ಬ್ರೇಕಿಂಗ್ ನ್ಯೂಸ್
19-08-20 09:22 pm Headline Karnataka News Network ಕರ್ನಾಟಕ
ಶಿವಮೊಗ್ಗ , ಆಗಸ್ಟ್ 19: ಕಾಂಗ್ರೆಸ್ಸಿನ ವಿಧಾನ ಪರಿಷತ್ ಸದಸ್ಯ ರಘು ಆಚಾರ್, ಗೌರಿಗದ್ದೆ ಆಶ್ರಮದ ವಿನಯ್ ಗುರೂಜಿ ವಿರುದ್ದ ಗಂಭೀರ ಆರೋಪ ಮಾಡಿದ್ದಾರೆ. ಪ್ರಸಾದವೆಂದು ಎಂಜಲು ತಿನ್ನಿಸಿದರು ಎಂದು ಆಚಾರ್ ಆರೋಪ ಮಾಡಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ರಘು ಆಚಾರ್ ಬರೆದುಕೊಂಡಿರುವ ಪೋಸ್ಟಿನ ಯಥಾವತ್ ಕಾಪಿ ಹೀಗಿದೆ: "ಇಷ್ಟಕ್ಕೂ ಇಂತಹದೊಂದು ಬಹಿರಂಗ ಭಿನ್ನಹ ಬರೆಯಲು ಪ್ರಚೋದಿಸಿದ್ದು ಸೋಮವಾರ ಶಿವಮೊಗ್ಗದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನಿಮ್ಮ ಹಾಗೂ ನಿಮ್ಮ ಶಿಷ್ಯರ ನಡವಳಿಕೆ. ಭೂತ ಭವಿಷ್ಯ ಬಲ್ಲ ನಿಮಗೆ ಗೊತ್ತಿರುವಂತೆಯೇ ಇಡೀ ಜಗತ್ತನ್ನು ಇಂದು ಕೊರೊನಾ ಎಂಬ ಮಹಾಮಾರಿ ಬೆಂಬಿಡದೆ ಕಾಡುತ್ತಿದೆ". "ಇಂತಹ ಮಹಾಮಾರಿಯಿಂದ ವೈಯಕ್ತಿಕವಾಗಿ ನಮ್ಮನ್ನು ಹಾಗೂ ನಮ್ಮ ಸುತ್ತಮುತ್ತಲೂ ಇರುವವರನ್ನು ರಕ್ಷಿಸಲು ವಿಶ್ವ ಆರೋಗ್ಯ ಸಂಸ್ಥೆ ಹಾಗೂ ನಮ್ಮ ದೇಶದ ಸರ್ಕಾರಗಳು ಕೆಲವೊಂದು ಸಾರ್ವಜನಿಕ ನಡವಳಿಕೆಯನ್ನು ನಿಯಮದಂತೆ ವಿಧಿಸಿವೆ".

ನೀವು ಮಾಸ್ಕ್ ತೊಡದೆ ಎಲ್ಲರೊಂದಿಗೆ ಆತ್ಮೀಯವಾಗಿ ವರ್ತಿಸುತ್ತಿದ್ದೀರಿ. ಆಶೀರ್ವಾದ ಮಾಡುತ್ತಿದ್ದೀರಿ. ಇನ್ನು ಮದುವೆಯ ಊಟ ಮಾಡಿದ ನಂತರ ತಾವು ತಿಂದುಂಡು ಬಿಟ್ಟ ಆಹಾರವನ್ನು ನಿಮ್ಮ ಶಿಷ್ಯರೂ ಎಲ್ಲರಿಗೂ ಪ್ರಸಾದ ಎಂದು ವಿತರಿಸಿ ಬಲವಂತವಾಗಿ ಎಂಜಲು ತಿನ್ನುವಂತೆ ಮಾಡಿದರು.
ಗೌರವ, ನಂಬಿಕೆ, ಭಕ್ತಿ ಇವೆಲ್ಲ ಇರಲಿ, ಇರಬೇಕು. ಒಪ್ಪುತ್ತೇನೆ. ಆದರೆ ಕೊರೊನಾನಾದಂತಹ ಮಾರಕ ಸನ್ನಿವೇಶದಲ್ಲಿ ಇಂತಹದೊಂದು ನಡವಳಿಕೆಯನ್ನು ನಿಮ್ಮ ಹಾಗೂ ನಿಮ್ಮ ಶಿಷ್ಯರಿಂದ ಕಂಡು ನನಗೆ ನಂಬಿಕೆಯೇ ಬರಲಿಲ್ಲ. ನಿಮ್ಮ ಶಿಷ್ಯರ ನಡವಳಿಕೆ ನಿಮ್ಮ ಗಮನಕ್ಕೆ ಬರದೆ ಈ ಅಚಾತುರ್ಯ ನಡೆಯುತ್ತಿರಬಹುದು ಎಂದು ಭಾವಿಸಿ ಈ ಬಗ್ಗೆ ವಿಚಾರಿಸಿದೆ.

ದಯಮಾಡಿ ಈ ವರ್ತನೆಯನ್ನು ಬದಲಾಯಿಸಿಕೊಳ್ಳಿ. ತನ್ಮೂಲಕ ನೀವು ಕೊಟ್ಟಿದ್ದನ್ನು ಪ್ರಸಾದ ಎಂದು ಭಾವಿಸುವ ಜನರ ಜೀವದೊಂದಿಗೆ ಚೆಲ್ಲಾಟ ಆಡುವುದನ್ನು ಇನ್ನಾದರೂ ನಿಲ್ಲಿಸುವಂತೆ ಕೋರುತ್ತೇನೆ. ಇಂತಿ ತಮ್ಮ ವಿಶ್ವಾಸಿ, ರಘು ಆಚಾರ್, ಸದಸ್ಯರು, ಕರ್ನಾಟಕ ವಿಧಾನ ಪರಿಷತ್ತು.
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm