ಬ್ರೇಕಿಂಗ್ ನ್ಯೂಸ್
10-03-21 02:15 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.10: ಮಾಜಿ ಸಚಿವ ರಮೇಶ್ ಜಾರಕಿಹೊಳಿಯ ಸಿಡಿ ಮಾಡಿದ್ದೇ ಕಾಂಗ್ರೆಸಿನವರು. ಇಂಥ ಮನೆಹಾಳು, ತೇಜೋವಧೆ ಕೆಲಸ ಮಾಡೋದು ಕಾಂಗ್ರೆಸಿನವರೇ. ನಾನು 20 ವರ್ಷ ಕಾಂಗ್ರೆಸಿನಲ್ಲೇ ಇದ್ದು, ಅಲ್ಲಿ ಇರೋರ ಬಗ್ಗೆ ಚೆನ್ನಾಗೇ ಗೊತ್ತು ಎಂದು ಸಚಿವ ಎಸ್.ಟಿ. ಸೋಮಶೇಖರ್ ಹರಿಹಾಯ್ದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಶೇಖರ್, ಸಿಡಿ ಪ್ರಕರಣದಲ್ಲಿ ತಮ್ಮ ಆಪ್ತ ರಮೇಶ್ ಜಾರಕಿಹೊಳಿ ಪರವಾಗಿ ಮಾತನಾಡಿದ್ದಾರೆ. ನೂರು ಶೇಕಡಾ ಹೇಳ್ತೀವಿ, ಇದು ಸಿಡಿ ಮಾಡಿದ್ದೇ ಕಾಂಗ್ರೆಸ್. ಇನ್ಯಾರು ಸಿಡಿ ಮಾಡುತ್ತಾರೆ. ಇದರ ಹಿಂದೆ ಕಾಂಗ್ರೆಸಿನದ್ದೇ ಕೈವಾಡ ಇದೆ. ಅದಕ್ಕಾಗಿ ಸಿಡಿ ಪ್ರಕರಣವನ್ನು ಸಿಬಿಐಗೆ ಕೊಡುವಂತೆ ಆಗ್ರಹಿಸುತ್ತೇವೆ. ಸಿಬಿಐ ತನಿಖೆ ನಡೆದರೆ, ಇದರ ಹಿಂದೆ ಯಾರಿದ್ದಾರೆ, ಯಾರೆಲ್ಲಾ ಕೈಯಾಡಿಸಿದ್ದಾರೆ, ಎಷ್ಟೆಲ್ಲಾ ಖರ್ಚಾಗಿದೆ, ಯಾರ್ಯಾರಿಗೆ ಸಂದಾಯ ಆಗಿದೆ ಇತ್ಯಾದಿ ವಿಷಯಗಳು ಹೊರಬರುತ್ತವೆ ಎಂದು ಹೇಳಿದರು.

ನಾವು ಕೂಡ ಕೋರ್ಟಿಗೆ ಹೋಗಿದ್ದು ಇದೇ ಕಾರಣಕ್ಕೆ. ಕಾಂಗ್ರೆಸಿನವರು ತೇಜೋವಧೆ ಮಾಡುತ್ತಾರೆಂದು ಕೋರ್ಟಿನಲ್ಲಿ ತಡೆಯಾಜ್ಞೆ ತಂದಿದ್ದೇವೆ. ನೈತಿಕತೆಯ ಪ್ರಶ್ನೆ ಬೇಡ. ಕಾಂಗ್ರೆಸಿನವರ ತಟ್ಟೆಯಲ್ಲಿ ಹೆಗ್ಗಣ ಇದೆ, ನಮ್ಮ ತಟ್ಟೆಯಲ್ಲೇನು ನೋಡೋದು ಅವ್ರು. ನಾವು ಆರು ಜನ ಕೋರ್ಟಲ್ಲಿ ಅರ್ಜಿ ಹಾಕಿದ್ದೆವು. ಅದರಲ್ಲೇನು ತಪ್ಪಿದೆ ಎಂದು ಪ್ರಶ್ನಿಸಿದ ಸೋಮಶೇಖರ್, ಉಳಿದವರು ಕೂಡ ಮರುದಿನ ಅರ್ಜಿ ಹಾಕುವರಿದ್ದರು. ಮಾಧ್ಯಮದಲ್ಲಿ ವಿಷ್ಯ ಬಂತೆಂದು ಕುಳಿತಿದ್ದಾರೆ. ನಮ್ಮನ್ನು ಸಚಿವ ಸ್ಥಾನದಿಂದ ಕೆಳಗಿಳಿಸಬೇಕು, ಡ್ಯಾಮೇಜ್ ಮಾಡಬೇಕೆಂದು ಸಂಚು ನಡೆಸಿದ್ದಾರೆ. ಸಿಡಿ ಬರುತ್ತೆ ಅಂತ ಕೋರ್ಟಿಗೆ ಹೋಗಿದ್ದಲ್ಲ ಎಂದು ಸ್ಪಷ್ಟನೆ ನೀಡಿದರು.
ಸಿದ್ದರಾಮಯ್ಯ ನಮ್ಮ ನೈತಿಕತೆ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಕುಮಾರಸ್ವಾಮಿ ಸರಕಾರ ಬಿದ್ದಿದ್ದೇ ಈ ನೈತಿಕತೆ ವಿಚಾರದಲ್ಲಿ. ನಾವು ಈ ಬಗ್ಗೆ ಸದನದಲ್ಲಿ ಉತ್ತರ ಕೊಡುತ್ತೇವೆ ಎಂದು ಹೇಳಿದರು.
Karnataka sex cd scandal Top congress leader has framed Ramesh Jarkiholi says minister S T Somashekhar in Bangalore.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm