ಬ್ರೇಕಿಂಗ್ ನ್ಯೂಸ್
16-03-21 02:15 pm Headline Karnataka News Network ಕರ್ನಾಟಕ
ಮೈಸೂರು, ಮಾ.16 : ಶಕುನಿಯ ಮಾತು ಕೇಳಿ ಕೌರವರ ಸಂತತಿ ಸರ್ವ ನಾಶವಾಯಿತು, ಇದೀಗ ಮೈಸೂರಿನಲ್ಲೂ ಶಕುನಿ, ಮಂಥರೆಯ ಮಾತು ಕೇಳುತ್ತಿರುವ ಕುಮಾರಸ್ವಾಮಿ ಜೆಡಿಎಸ್ ಅನ್ನು ಸರ್ವನಾಶ ಮಾಡಲು ಹೊರಟಿದ್ದಾರೆ ಎಂದು ಮಾಜಿ ಸಚಿವ ಜಿಟಿ ದೇವೇಗೌಡ ಕಿಡಿಕಾರಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ರಾಮಾಯಣದಲ್ಲಿ ಮಂಥರೆಯ ಮಾತನ್ನು ಕೇಳಿದ ಪರಿಣಾಮ ರಾಮ ವನವಾಸಕ್ಕೆ ತೆರಳುವಂತಾಗಿತ್ತು. ಮೈಮುಲ್ ಚುನಾವಣೆಯಲ್ಲಿ ಹೆಚ್. ಡಿ. ಕುಮಾರಸ್ವಾಮಿ ನನ್ನನ್ನು ಟಾರ್ಗೆಟ್ ಮಾಡಿಕೊಂಡಿದ್ದಾರೆ. ಆದರೆ, ಆ ಚುನಾವಣೆಯನ್ನು ನಾನು ಪ್ರತಿಷ್ಠೆಯಾಗಿ ತೆಗೆದುಕೊಂಡಿಲ್ಲ. ಕುಮಾರಸ್ವಾಮಿ ಏಕೆ ಹಾಗೆ ಪ್ರತಿಷ್ಠೆ ಎಂದುಕೊಂಡಿದ್ದಾರೋ ಗೊತ್ತಿಲ್ಲ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಸಚಿವ ಶಾಸಕ ಸಾ.ರಾ. ಮಹೇಶ್ರನ್ನು ಶಕುನಿಗೆ ಹೋಲಿಸಿದ ಜಿ.ಟಿ.ದೇವೇಗೌಡ, ಕುಮಾರಸ್ವಾಮಿ ಅವರೇ ನೀವ್ಯಾಕೆ ಶಕುನಿ ಮಾತು ಕೇಳುತ್ತಿದ್ದೀರಿ ? ಸಾ.ರಾ.ಮಹೇಶ್ ಛತ್ರಕ್ಕೆ ಬಂದು ನನ್ನನ್ನು ಜೆಡಿಎಸ್ನಿಂದ ಹೊರಗೆ ಹಾಕುತ್ತೇನೆ ಎಂದು ಹೇಳಿದ್ದೀರಿ. ಪದೇ ಪದೇ ನನ್ನನ್ನು ಯಾಕೆ ಅವಮಾನ ಮಾಡುತ್ತೀರಿ? ನಾನು ಎಲ್ಲಿಗೂ ಹೋಗದಂತೆ ಜೆಡಿಎಸ್ನಲ್ಲಿ ಕೂಡಿಹಾಕಿ ಬೀಗ ಹಾಕಲಾಗಿದೆ.
ಕುಮಾರಸ್ವಾಮಿ ಅವರು ಯಾರು ಯಾರದ್ದೋ ಮಾತು ಕೇಳಿಕೊಂಡು ನನ್ನ ವಿರುದ್ಧ ಟೀಕೆ ಮಾಡುತ್ತಿದ್ದಾರೆ. ಹೆಚ್.ಡಿ.ಕೋಟೆಯಲ್ಲಿ ಮೈಮುಲ್ ಪ್ರಚಾರದ ವೇಳೆ ಮೈಸೂರು ಹೈಕಮಾಂಡ್ನವರು ನನ್ನ ವಿರುದ್ಧ ಮಾತನಾಡಿದ್ದಾರೆ. ಜಿ.ಟಿ.ದೇವೇಗೌಡ ಎನ್ನುವ ಆಲದ ಮರವನ್ನು ಬುಡ ಸಮೇತ ಕಿತ್ತುಹಾಕಿ ಹೊಸ ಗಿಡ ನೆಡುತ್ತೇವೆಂದು ಹೇಳಿದ್ದಾರೆ. ಅವರ ಮಾತು ಕೇಳಿಕೊಂಡು ಕುಮಾರಸ್ವಾಮಿ ಕೂಡ ನನ್ನ ವಿರುದ್ಧ ಮಾತನಾಡಿದ್ದಾರೆ ಎಂದು ದೂರಿದ್ದಾರೆ.
MLA G T Devegowda, who has maintained a distance from the JD(S) activities on Monday, advised his party leader, former chief minister, H D Kumaraswamy to maintain a distance from people like 'Shakuni' of Mahabharata and 'Manthara' of Ramayana, to save the party. Devegowda also claimed that he is still in the JD(S).
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm