್ ಪೊಲೀಸ್ ಠಾಣೆಯಲ್ಲಿ ಕಸ್ಟಮ್ಸ್ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಿದ್ದಾರೆ.

ಅರಬ್ ರಾಷ್ಟ್ರ ದುಬೈನಲ್ಲಿ ದುಬಾರಿ ಬೆಲೆಯ ಹಳೆಯ ಕೈ ಗಡಿಯಾರಗಳ ಮಾರಾಟ ಮಳಿಗೆಯೊಂದಿದೆ. ಆ ಮಳಿಗೆಯಲ್ಲಿ ಪ್ರಖ್ಯಾತ ಆಡಿಮೂವರ್ಸ್ ಪಿಗುಯೆಟ್ ಕಂಪೆನಿಯ ಸರಿಸುಮಾರು 60 ಲಕ್ಷ ರೂ. ಮೌಲ್ಯದ ಬಳಸಲಾದ ಕೈಗಡಿಯಾರವನ್ನು, ಇಸ್ಮಾಯಿಲ್ ಸಹೋದರ 48 ಲಕ್ಷ ರೂ. ನೀಡಿ 2017ರಲ್ಲಿ ಖರೀದಿಸಿದ್ದರು.
ಕೈಯಲ್ಲಿ ಕಟ್ಟಿಕೊಂಡು ಓಡಾಡಿದ್ದ ಆತ, ಕಳೆದ ತಿಂಗಳಷ್ಟೇ ದುಬೈಗೆ ಬಂದ ತನ್ನ ಸಹೋದರನಿಗೆ ನೀಡಿದ್ದರು. ದುಬಾರಿ ಬೆಲೆಯ ಕೈಗಡಿಯಾರದೊಂದಿಗೆ ಇಸ್ಮಾಯಿಲ್ ಭಾರತಕ್ಕೆ ವಾಪಸ್ಸಾಗಿದ್ದು, ಗಡಿಯಾರದ ಮೌಲ್ಯವರಿಯದ ಕಸ್ಟಮ್ಸ್ ಅಧಿಕಾರಿಗಳು ಅದನ್ನು ಒಡೆದು ಚಿನ್ನಕ್ಕಾಗಿ ತಲಾಶೆ ನಡೆಸಿದ್ದಾರೆ.
Custom officers of Kerala break 60 lakhs worth watch of a Bhatkal Man suspecting that the person was carrying God inside the Watch.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm