ಬ್ರೇಕಿಂಗ್ ನ್ಯೂಸ್
16-03-21 02:15 pm Headline Karnataka News Network ಕರ್ನಾಟಕ
ಮೈಸೂರು, ಮಾ.16 : ಶಕುನಿಯ ಮಾತು ಕೇಳಿ ಕೌರವರ ಸಂತತಿ ಸರ್ವ ನಾಶವಾಯಿತು, ಇದೀಗ ಮೈಸೂರಿನಲ್ಲೂ ಶಕುನಿ, ಮಂಥರೆಯ ಮಾತು ಕೇಳುತ್ತಿರುವ ಕುಮಾರಸ್ವಾಮಿ ಜೆಡಿಎಸ್ ಅನ್ನು ಸರ್ವನಾಶ ಮಾಡಲು ಹೊರಟಿದ್ದಾರೆ ಎಂದು ಮಾಜಿ ಸಚಿವ ಜಿಟಿ ದೇವೇಗೌಡ ಕಿಡಿಕಾರಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ರಾಮಾಯಣದಲ್ಲಿ ಮಂಥರೆಯ ಮಾತನ್ನು ಕೇಳಿದ ಪರಿಣಾಮ ರಾಮ ವನವಾಸಕ್ಕೆ ತೆರಳುವಂತಾಗಿತ್ತು. ಮೈಮುಲ್ ಚುನಾವಣೆಯಲ್ಲಿ ಹೆಚ್. ಡಿ. ಕುಮಾರಸ್ವಾಮಿ ನನ್ನನ್ನು ಟಾರ್ಗೆಟ್ ಮಾಡಿಕೊಂಡಿದ್ದಾರೆ. ಆದರೆ, ಆ ಚುನಾವಣೆಯನ್ನು ನಾನು ಪ್ರತಿಷ್ಠೆಯಾಗಿ ತೆಗೆದುಕೊಂಡಿಲ್ಲ. ಕುಮಾರಸ್ವಾಮಿ ಏಕೆ ಹಾಗೆ ಪ್ರತಿಷ್ಠೆ ಎಂದುಕೊಂಡಿದ್ದಾರೋ ಗೊತ್ತಿಲ್ಲ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಸಚಿವ ಶಾಸಕ ಸಾ.ರಾ. ಮಹೇಶ್ರನ್ನು ಶಕುನಿಗೆ ಹೋಲಿಸಿದ ಜಿ.ಟಿ.ದೇವೇಗೌಡ, ಕುಮಾರಸ್ವಾಮಿ ಅವರೇ ನೀವ್ಯಾಕೆ ಶಕುನಿ ಮಾತು ಕೇಳುತ್ತಿದ್ದೀರಿ ? ಸಾ.ರಾ.ಮಹೇಶ್ ಛತ್ರಕ್ಕೆ ಬಂದು ನನ್ನನ್ನು ಜೆಡಿಎಸ್ನಿಂದ ಹೊರಗೆ ಹಾಕುತ್ತೇನೆ ಎಂದು ಹೇಳಿದ್ದೀರಿ. ಪದೇ ಪದೇ ನನ್ನನ್ನು ಯಾಕೆ ಅವಮಾನ ಮಾಡುತ್ತೀರಿ? ನಾನು ಎಲ್ಲಿಗೂ ಹೋಗದಂತೆ ಜೆಡಿಎಸ್ನಲ್ಲಿ ಕೂಡಿಹಾಕಿ ಬೀಗ ಹಾಕಲಾಗಿದೆ.
ಕುಮಾರಸ್ವಾಮಿ ಅವರು ಯಾರು ಯಾರದ್ದೋ ಮಾತು ಕೇಳಿಕೊಂಡು ನನ್ನ ವಿರುದ್ಧ ಟೀಕೆ ಮಾಡುತ್ತಿದ್ದಾರೆ. ಹೆಚ್.ಡಿ.ಕೋಟೆಯಲ್ಲಿ ಮೈಮುಲ್ ಪ್ರಚಾರದ ವೇಳೆ ಮೈಸೂರು ಹೈಕಮಾಂಡ್ನವರು ನನ್ನ ವಿರುದ್ಧ ಮಾತನಾಡಿದ್ದಾರೆ. ಜಿ.ಟಿ.ದೇವೇಗೌಡ ಎನ್ನುವ ಆಲದ ಮರವನ್ನು ಬುಡ ಸಮೇತ ಕಿತ್ತುಹಾಕಿ ಹೊಸ ಗಿಡ ನೆಡುತ್ತೇವೆಂದು ಹೇಳಿದ್ದಾರೆ. ಅವರ ಮಾತು ಕೇಳಿಕೊಂಡು ಕುಮಾರಸ್ವಾಮಿ ಕೂಡ ನನ್ನ ವಿರುದ್ಧ ಮಾತನಾಡಿದ್ದಾರೆ ಎಂದು ದೂರಿದ್ದಾರೆ.
MLA G T Devegowda, who has maintained a distance from the JD(S) activities on Monday, advised his party leader, former chief minister, H D Kumaraswamy to maintain a distance from people like 'Shakuni' of Mahabharata and 'Manthara' of Ramayana, to save the party. Devegowda also claimed that he is still in the JD(S).
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm