ಬ್ರೇಕಿಂಗ್ ನ್ಯೂಸ್
09-03-21 10:56 am Headline Karnataka News Network ಕರ್ನಾಟಕ
ಬೆಂಗಳೂರು, ಮಾ.9: ಸಿಡಿ ಪ್ರಕರಣದಿಂದ ಬೆಚ್ಚಿಬಿದ್ದಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೊನೆಗೂ ಮೌನ ಮುರಿದಿದ್ದಾರೆ. ಸಿಡಿ ಪೂರ್ತಿ. ನನಗೂ ಅದಕ್ಕೂ ಸಂಬಂಧ ಇಲ್ಲ. ನನ್ನ ಹೆಸರು ಕೆಡಿಸಲು ಷಡ್ಯಂತ್ರ ನಡೆದಿದೆ. ಹಾಗಂತ, ನಾನು ಇದನ್ನು ಇಲ್ಲಿಗೇ ಬಿಡಲ್ಲ. ಇದರ ಹಿಂದೆ ಇರೋ ದೊಡ್ಡ ನಾಯಕರನ್ನು ಬಯಲಿಗೆ ತರುತ್ತೇನೆ ಎಂದು ಸವಾಲು ಹಾಕಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಮೇಶ್ ಜಾರಕಿಹೊಳಿ ‘ನನ್ನ ಪರವಾಗಿ ನಿಂತ ಎಲ್ಲರಿಗು ವಂದನೆಗಳು. ಮಾನಸಿಕವಾಗಿ ಧೈರ್ಯ ತುಂಬಿದ ಸಿಎಂ ಬಿಎಸ್ ಯಡಿಯೂರಪ್ಪ, ಮಾಜಿ ಸಿಎಂ ಕುಮಾರಸ್ವಾಮಿಗೆ ನನ್ನ ವಂದನೆಗಳು. ನೂರಕ್ಕೆ ನೂರರಷ್ಟು ಈ CD ನಕಲಿ. ನಾನು ನಿರಪರಾಧಿ, ಎಂದು ಹೇಳಿದ್ದಾರೆ.

ಬೆಂಗಳೂರಿನ ಎರಡು ಕಡೆ ಷಡ್ಯಂತ್ರ ನಡೆದಿದೆ. ಸಿಡಿ ಬಿಡುಗಡೆಯಾದ ಒಂದು ದಿನ ರಾತ್ರಿ ಕಾದು ನಂತರ ರಾಜೀನಾಮೆ ನೀಡಿದೆ. ಏನೇನು ಆಗುತ್ತೆ ಎಂದು ತಿಳಿಯೋಣ ಎಂದು ಸುಮ್ಮನಿದ್ದೆ. ನಾನು ರಾಜೀನಾಮೆ ಕೊಟ್ಟು ನೇರವಾಗಿ ಊರಿಗೆ ಹೋಗಿದ್ದೆ. ನಂತರ ಏನು ಬೆಳವಣಿಗೆ ನಡೆದಿದೆ ಎಂದು ನನಗೆ ಗೊತ್ತಿಲ್ಲ. ಒಬ್ಬ ಮಹಾನ್ ನಾಯಕನಿಂದ ಇದೆಲ್ಲಾ ಆಗಿದೆ. ಅವರ ಬಗ್ಗೆ ಈಗ ಹೇಳುವುದಕ್ಕೆ ಆಗುವುದಿಲ್ಲ. ಇದೊಂದು ಬಹಳ ಸೂಕ್ಷ್ಮ ವಿಚಾರವಾಗಿದೆ. ಇದನ್ನು ರಾಜಕೀಯ ಮಾಡುವುದಕ್ಕೆ ಹೋಗಬಾರದು. ಯಶವಂತಪುರ, ಹುಳಿಮಾವು ಸೇರಿ ಬೆಂಗಳೂರಿನ 2 ಕಡೆ ಷಡ್ಯಂತ್ರ ನಡೆದಿದೆ. ಯಶವಂತಪುರದ 4, 5ನೇ ಮಹಡಿಯಲ್ಲಿ ಷಡ್ಯಂತ್ರ ನಡೆದಿದೆ. ಅವರನ್ನು ಜೈಲಿಗೆ ಹಾಕದೆ ಸುಮ್ಮನೆ ಬಿಡುವುದಿಲ್ಲ. ನಾನು ಸುಮ್ಮನೆ ಇದರಲ್ಲಿ ರಾಜಕೀಯ ಮಾಡಲು ಹೋಗಲ್ಲ. ಮುಂದಿನ ದಿನಗಳಲ್ಲಿ ಎಲ್ಲ ವಿಷಯಗಳನ್ನು ಹೇಳುತ್ತೇನೆ ಎಂದರು.

ಯುವತಿಗೆ 50 ಲಕ್ಷವಲ್ಲ, 5 ಕೋಟಿ ನೀಡಿರುವ ಮಾಹಿತಿ ಇದೆ. ನನಗೆ ಎಲ್ಲ ಪಕ್ಷದವರ ಮೇಲೆ ಗೌರವ ಇದೆ. ನನಗೆ ರಾಜಕಾರಣ ಬೇಕಿಲ್ಲ, ಕುಟುಂಬದ ಗೌರವ ಮುಖ್ಯ. ನಾವು ಈವರೆಗೆ ಯಾರ ವಿರುದ್ಧವೂ ಆರೋಪ ಮಾಡಿಲ್ಲ. ಹೆಚ್.ಡಿ.ಕುಮಾರಸ್ವಾಮಿ ನನ್ನ ಪರವಾಗಿ ಮಾತನಾಡಿದ್ದಾರೆ. ಮೊದಲು ಹೆಚ್.ಡಿ.ಕುಮಾರಸ್ವಾಮಿ, ರೇವಣ್ಣ ಮಾತನಾಡಿದ್ದರು. ಸಿಡಿಯಲ್ಲಿದ್ದ ಯುವತಿಗೆ 50 ಲಕ್ಷವಲ್ಲ, 5 ಕೋಟಿ ನೀಡಿರುವ ಮಾಹಿತಿ ಇದೆ. ಇದರ ವಿರುದ್ಧ ನಾನೇಕೆ ದೂರು ನೀಡುವುದಕ್ಕೆ ಹೋಗಲಿ. ಆರೋಪವನ್ನು ನಾನು ಧೈರ್ಯವಾಗಿ ಎದುರಿಸುತ್ತೇನೆ. ನನ್ನ ವಿರೋಧಿಗಳಿಗೆ ಇದೊಂದು ದೊಡ್ಡ ಅಸ್ತ್ರವಾಗಿದೆ. ಇಂತಹವು 10 ದೂರು ಬಂದರೂ ನಾನು ಎದುರಿಸಲು ಸಿದ್ಧನಿದ್ದೇನೆ. ನನಗೆ ಖಾತೆ ಬೇಕೆಂದು ನಾನು ಕೇಳುವುದಕ್ಕೆ ಹೋಗಲ್ಲ. ನನಗೆ ನನ್ನ ಕುಟುಂಬದ ಗೌರವವೇ ಮುಖ್ಯ ಎಂದು ರಮೇಶ್ ಜಾರಕಿಹೊಳಿ ಗುಡುಗಿದ್ದಾರೆ. ಇದೇ ವೇಳೆ, ಸಿಡಿಯಲ್ಲಿರೋದು ನಾನಲ್ಲ ಎಂಬ ಮಾತನ್ನು ಪುನರುಚ್ಚರಿಸಿದ್ದಾರೆ.
Former BJP minister Ramesh Jarkiholi briefs media in Bangalore about his sex video release. He has claimed that he is innocent and the sex CD was a conspiracy against him.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm