ಬ್ರೇಕಿಂಗ್ ನ್ಯೂಸ್
09-03-21 10:56 am Headline Karnataka News Network ಕರ್ನಾಟಕ
ಬೆಂಗಳೂರು, ಮಾ.9: ಸಿಡಿ ಪ್ರಕರಣದಿಂದ ಬೆಚ್ಚಿಬಿದ್ದಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೊನೆಗೂ ಮೌನ ಮುರಿದಿದ್ದಾರೆ. ಸಿಡಿ ಪೂರ್ತಿ. ನನಗೂ ಅದಕ್ಕೂ ಸಂಬಂಧ ಇಲ್ಲ. ನನ್ನ ಹೆಸರು ಕೆಡಿಸಲು ಷಡ್ಯಂತ್ರ ನಡೆದಿದೆ. ಹಾಗಂತ, ನಾನು ಇದನ್ನು ಇಲ್ಲಿಗೇ ಬಿಡಲ್ಲ. ಇದರ ಹಿಂದೆ ಇರೋ ದೊಡ್ಡ ನಾಯಕರನ್ನು ಬಯಲಿಗೆ ತರುತ್ತೇನೆ ಎಂದು ಸವಾಲು ಹಾಕಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಮೇಶ್ ಜಾರಕಿಹೊಳಿ ‘ನನ್ನ ಪರವಾಗಿ ನಿಂತ ಎಲ್ಲರಿಗು ವಂದನೆಗಳು. ಮಾನಸಿಕವಾಗಿ ಧೈರ್ಯ ತುಂಬಿದ ಸಿಎಂ ಬಿಎಸ್ ಯಡಿಯೂರಪ್ಪ, ಮಾಜಿ ಸಿಎಂ ಕುಮಾರಸ್ವಾಮಿಗೆ ನನ್ನ ವಂದನೆಗಳು. ನೂರಕ್ಕೆ ನೂರರಷ್ಟು ಈ CD ನಕಲಿ. ನಾನು ನಿರಪರಾಧಿ, ಎಂದು ಹೇಳಿದ್ದಾರೆ.

ಬೆಂಗಳೂರಿನ ಎರಡು ಕಡೆ ಷಡ್ಯಂತ್ರ ನಡೆದಿದೆ. ಸಿಡಿ ಬಿಡುಗಡೆಯಾದ ಒಂದು ದಿನ ರಾತ್ರಿ ಕಾದು ನಂತರ ರಾಜೀನಾಮೆ ನೀಡಿದೆ. ಏನೇನು ಆಗುತ್ತೆ ಎಂದು ತಿಳಿಯೋಣ ಎಂದು ಸುಮ್ಮನಿದ್ದೆ. ನಾನು ರಾಜೀನಾಮೆ ಕೊಟ್ಟು ನೇರವಾಗಿ ಊರಿಗೆ ಹೋಗಿದ್ದೆ. ನಂತರ ಏನು ಬೆಳವಣಿಗೆ ನಡೆದಿದೆ ಎಂದು ನನಗೆ ಗೊತ್ತಿಲ್ಲ. ಒಬ್ಬ ಮಹಾನ್ ನಾಯಕನಿಂದ ಇದೆಲ್ಲಾ ಆಗಿದೆ. ಅವರ ಬಗ್ಗೆ ಈಗ ಹೇಳುವುದಕ್ಕೆ ಆಗುವುದಿಲ್ಲ. ಇದೊಂದು ಬಹಳ ಸೂಕ್ಷ್ಮ ವಿಚಾರವಾಗಿದೆ. ಇದನ್ನು ರಾಜಕೀಯ ಮಾಡುವುದಕ್ಕೆ ಹೋಗಬಾರದು. ಯಶವಂತಪುರ, ಹುಳಿಮಾವು ಸೇರಿ ಬೆಂಗಳೂರಿನ 2 ಕಡೆ ಷಡ್ಯಂತ್ರ ನಡೆದಿದೆ. ಯಶವಂತಪುರದ 4, 5ನೇ ಮಹಡಿಯಲ್ಲಿ ಷಡ್ಯಂತ್ರ ನಡೆದಿದೆ. ಅವರನ್ನು ಜೈಲಿಗೆ ಹಾಕದೆ ಸುಮ್ಮನೆ ಬಿಡುವುದಿಲ್ಲ. ನಾನು ಸುಮ್ಮನೆ ಇದರಲ್ಲಿ ರಾಜಕೀಯ ಮಾಡಲು ಹೋಗಲ್ಲ. ಮುಂದಿನ ದಿನಗಳಲ್ಲಿ ಎಲ್ಲ ವಿಷಯಗಳನ್ನು ಹೇಳುತ್ತೇನೆ ಎಂದರು.

ಯುವತಿಗೆ 50 ಲಕ್ಷವಲ್ಲ, 5 ಕೋಟಿ ನೀಡಿರುವ ಮಾಹಿತಿ ಇದೆ. ನನಗೆ ಎಲ್ಲ ಪಕ್ಷದವರ ಮೇಲೆ ಗೌರವ ಇದೆ. ನನಗೆ ರಾಜಕಾರಣ ಬೇಕಿಲ್ಲ, ಕುಟುಂಬದ ಗೌರವ ಮುಖ್ಯ. ನಾವು ಈವರೆಗೆ ಯಾರ ವಿರುದ್ಧವೂ ಆರೋಪ ಮಾಡಿಲ್ಲ. ಹೆಚ್.ಡಿ.ಕುಮಾರಸ್ವಾಮಿ ನನ್ನ ಪರವಾಗಿ ಮಾತನಾಡಿದ್ದಾರೆ. ಮೊದಲು ಹೆಚ್.ಡಿ.ಕುಮಾರಸ್ವಾಮಿ, ರೇವಣ್ಣ ಮಾತನಾಡಿದ್ದರು. ಸಿಡಿಯಲ್ಲಿದ್ದ ಯುವತಿಗೆ 50 ಲಕ್ಷವಲ್ಲ, 5 ಕೋಟಿ ನೀಡಿರುವ ಮಾಹಿತಿ ಇದೆ. ಇದರ ವಿರುದ್ಧ ನಾನೇಕೆ ದೂರು ನೀಡುವುದಕ್ಕೆ ಹೋಗಲಿ. ಆರೋಪವನ್ನು ನಾನು ಧೈರ್ಯವಾಗಿ ಎದುರಿಸುತ್ತೇನೆ. ನನ್ನ ವಿರೋಧಿಗಳಿಗೆ ಇದೊಂದು ದೊಡ್ಡ ಅಸ್ತ್ರವಾಗಿದೆ. ಇಂತಹವು 10 ದೂರು ಬಂದರೂ ನಾನು ಎದುರಿಸಲು ಸಿದ್ಧನಿದ್ದೇನೆ. ನನಗೆ ಖಾತೆ ಬೇಕೆಂದು ನಾನು ಕೇಳುವುದಕ್ಕೆ ಹೋಗಲ್ಲ. ನನಗೆ ನನ್ನ ಕುಟುಂಬದ ಗೌರವವೇ ಮುಖ್ಯ ಎಂದು ರಮೇಶ್ ಜಾರಕಿಹೊಳಿ ಗುಡುಗಿದ್ದಾರೆ. ಇದೇ ವೇಳೆ, ಸಿಡಿಯಲ್ಲಿರೋದು ನಾನಲ್ಲ ಎಂಬ ಮಾತನ್ನು ಪುನರುಚ್ಚರಿಸಿದ್ದಾರೆ.
Former BJP minister Ramesh Jarkiholi briefs media in Bangalore about his sex video release. He has claimed that he is innocent and the sex CD was a conspiracy against him.
20-06-26 01:33 pm
HK News Staffer
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm