ಬ್ರೇಕಿಂಗ್ ನ್ಯೂಸ್
07-03-21 10:07 pm Headline Karnataka News Network ಕರ್ನಾಟಕ
ಭಟ್ಕಳ, ಮಾ.7 : ಕೈಗೆ ಕಟ್ಟಿದ್ದ ವಾಚ್ ನಲ್ಲಿ ಚಿನ್ನ ಅಡಗಿಸಿಟ್ಟಿದ್ದಾನೆಂದು ನಂಬಿ ಭಟ್ಕಳ ಮೂಲದ ವ್ಯಕ್ತಿಯನ್ನು ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು, ಆತನ ದುಬಾರಿ ಬೆಲೆಯ ಕೈಗಡಿಯಾರವನ್ನು ಪುಡಿಗಟ್ಟಿ ಚಿನ್ನಕ್ಕಾಗಿ ಹುಡುಕಾಡಿದ ಘಟನೆ ಕೇರಳದ ಕ್ಯಾಲಿಕಟ್ನಲ್ಲಿ ನಡೆದಿದೆ.
ಭಟ್ಕಳ ಕಾರಗದ್ದೆ ನಿವಾಸಿ ಮಹ್ಮದ್ ಇಸ್ಮಾಯಿಲ್ ಅವರ ಸಹೋದರ ದುಬೈನಲ್ಲಿ ವ್ಯಾಪಾರ ವಹಿವಾಟು ಹೊಂದಿದ್ದು, ಇಸ್ಮಾಯಿಲ್ ವಿಸಿಟಿಂಗ್ ವೀಸಾ ಪಡೆದು ಸಹೋದರನ ಬಳಿ ತೆರಳಿದ್ದರು. ಇವರು ಊರಿಗೆ ವಾಪಸ್ಸಾಗುತ್ತಿದ್ದಾಗ ಮಾ.3 ರಂದು ಕೇರಳದ ಕ್ಯಾಲಿಕಟ್ ವಿಮಾನ ನಿಲ್ದಾಣಕ್ಕೆ ಬಂದಿದ್ದು, ಕಸ್ಟಮ್ಸ್ ಅಧಿಕಾರಿಗಳು ಇಸ್ಮಾಯಿಲ್ ಅವರನ್ನು ವಶಕ್ಕೆ ಪಡೆದಿದ್ದಾರೆ.
ಕೈಯಲ್ಲಿದ್ದ ಕೈಗಡಿಯಾರದ ಬಗ್ಗೆ ಸಂಶಯಗೊಂಡು ಅಧಿಕಾರಿಗಳು ವಶಕ್ಕೆ ಪಡೆದು ಅದನ್ನು ಒಡೆದು ಹಾಕಿದ್ದಾರೆ. ಗಡಿಯಾರದಲ್ಲಿ ಚಿನ್ನ ಇಲ್ಲದಿರುವುದನ್ನು ತಿಳಿದು ಪುಡಿಯಾದ ಗಡಿಯಾರವನ್ನು ಟ್ರೇನಲ್ಲಿ ಇಟ್ಟು ಇಸ್ಮಾಯಿಲ್ ಅವರಿಗೆ ಹಿಂದಿರುಗಿಸಿದ್ದಾರೆ. ಒಡೆದ ಗಡಿಯಾರ ಕಂಡು ಕಂಗಾಲಾದ ಇಸ್ಮಾಯಿಲ್, ತನ್ನ ಗಡಿಯಾರವನ್ನು ತನಗೆ ವಾಪಸ್ಸು ನೀಡುವಂತೆ ಪಟ್ಟು ಹಿಡಿದಿದ್ದಾರೆ. ಗಡಿಯಾರದ ಮೌಲ್ಯವನ್ನು ಕೇಳಿಸಿಕೊಂಡ ಕಸ್ಟಮ್ಸ್ ಅಧಿಕಾರಿಗಳೂ ತಬ್ಬಿಬ್ಬಾಗಿದ್ದಾರೆ. ಈ ಕುರಿತು ಇಸ್ಮಾಯಿಲ್ ಕ್ಯಾಲಿಕಟ್ ಪೊಲೀಸ್ ಠಾಣೆಯಲ್ಲಿ ಕಸ್ಟಮ್ಸ್ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಿದ್ದಾರೆ.

ಅರಬ್ ರಾಷ್ಟ್ರ ದುಬೈನಲ್ಲಿ ದುಬಾರಿ ಬೆಲೆಯ ಹಳೆಯ ಕೈ ಗಡಿಯಾರಗಳ ಮಾರಾಟ ಮಳಿಗೆಯೊಂದಿದೆ. ಆ ಮಳಿಗೆಯಲ್ಲಿ ಪ್ರಖ್ಯಾತ ಆಡಿಮೂವರ್ಸ್ ಪಿಗುಯೆಟ್ ಕಂಪೆನಿಯ ಸರಿಸುಮಾರು 60 ಲಕ್ಷ ರೂ. ಮೌಲ್ಯದ ಬಳಸಲಾದ ಕೈಗಡಿಯಾರವನ್ನು, ಇಸ್ಮಾಯಿಲ್ ಸಹೋದರ 48 ಲಕ್ಷ ರೂ. ನೀಡಿ 2017ರಲ್ಲಿ ಖರೀದಿಸಿದ್ದರು.
ಕೈಯಲ್ಲಿ ಕಟ್ಟಿಕೊಂಡು ಓಡಾಡಿದ್ದ ಆತ, ಕಳೆದ ತಿಂಗಳಷ್ಟೇ ದುಬೈಗೆ ಬಂದ ತನ್ನ ಸಹೋದರನಿಗೆ ನೀಡಿದ್ದರು. ದುಬಾರಿ ಬೆಲೆಯ ಕೈಗಡಿಯಾರದೊಂದಿಗೆ ಇಸ್ಮಾಯಿಲ್ ಭಾರತಕ್ಕೆ ವಾಪಸ್ಸಾಗಿದ್ದು, ಗಡಿಯಾರದ ಮೌಲ್ಯವರಿಯದ ಕಸ್ಟಮ್ಸ್ ಅಧಿಕಾರಿಗಳು ಅದನ್ನು ಒಡೆದು ಚಿನ್ನಕ್ಕಾಗಿ ತಲಾಶೆ ನಡೆಸಿದ್ದಾರೆ.
Custom officers of Kerala break 60 lakhs worth watch of a Bhatkal Man suspecting that the person was carrying God inside the Watch.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm