ಬ್ರೇಕಿಂಗ್ ನ್ಯೂಸ್
16-03-21 08:13 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.16: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ತಿರುವು ಲಭಿಸಿದ್ದು ಸಿಡಿಯಲ್ಲಿ ಕಾಣಿಸಿಕೊಂಡಿದ್ದ ಯುವತಿ ದಿಢೀರ್ ನಾಪತ್ತೆಯಾಗಿದ್ದು ಆಕೆಯನ್ನು ಕಿಡ್ನಾಪ್ ಮಾಡಿದ್ದಾಗಿ ಪೋಷಕರು ದೂರು ನೀಡಿದ್ದಾರೆ.
ಮಾ.2ರ ಬಳಿಕ ನಮ್ಮ ಮಗಳು ಸಂಪರ್ಕಕ್ಕೆ ಸಿಕ್ಕಿಲ್ಲ. ಆಕೆಯನ್ನು ಅಶ್ಲೀಲವಾಗಿ ಬಳಸಿಕೊಂಡು ಸಿಡಿ ಮಾಡಿ ಮಾನ ಕಳೆದಿದ್ದಾರೆ. ಈಗ ಯಾರೋ ಕಿಡ್ನಾಪ್ ಮಾಡಿದ್ದಾರೆ. ಮಗಳ ಪ್ರಾಣಕ್ಕೆ ಭೀತಿ ಇದೆ, ರಕ್ಷಣೆ ಕೊಡಬೇಕು. ಮಗಳನ್ನು ಪತ್ತೆ ಮಾಡಿಕೊಡಬೇಕು ಎಂದು ಆಕೆಯ ಪೋಷಕರು ಬೆಳಗಾವಿಯ ಎಪಿಎಂಸಿ ಠಾಣೆಯಲ್ಲಿ ದೂರು ನೀಡಿದ್ದಾರೆ.

ಕಿಡ್ನಾಪ್, ಲೈಂಗಿಕ ಕಿರುಕುಳ, ಜೀವ ಬೆದರಿಕೆ ಬಗ್ಗೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಹಾಸ್ಟೆಲಿನಲ್ಲಿದ್ದ ಯುವತಿಯನ್ನು ಯಾರೋ ಅಪಹರಿಸಿದ್ದಾಗಿ ದೂರು ದಾಖಲಾಗಿದೆ.
ಇದೇ ವೇಳೆ, ಸಿಡಿ ಪ್ರಕರಣದಲ್ಲಿ ಭಾಗಿಯಾಗಿದ್ದಾರೆಂಬ ಆರೋಪದಲ್ಲಿ ನಾಲ್ವರು ಪತ್ರಕರ್ತರ ಪತ್ತೆಗೆ ಜಾಲ ಬೀಸಿದೆ. ಖಾಸಗಿ ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಸೇರಿ ಸಿಡಿ ಮಾಡಿದ್ದಾರೆ ಎನ್ನಲಾಗುತ್ತಿದ್ದು ಅವರ ಖಾತೆಗೆ ಹಣ ಸಂದಾಯ ಆಗಿರುವುದನ್ನು ಎಸ್ಐಟಿ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.
ಸಿಡಿ ಪ್ರಕರಣದ ಹಿಂದಿರೋ ಆರೋಪಿಗಳೇ ಯುವತಿಯನ್ನು ಅಪಹರಿಸಿದ್ದಾರೆಯೇ ಎಂಬ ಶಂಕೆ ಮೂಡಿದೆ. ಎರಡು ದಿನಗಳ ಹಿಂದಷ್ಟೇ ಯುವತಿಯ ವಿಡಿಯೋ ಹೇಳಿಕೆ ಮಾಧ್ಯಮಕ್ಕೆ ಲಭಿಸಿತ್ತು. ಅದಾಗಿ ಎರಡು ದಿನದಲ್ಲಿ ಬೆಳಗಾವಿಯಲ್ಲಿ ಆಕೆಯ ಪೋಷಕರು ದೂರು ನೀಡಿರುವುದು ಇಡೀ ಪ್ರಕರಣ ಈಗ ಮತ್ತೊಂದು ತಿರುವು ಪಡೆಯುವ ಸೂಚನೆ ನೀಡಿದೆ.
Woman found in sex video of Fromer Minister Ramesh Jarkiholi goes missing. Parents file Kidnap case at Bengaluru Police Station.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm