ಬ್ರೇಕಿಂಗ್ ನ್ಯೂಸ್
15-03-21 08:01 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.15: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಚಿವರು, ಹಿರಿಯ ಅಧಿಕಾರಿಗಳು, ತಜ್ಞರ ಜೊತೆಗೆ ಸಭೆ ನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ ಸೋಂಕು ತಡೆಯುವ ನಿಟ್ಟಿನಲ್ಲಿ ಕಠಿಣ ಕ್ರಮಗಳನ್ನು ಜಾರಿಗೊಳಿಸುವ ಸುಳಿವು ನೀಡಿದ್ದಾರೆ.
ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ ಸಿಎಂ ಯಡಿಯೂರಪ್ಪ , ಬೀದರ್, ಕಲಬುರಗಿ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ ಜಿಲ್ಲೆಗಳಲ್ಲಿ ಕೋವಿಡ್ ಸೋಕು ಹೆಚ್ಚುತ್ತಿರುವುದು ಕಂಡುಬಂದಿದೆ. ಹೀಗಾಗಿ ಲಸಿಕೆ ಅಭಿಯಾನವನ್ನು ತೀವ್ರಗೊಳಿಸಲು ಸೂಚನೆ ನೀಡಿದ್ದೇನೆ. ರಾಜ್ಯದಲ್ಲಿ 3500 ವ್ಯಾಕ್ಸಿನೇಶನ್ ಸೆಂಟರ್ ಇದೆ. ಪ್ರತಿ ದಿನ 3500 ಮಂದಿ ಲಸಿಕೆ ಪಡೆದರೆ ದಿನದಲ್ಲಿ 3.50 ಲಕ್ಷ ಜನರು ಲಸಿಕೆ ಪಡೆಯಬಹುದು. ಲಸಿಕೆ ಹಾಕುವ ಪ್ರಕ್ರಿಯೆಯನ್ನು ಹೆಚ್ಚಿಸಲಾಗುವುದು ಎಂದು ಹೇಳಿದರು.
![]()
ಪಾಸಿಟಿವ್ ಹೆಚ್ಚಿರುವ ಜಿಲ್ಲೆಗಳಲ್ಲಿ ಲಸಿಕೆ ನೀಡಿಕೆಯನ್ನು ಹೆಚ್ಚಿಸಲಾಗುವುದು. ಅಪಾರ್ಟ್ಮೆಂಟ್ ಗಳಲ್ಲಿ ಲಸಿಕೆ ಅಭಿಯಾನ ನಡೆಸಲಾಗುವುದು. ಮತದಾರರ ಪಟ್ಟಿ ಆಧರಿಸಿ, ಹಿರಿಯ ನಾಗರಿಕರಿಗೆ ಲಸಿಕೆ ನೀಡಲು ತಜ್ಞರು ಸೂಚಿಸಿದ್ದಾರೆ. ಅದರಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.
ಮದುವೆ, ರಾಜಕೀಯ ಸಭೆ ಇನ್ನಿತರ ಯಾವುದೇ ರೀತಿಯ ಸಭೆ, ಸಮಾರಂಭಗಳಲ್ಲಿ 500ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ. ಈ ನಿಮಯ ಕಡ್ಡಾಯ ಪಾಲಿಸುವಂತೆ ಸ್ಥಳೀಯಾಡಳಿತಕ್ಕೆ ಸೂಚನೆ ನೀಡುತ್ತೇನೆ. ಮಹಾರಾಷ್ಟ್ರ ಮತ್ತು ಕೇರಳದಿಂದ ಬರುವ ಮಂದಿಯ ಮೇಲೆ ನಿಗಾ ಇಡಲಾಗುವುದು. ಸಾರಿಗೆ ಬಸ್ ಗಳಲ್ಲಿ ನಿಗದಿತ ಸಂಖ್ಯೆಯ ಪ್ರಯಾಣಿಕರಷ್ಟೇ ಸಂಚರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಮತ್ತೆ ಲಾಕ್ಡೌನ್, ಕರ್ಫ್ಯೂ, ಬಂದ್ ಬೇಡ ಎಂದಿದ್ದರೆ, ಜನರೇ ಸ್ವಯಂಪ್ರೇರಿತವಾಗಿ ಮುಂಜಾಗ್ರತೆ ವಹಿಸಬೇಕು. ಲಾಕ್ಡೌನ್ ಪರಿಸ್ಥಿತಿ ಆಗದಂತೆ ಜನರೇ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.
Covid rise in Karnataka , the CM has given a veiled warning to the citizens that unless people themselves start taking precautions the government may consider further stringent action.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm