ಬ್ರೇಕಿಂಗ್ ನ್ಯೂಸ್
07-03-21 10:07 pm Headline Karnataka News Network ಕರ್ನಾಟಕ
ಭಟ್ಕಳ, ಮಾ.7 : ಕೈಗೆ ಕಟ್ಟಿದ್ದ ವಾಚ್ ನಲ್ಲಿ ಚಿನ್ನ ಅಡಗಿಸಿಟ್ಟಿದ್ದಾನೆಂದು ನಂಬಿ ಭಟ್ಕಳ ಮೂಲದ ವ್ಯಕ್ತಿಯನ್ನು ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು, ಆತನ ದುಬಾರಿ ಬೆಲೆಯ ಕೈಗಡಿಯಾರವನ್ನು ಪುಡಿಗಟ್ಟಿ ಚಿನ್ನಕ್ಕಾಗಿ ಹುಡುಕಾಡಿದ ಘಟನೆ ಕೇರಳದ ಕ್ಯಾಲಿಕಟ್ನಲ್ಲಿ ನಡೆದಿದೆ.
ಭಟ್ಕಳ ಕಾರಗದ್ದೆ ನಿವಾಸಿ ಮಹ್ಮದ್ ಇಸ್ಮಾಯಿಲ್ ಅವರ ಸಹೋದರ ದುಬೈನಲ್ಲಿ ವ್ಯಾಪಾರ ವಹಿವಾಟು ಹೊಂದಿದ್ದು, ಇಸ್ಮಾಯಿಲ್ ವಿಸಿಟಿಂಗ್ ವೀಸಾ ಪಡೆದು ಸಹೋದರನ ಬಳಿ ತೆರಳಿದ್ದರು. ಇವರು ಊರಿಗೆ ವಾಪಸ್ಸಾಗುತ್ತಿದ್ದಾಗ ಮಾ.3 ರಂದು ಕೇರಳದ ಕ್ಯಾಲಿಕಟ್ ವಿಮಾನ ನಿಲ್ದಾಣಕ್ಕೆ ಬಂದಿದ್ದು, ಕಸ್ಟಮ್ಸ್ ಅಧಿಕಾರಿಗಳು ಇಸ್ಮಾಯಿಲ್ ಅವರನ್ನು ವಶಕ್ಕೆ ಪಡೆದಿದ್ದಾರೆ.
ಕೈಯಲ್ಲಿದ್ದ ಕೈಗಡಿಯಾರದ ಬಗ್ಗೆ ಸಂಶಯಗೊಂಡು ಅಧಿಕಾರಿಗಳು ವಶಕ್ಕೆ ಪಡೆದು ಅದನ್ನು ಒಡೆದು ಹಾಕಿದ್ದಾರೆ. ಗಡಿಯಾರದಲ್ಲಿ ಚಿನ್ನ ಇಲ್ಲದಿರುವುದನ್ನು ತಿಳಿದು ಪುಡಿಯಾದ ಗಡಿಯಾರವನ್ನು ಟ್ರೇನಲ್ಲಿ ಇಟ್ಟು ಇಸ್ಮಾಯಿಲ್ ಅವರಿಗೆ ಹಿಂದಿರುಗಿಸಿದ್ದಾರೆ. ಒಡೆದ ಗಡಿಯಾರ ಕಂಡು ಕಂಗಾಲಾದ ಇಸ್ಮಾಯಿಲ್, ತನ್ನ ಗಡಿಯಾರವನ್ನು ತನಗೆ ವಾಪಸ್ಸು ನೀಡುವಂತೆ ಪಟ್ಟು ಹಿಡಿದಿದ್ದಾರೆ. ಗಡಿಯಾರದ ಮೌಲ್ಯವನ್ನು ಕೇಳಿಸಿಕೊಂಡ ಕಸ್ಟಮ್ಸ್ ಅಧಿಕಾರಿಗಳೂ ತಬ್ಬಿಬ್ಬಾಗಿದ್ದಾರೆ. ಈ ಕುರಿತು ಇಸ್ಮಾಯಿಲ್ ಕ್ಯಾಲಿಕಟ್ ಪೊಲೀಸ್ ಠಾಣೆಯಲ್ಲಿ ಕಸ್ಟಮ್ಸ್ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಿದ್ದಾರೆ.

ಅರಬ್ ರಾಷ್ಟ್ರ ದುಬೈನಲ್ಲಿ ದುಬಾರಿ ಬೆಲೆಯ ಹಳೆಯ ಕೈ ಗಡಿಯಾರಗಳ ಮಾರಾಟ ಮಳಿಗೆಯೊಂದಿದೆ. ಆ ಮಳಿಗೆಯಲ್ಲಿ ಪ್ರಖ್ಯಾತ ಆಡಿಮೂವರ್ಸ್ ಪಿಗುಯೆಟ್ ಕಂಪೆನಿಯ ಸರಿಸುಮಾರು 60 ಲಕ್ಷ ರೂ. ಮೌಲ್ಯದ ಬಳಸಲಾದ ಕೈಗಡಿಯಾರವನ್ನು, ಇಸ್ಮಾಯಿಲ್ ಸಹೋದರ 48 ಲಕ್ಷ ರೂ. ನೀಡಿ 2017ರಲ್ಲಿ ಖರೀದಿಸಿದ್ದರು.
ಕೈಯಲ್ಲಿ ಕಟ್ಟಿಕೊಂಡು ಓಡಾಡಿದ್ದ ಆತ, ಕಳೆದ ತಿಂಗಳಷ್ಟೇ ದುಬೈಗೆ ಬಂದ ತನ್ನ ಸಹೋದರನಿಗೆ ನೀಡಿದ್ದರು. ದುಬಾರಿ ಬೆಲೆಯ ಕೈಗಡಿಯಾರದೊಂದಿಗೆ ಇಸ್ಮಾಯಿಲ್ ಭಾರತಕ್ಕೆ ವಾಪಸ್ಸಾಗಿದ್ದು, ಗಡಿಯಾರದ ಮೌಲ್ಯವರಿಯದ ಕಸ್ಟಮ್ಸ್ ಅಧಿಕಾರಿಗಳು ಅದನ್ನು ಒಡೆದು ಚಿನ್ನಕ್ಕಾಗಿ ತಲಾಶೆ ನಡೆಸಿದ್ದಾರೆ.
Custom officers of Kerala break 60 lakhs worth watch of a Bhatkal Man suspecting that the person was carrying God inside the Watch.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm