ಬ್ರೇಕಿಂಗ್ ನ್ಯೂಸ್
19-08-20 09:22 pm Headline Karnataka News Network ಕರ್ನಾಟಕ
ಶಿವಮೊಗ್ಗ , ಆಗಸ್ಟ್ 19: ಕಾಂಗ್ರೆಸ್ಸಿನ ವಿಧಾನ ಪರಿಷತ್ ಸದಸ್ಯ ರಘು ಆಚಾರ್, ಗೌರಿಗದ್ದೆ ಆಶ್ರಮದ ವಿನಯ್ ಗುರೂಜಿ ವಿರುದ್ದ ಗಂಭೀರ ಆರೋಪ ಮಾಡಿದ್ದಾರೆ. ಪ್ರಸಾದವೆಂದು ಎಂಜಲು ತಿನ್ನಿಸಿದರು ಎಂದು ಆಚಾರ್ ಆರೋಪ ಮಾಡಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ರಘು ಆಚಾರ್ ಬರೆದುಕೊಂಡಿರುವ ಪೋಸ್ಟಿನ ಯಥಾವತ್ ಕಾಪಿ ಹೀಗಿದೆ: "ಇಷ್ಟಕ್ಕೂ ಇಂತಹದೊಂದು ಬಹಿರಂಗ ಭಿನ್ನಹ ಬರೆಯಲು ಪ್ರಚೋದಿಸಿದ್ದು ಸೋಮವಾರ ಶಿವಮೊಗ್ಗದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನಿಮ್ಮ ಹಾಗೂ ನಿಮ್ಮ ಶಿಷ್ಯರ ನಡವಳಿಕೆ. ಭೂತ ಭವಿಷ್ಯ ಬಲ್ಲ ನಿಮಗೆ ಗೊತ್ತಿರುವಂತೆಯೇ ಇಡೀ ಜಗತ್ತನ್ನು ಇಂದು ಕೊರೊನಾ ಎಂಬ ಮಹಾಮಾರಿ ಬೆಂಬಿಡದೆ ಕಾಡುತ್ತಿದೆ". "ಇಂತಹ ಮಹಾಮಾರಿಯಿಂದ ವೈಯಕ್ತಿಕವಾಗಿ ನಮ್ಮನ್ನು ಹಾಗೂ ನಮ್ಮ ಸುತ್ತಮುತ್ತಲೂ ಇರುವವರನ್ನು ರಕ್ಷಿಸಲು ವಿಶ್ವ ಆರೋಗ್ಯ ಸಂಸ್ಥೆ ಹಾಗೂ ನಮ್ಮ ದೇಶದ ಸರ್ಕಾರಗಳು ಕೆಲವೊಂದು ಸಾರ್ವಜನಿಕ ನಡವಳಿಕೆಯನ್ನು ನಿಯಮದಂತೆ ವಿಧಿಸಿವೆ".

ನೀವು ಮಾಸ್ಕ್ ತೊಡದೆ ಎಲ್ಲರೊಂದಿಗೆ ಆತ್ಮೀಯವಾಗಿ ವರ್ತಿಸುತ್ತಿದ್ದೀರಿ. ಆಶೀರ್ವಾದ ಮಾಡುತ್ತಿದ್ದೀರಿ. ಇನ್ನು ಮದುವೆಯ ಊಟ ಮಾಡಿದ ನಂತರ ತಾವು ತಿಂದುಂಡು ಬಿಟ್ಟ ಆಹಾರವನ್ನು ನಿಮ್ಮ ಶಿಷ್ಯರೂ ಎಲ್ಲರಿಗೂ ಪ್ರಸಾದ ಎಂದು ವಿತರಿಸಿ ಬಲವಂತವಾಗಿ ಎಂಜಲು ತಿನ್ನುವಂತೆ ಮಾಡಿದರು.
ಗೌರವ, ನಂಬಿಕೆ, ಭಕ್ತಿ ಇವೆಲ್ಲ ಇರಲಿ, ಇರಬೇಕು. ಒಪ್ಪುತ್ತೇನೆ. ಆದರೆ ಕೊರೊನಾನಾದಂತಹ ಮಾರಕ ಸನ್ನಿವೇಶದಲ್ಲಿ ಇಂತಹದೊಂದು ನಡವಳಿಕೆಯನ್ನು ನಿಮ್ಮ ಹಾಗೂ ನಿಮ್ಮ ಶಿಷ್ಯರಿಂದ ಕಂಡು ನನಗೆ ನಂಬಿಕೆಯೇ ಬರಲಿಲ್ಲ. ನಿಮ್ಮ ಶಿಷ್ಯರ ನಡವಳಿಕೆ ನಿಮ್ಮ ಗಮನಕ್ಕೆ ಬರದೆ ಈ ಅಚಾತುರ್ಯ ನಡೆಯುತ್ತಿರಬಹುದು ಎಂದು ಭಾವಿಸಿ ಈ ಬಗ್ಗೆ ವಿಚಾರಿಸಿದೆ.

ದಯಮಾಡಿ ಈ ವರ್ತನೆಯನ್ನು ಬದಲಾಯಿಸಿಕೊಳ್ಳಿ. ತನ್ಮೂಲಕ ನೀವು ಕೊಟ್ಟಿದ್ದನ್ನು ಪ್ರಸಾದ ಎಂದು ಭಾವಿಸುವ ಜನರ ಜೀವದೊಂದಿಗೆ ಚೆಲ್ಲಾಟ ಆಡುವುದನ್ನು ಇನ್ನಾದರೂ ನಿಲ್ಲಿಸುವಂತೆ ಕೋರುತ್ತೇನೆ. ಇಂತಿ ತಮ್ಮ ವಿಶ್ವಾಸಿ, ರಘು ಆಚಾರ್, ಸದಸ್ಯರು, ಕರ್ನಾಟಕ ವಿಧಾನ ಪರಿಷತ್ತು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm