ಬ್ರೇಕಿಂಗ್ ನ್ಯೂಸ್
10-03-21 02:15 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.10: ಮಾಜಿ ಸಚಿವ ರಮೇಶ್ ಜಾರಕಿಹೊಳಿಯ ಸಿಡಿ ಮಾಡಿದ್ದೇ ಕಾಂಗ್ರೆಸಿನವರು. ಇಂಥ ಮನೆಹಾಳು, ತೇಜೋವಧೆ ಕೆಲಸ ಮಾಡೋದು ಕಾಂಗ್ರೆಸಿನವರೇ. ನಾನು 20 ವರ್ಷ ಕಾಂಗ್ರೆಸಿನಲ್ಲೇ ಇದ್ದು, ಅಲ್ಲಿ ಇರೋರ ಬಗ್ಗೆ ಚೆನ್ನಾಗೇ ಗೊತ್ತು ಎಂದು ಸಚಿವ ಎಸ್.ಟಿ. ಸೋಮಶೇಖರ್ ಹರಿಹಾಯ್ದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಶೇಖರ್, ಸಿಡಿ ಪ್ರಕರಣದಲ್ಲಿ ತಮ್ಮ ಆಪ್ತ ರಮೇಶ್ ಜಾರಕಿಹೊಳಿ ಪರವಾಗಿ ಮಾತನಾಡಿದ್ದಾರೆ. ನೂರು ಶೇಕಡಾ ಹೇಳ್ತೀವಿ, ಇದು ಸಿಡಿ ಮಾಡಿದ್ದೇ ಕಾಂಗ್ರೆಸ್. ಇನ್ಯಾರು ಸಿಡಿ ಮಾಡುತ್ತಾರೆ. ಇದರ ಹಿಂದೆ ಕಾಂಗ್ರೆಸಿನದ್ದೇ ಕೈವಾಡ ಇದೆ. ಅದಕ್ಕಾಗಿ ಸಿಡಿ ಪ್ರಕರಣವನ್ನು ಸಿಬಿಐಗೆ ಕೊಡುವಂತೆ ಆಗ್ರಹಿಸುತ್ತೇವೆ. ಸಿಬಿಐ ತನಿಖೆ ನಡೆದರೆ, ಇದರ ಹಿಂದೆ ಯಾರಿದ್ದಾರೆ, ಯಾರೆಲ್ಲಾ ಕೈಯಾಡಿಸಿದ್ದಾರೆ, ಎಷ್ಟೆಲ್ಲಾ ಖರ್ಚಾಗಿದೆ, ಯಾರ್ಯಾರಿಗೆ ಸಂದಾಯ ಆಗಿದೆ ಇತ್ಯಾದಿ ವಿಷಯಗಳು ಹೊರಬರುತ್ತವೆ ಎಂದು ಹೇಳಿದರು.

ನಾವು ಕೂಡ ಕೋರ್ಟಿಗೆ ಹೋಗಿದ್ದು ಇದೇ ಕಾರಣಕ್ಕೆ. ಕಾಂಗ್ರೆಸಿನವರು ತೇಜೋವಧೆ ಮಾಡುತ್ತಾರೆಂದು ಕೋರ್ಟಿನಲ್ಲಿ ತಡೆಯಾಜ್ಞೆ ತಂದಿದ್ದೇವೆ. ನೈತಿಕತೆಯ ಪ್ರಶ್ನೆ ಬೇಡ. ಕಾಂಗ್ರೆಸಿನವರ ತಟ್ಟೆಯಲ್ಲಿ ಹೆಗ್ಗಣ ಇದೆ, ನಮ್ಮ ತಟ್ಟೆಯಲ್ಲೇನು ನೋಡೋದು ಅವ್ರು. ನಾವು ಆರು ಜನ ಕೋರ್ಟಲ್ಲಿ ಅರ್ಜಿ ಹಾಕಿದ್ದೆವು. ಅದರಲ್ಲೇನು ತಪ್ಪಿದೆ ಎಂದು ಪ್ರಶ್ನಿಸಿದ ಸೋಮಶೇಖರ್, ಉಳಿದವರು ಕೂಡ ಮರುದಿನ ಅರ್ಜಿ ಹಾಕುವರಿದ್ದರು. ಮಾಧ್ಯಮದಲ್ಲಿ ವಿಷ್ಯ ಬಂತೆಂದು ಕುಳಿತಿದ್ದಾರೆ. ನಮ್ಮನ್ನು ಸಚಿವ ಸ್ಥಾನದಿಂದ ಕೆಳಗಿಳಿಸಬೇಕು, ಡ್ಯಾಮೇಜ್ ಮಾಡಬೇಕೆಂದು ಸಂಚು ನಡೆಸಿದ್ದಾರೆ. ಸಿಡಿ ಬರುತ್ತೆ ಅಂತ ಕೋರ್ಟಿಗೆ ಹೋಗಿದ್ದಲ್ಲ ಎಂದು ಸ್ಪಷ್ಟನೆ ನೀಡಿದರು.
ಸಿದ್ದರಾಮಯ್ಯ ನಮ್ಮ ನೈತಿಕತೆ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಕುಮಾರಸ್ವಾಮಿ ಸರಕಾರ ಬಿದ್ದಿದ್ದೇ ಈ ನೈತಿಕತೆ ವಿಚಾರದಲ್ಲಿ. ನಾವು ಈ ಬಗ್ಗೆ ಸದನದಲ್ಲಿ ಉತ್ತರ ಕೊಡುತ್ತೇವೆ ಎಂದು ಹೇಳಿದರು.
Karnataka sex cd scandal Top congress leader has framed Ramesh Jarkiholi says minister S T Somashekhar in Bangalore.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm