ಬ್ರೇಕಿಂಗ್ ನ್ಯೂಸ್
07-03-21 10:07 pm Headline Karnataka News Network ಕರ್ನಾಟಕ
ಭಟ್ಕಳ, ಮಾ.7 : ಕೈಗೆ ಕಟ್ಟಿದ್ದ ವಾಚ್ ನಲ್ಲಿ ಚಿನ್ನ ಅಡಗಿಸಿಟ್ಟಿದ್ದಾನೆಂದು ನಂಬಿ ಭಟ್ಕಳ ಮೂಲದ ವ್ಯಕ್ತಿಯನ್ನು ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು, ಆತನ ದುಬಾರಿ ಬೆಲೆಯ ಕೈಗಡಿಯಾರವನ್ನು ಪುಡಿಗಟ್ಟಿ ಚಿನ್ನಕ್ಕಾಗಿ ಹುಡುಕಾಡಿದ ಘಟನೆ ಕೇರಳದ ಕ್ಯಾಲಿಕಟ್ನಲ್ಲಿ ನಡೆದಿದೆ.
ಭಟ್ಕಳ ಕಾರಗದ್ದೆ ನಿವಾಸಿ ಮಹ್ಮದ್ ಇಸ್ಮಾಯಿಲ್ ಅವರ ಸಹೋದರ ದುಬೈನಲ್ಲಿ ವ್ಯಾಪಾರ ವಹಿವಾಟು ಹೊಂದಿದ್ದು, ಇಸ್ಮಾಯಿಲ್ ವಿಸಿಟಿಂಗ್ ವೀಸಾ ಪಡೆದು ಸಹೋದರನ ಬಳಿ ತೆರಳಿದ್ದರು. ಇವರು ಊರಿಗೆ ವಾಪಸ್ಸಾಗುತ್ತಿದ್ದಾಗ ಮಾ.3 ರಂದು ಕೇರಳದ ಕ್ಯಾಲಿಕಟ್ ವಿಮಾನ ನಿಲ್ದಾಣಕ್ಕೆ ಬಂದಿದ್ದು, ಕಸ್ಟಮ್ಸ್ ಅಧಿಕಾರಿಗಳು ಇಸ್ಮಾಯಿಲ್ ಅವರನ್ನು ವಶಕ್ಕೆ ಪಡೆದಿದ್ದಾರೆ.
ಕೈಯಲ್ಲಿದ್ದ ಕೈಗಡಿಯಾರದ ಬಗ್ಗೆ ಸಂಶಯಗೊಂಡು ಅಧಿಕಾರಿಗಳು ವಶಕ್ಕೆ ಪಡೆದು ಅದನ್ನು ಒಡೆದು ಹಾಕಿದ್ದಾರೆ. ಗಡಿಯಾರದಲ್ಲಿ ಚಿನ್ನ ಇಲ್ಲದಿರುವುದನ್ನು ತಿಳಿದು ಪುಡಿಯಾದ ಗಡಿಯಾರವನ್ನು ಟ್ರೇನಲ್ಲಿ ಇಟ್ಟು ಇಸ್ಮಾಯಿಲ್ ಅವರಿಗೆ ಹಿಂದಿರುಗಿಸಿದ್ದಾರೆ. ಒಡೆದ ಗಡಿಯಾರ ಕಂಡು ಕಂಗಾಲಾದ ಇಸ್ಮಾಯಿಲ್, ತನ್ನ ಗಡಿಯಾರವನ್ನು ತನಗೆ ವಾಪಸ್ಸು ನೀಡುವಂತೆ ಪಟ್ಟು ಹಿಡಿದಿದ್ದಾರೆ. ಗಡಿಯಾರದ ಮೌಲ್ಯವನ್ನು ಕೇಳಿಸಿಕೊಂಡ ಕಸ್ಟಮ್ಸ್ ಅಧಿಕಾರಿಗಳೂ ತಬ್ಬಿಬ್ಬಾಗಿದ್ದಾರೆ. ಈ ಕುರಿತು ಇಸ್ಮಾಯಿಲ್ ಕ್ಯಾಲಿಕಟ್ ಪೊಲೀಸ್ ಠಾಣೆಯಲ್ಲಿ ಕಸ್ಟಮ್ಸ್ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಿದ್ದಾರೆ.

ಅರಬ್ ರಾಷ್ಟ್ರ ದುಬೈನಲ್ಲಿ ದುಬಾರಿ ಬೆಲೆಯ ಹಳೆಯ ಕೈ ಗಡಿಯಾರಗಳ ಮಾರಾಟ ಮಳಿಗೆಯೊಂದಿದೆ. ಆ ಮಳಿಗೆಯಲ್ಲಿ ಪ್ರಖ್ಯಾತ ಆಡಿಮೂವರ್ಸ್ ಪಿಗುಯೆಟ್ ಕಂಪೆನಿಯ ಸರಿಸುಮಾರು 60 ಲಕ್ಷ ರೂ. ಮೌಲ್ಯದ ಬಳಸಲಾದ ಕೈಗಡಿಯಾರವನ್ನು, ಇಸ್ಮಾಯಿಲ್ ಸಹೋದರ 48 ಲಕ್ಷ ರೂ. ನೀಡಿ 2017ರಲ್ಲಿ ಖರೀದಿಸಿದ್ದರು.
ಕೈಯಲ್ಲಿ ಕಟ್ಟಿಕೊಂಡು ಓಡಾಡಿದ್ದ ಆತ, ಕಳೆದ ತಿಂಗಳಷ್ಟೇ ದುಬೈಗೆ ಬಂದ ತನ್ನ ಸಹೋದರನಿಗೆ ನೀಡಿದ್ದರು. ದುಬಾರಿ ಬೆಲೆಯ ಕೈಗಡಿಯಾರದೊಂದಿಗೆ ಇಸ್ಮಾಯಿಲ್ ಭಾರತಕ್ಕೆ ವಾಪಸ್ಸಾಗಿದ್ದು, ಗಡಿಯಾರದ ಮೌಲ್ಯವರಿಯದ ಕಸ್ಟಮ್ಸ್ ಅಧಿಕಾರಿಗಳು ಅದನ್ನು ಒಡೆದು ಚಿನ್ನಕ್ಕಾಗಿ ತಲಾಶೆ ನಡೆಸಿದ್ದಾರೆ.
Custom officers of Kerala break 60 lakhs worth watch of a Bhatkal Man suspecting that the person was carrying God inside the Watch.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 04:56 pm
HK News Desk
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
31-01-26 03:38 pm
Mangalore Correspondent
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm