ಬ್ರೇಕಿಂಗ್ ನ್ಯೂಸ್
08-03-21 05:12 pm Headline Karnataka News Network ಕರ್ನಾಟಕ
ಉಡುಪಿ, ಮಾ.8: ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪೋಕ್ಸೋ ಪ್ರಕರಣ ಒಂದರಲ್ಲಿ ಆರೋಪಿ, ಪತ್ರಕರ್ತನ ಸೋಗಿನಲ್ಲಿದ್ದ ಚಂದ್ರ ಕೆ. ಹೆಮ್ಮಾಡಿಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ ವ್ಯಾಪ್ತಿಯ ಪೋಕ್ಸೋ ವಿಶೇಷ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಚಂದ್ರ ಕೆ.ಹೆಮ್ಮಾಡಿ ತಾನು ವರದಿಗಾರನೆಂದು ಹೇಳಿಕೊಂಡು ಬೈಂದೂರು ಭಾಗದ ಗ್ರಾಮೀಣ ಪ್ರದೇಶಕ್ಕೆ ತೆರಳಿ, ಅಲ್ಲಿನ ಬಾಲಕನೊಬ್ಬನಿಗೆ ಪ್ರಾಣಿ, ಪಕ್ಷಿ, ಶಾಲಾ ಕಟ್ಟಡದ ಛಾಯಾಚಿತ್ರ ತೆಗೆಯಲು ತನ್ನ ಜೊತೆ ಬರುವಂತೆ ಪುಸಲಾಯಿಸಿ ಕಾಡಿಗೆ ಕರೆದೊಯ್ದು ಆತನ ಮೇಲೆ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಎಸಗಿದ್ದನು. ಈ ಬಗ್ಗೆ ಬೈಂದೂರು ಠಾಣೆಗೆ ನೀಡಿದ ದೂರಿನಂತೆ 2018 ನವೆಂಬರ್ ತಿಂಗಳಿನಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
ಆಬಳಿಕ ಆರೋಪಿ ವಿರುದ್ಧ ಇದೇ ರೀತಿಯ ಪ್ರಕರಣ ಬೆಳಕಿಗೆ ಬಂದಿದ್ದು ಬಾಲಕರ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆರೋಪಿ ವಿರುದ್ಧ ಸರದಿಯಂತೆ ಪೋಕ್ಸೋ ಕಾಯ್ದೆಯಡಿ ಬೈಂದೂರು, ಕೊಲ್ಲೂರು ಸಹಿತ ವಿವಿಧ ಠಾಣೆಗಳಲ್ಲಿ 21 ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು.
ಮೊದಲ ಪ್ರಕರಣದಲ್ಲಿ ಅಂದಿನ ಬೈಂದೂರು ಸಿಪಿಐ ಪರಮೇಶ್ವರ್ ಆರ್. ಗುನಗಾ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದು 36 ಸಾಕ್ಷಿಗಳಲ್ಲಿ ಸಂತ್ರಸ್ತ ಬಾಲಕನ ಸಹಿತ 15 ಮಂದಿ ಸಾಕ್ಷಿ ನುಡಿದಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶೆ ಯಾದವ್ ವನಮಾಲಾ ಆನಂದರಾವ್, ಆರೋಪಿಗೆ ಮೊದಲ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ, 10 ಸಾವಿರ ರೂ. ದಂಡ ವಿಧಿಸಿದೆ. ದಂಡದಲ್ಲಿ 5 ಸಾವಿರ ಸರಕಾರಕ್ಕೆ, 5 ಸಾವಿರ ನೊಂದ ಬಾಲಕನಿಗೆ ನೀಡಲು ಆದೇಶ ನೀಡಲಾಗಿದೆ.
ಉಡುಪಿಯ ಪೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ ರಾಘವೇಂದ್ರ ಅವರು ಪ್ರಾಸಿಕ್ಯೂಶನ್ ಪರ ವಾದ ಮಂಡಿಸಿದ್ದರು.
A Man who was reportedly calling himself an Journalsit in Udupi has been ordered bh the court for 10 years imprisonment for sexually harrsing boys by taking him to an isolated area.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 04:56 pm
HK News Desk
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
31-01-26 03:38 pm
Mangalore Correspondent
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm