ಬ್ರೇಕಿಂಗ್ ನ್ಯೂಸ್
14-03-21 08:21 pm Headline Karnataka News Network ಕರ್ನಾಟಕ
ಹೊಸಕೋಟೆ, ಮಾ 14: ಪಟ್ಟಣದ ಎಂ ವಿ ಬಡಾವಣೆಯ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯೊಬ್ಬಳ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.
ತುಮಕೂರು ಜಿಲ್ಲೆ ಕೊರಟಗೆರೆಯ ಅಶ್ವಿನಿ (23) ಮೃತ ಯುವತಿ. ಮೂರು ದಿನಗಳ ಹಿಂದೆ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗ್ತಿದೆ. ಎರಡು ವರ್ಷಗಳ ಹಿಂದೆ ಅಶ್ವಿನಿಗೆ ಫೇಸ್ಬುಕ್ನಲ್ಲಿ ಆಟೋ ಚಾಲಕ ಸುರೇಶ್ ಎಂಬಾತನ ಪರಿಚಯವಾಗಿತ್ತು. ಗಾರ್ಮೆಂಟ್ಸ್ ಉದ್ಯೋಗಿಯಾಗಿದ್ದ ಅಶ್ವಿನಿ ಕೆಲಸಕ್ಕೆ ಹೋಗುವಾಗ ಆಟೋ ಚಾಲಕ ಸುರೇಶ್, ದಿನಾಲು ಆಕೆಯನ್ನು ಡ್ರಾಪ್ ಮಾಡುತ್ತಿದ್ದ.
ಈ ವೇಳೆ ಇಬ್ಬರ ನಡುವೆ ಪ್ರೀತಿ ಹುಟ್ಟಿತ್ತು. ಎರಡು ತಿಂಗಳ ಹಿಂದೆ ಸುರೇಶ್ ಅಶ್ವಿನಿಯನ್ನು ಹೊಸಕೋಟೆಯಲ್ಲಿರುವ ತನ್ನ ಬಾಡಿಗೆ ಮನೆಗೆ ಕರೆತಂದು ಆಕೆಯ ಜೊತೆಗೆ ವಾಸವಿದ್ದ ಎಂದು ತಿಳಿದು ಬಂದಿದೆ.
ಬಾಡಿಗೆ ಮನೆಯಲ್ಲಿ ವಾಸವಿದ್ದ ಅಶ್ವಿನಿ ಮತ್ತು ಸುರೇಶ್ ಇಬ್ಬರೂ ಅನ್ಯೋನ್ಯವಾಗಿದ್ದರು. ಇತ್ತೀಚೆಗೆ ಸುರೇಶ್ ತನಗೆ ವಂಚಿಸಿರುವುದಾಗಿ ಅಶ್ವಿನಿ ಸೂಲಿಬೆಲೆ ಪೊಲೀಸರ ಮೊರೆ ಹೋಗಿದ್ದಳು. ಈ ವೇಳೆ ಅಶ್ವಿನಿ ಮತ್ತು ಸುರೇಶ್ ಅನ್ನು ಕರೆದು ಮಾತನಾಡಿಸಿದ ಪೊಲೀಸರು, ಇಬ್ಬರ ನಡುವೆ ರಾಜಿ ಮಾಡಿ ಕಳಿಸಿದ್ದರು.

ಆದರೆ, ಇದೀಗ ಅಶ್ವಿನಿ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಹೀಗಾಗಿ, ಅಶ್ವಿನಿಯನ್ನು ಸುರೇಶ್ ಕೊಲೆ ಮಾಡಿದ್ದಾನೆ ಎಂದು ಆಕೆಯ ಪೋಷಕರು ಆರೋಪಿಸಿದ್ದಾರೆ. ಈ ಬಗ್ಗೆ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಸುರೇಶ್ಗಾಗಿ ಹುಡುಕಾಡುತ್ತಿದ್ದಾರೆ.
ಮೃತ ಅಶ್ವಿನಿಯ ಚಿಕ್ಕಮ್ಮ ಅಂಬಿಕಾ ಮಾತನಾಡಿ, ಸುರೇಶ್ ದುಡ್ಡಿಗಾಗಿ ಅಶ್ವಿನಿಯನ್ನು ಪೀಡಿಸುತ್ತಿದ್ದ. 35 ಸಾವಿರ ತೆಗೆದುಕೊಂಡು ಬರುವಂತೆ ಒತ್ತಾಯಿಸುತ್ತಿದ್ದ. ಹಣ ತಂದರೆ ಮಾತ್ರ ಮನೆಗೆ ಬಾ, ಇಲ್ಲದಿದ್ದರೆ ಸತ್ತು ಹೋಗು ಎಂದು ಗಲಾಟೆ ಮಾಡಿದ್ದ. ಇದನ್ನು ಸಾಯುವ ಮುನ್ನ ಅಶ್ವಿನಿ ಹೇಳಿಕೊಂಡಿದ್ದಾಳೆ.
ನಮ್ಮ ಮಗುವನ್ನು ಸುರೇಶ್ ಮೋಸ ಮಾಡಿ ಕರೆತಂದು, ಕೊಲೆ ಮಾಡಿದ್ದಾನೆ. ಈ ಮೊದಲು ಅಶ್ವಿನಿಗೆ ಮದುವೆಯಾಗಿದ್ದು, ಗಂಡನಿಂದ ದೂರವಾಗಿದ್ದಳು. ಆಕೆಗೆ ಒಂದು ಮಗು ಕೂಡ ಇದೆ. ಫೇಸ್ಬುಕ್ನಲ್ಲಿ ಪರಿಚಯವಾಗಿ, ಕಳೆದ 2 ತಿಂಗಳ ಹಿಂದೆ ಮದುವೆಯಾಗದೆ ಒಂದೇ ಮನೆಯಲ್ಲಿ ವಾಸವಿದ್ದರು. ದುಡ್ಡಿಗಾಗಿ ಪೀಡಿಸಿ ಕೊಲೆ ಮಾಡಿ ಪರಾರಿ ಆಗಿದ್ದಾನೆ ಎಂದು ಆರೋಪಿಸಿದ್ದಾರೆ.
Boyfriend whose a auto driver by profession is alleged of Killing his girlfriend for the sake of money in Tumkur.
20-06-26 01:33 pm
HK News Staffer
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm