ಬ್ರೇಕಿಂಗ್ ನ್ಯೂಸ್
16-03-21 08:13 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.16: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ತಿರುವು ಲಭಿಸಿದ್ದು ಸಿಡಿಯಲ್ಲಿ ಕಾಣಿಸಿಕೊಂಡಿದ್ದ ಯುವತಿ ದಿಢೀರ್ ನಾಪತ್ತೆಯಾಗಿದ್ದು ಆಕೆಯನ್ನು ಕಿಡ್ನಾಪ್ ಮಾಡಿದ್ದಾಗಿ ಪೋಷಕರು ದೂರು ನೀಡಿದ್ದಾರೆ.
ಮಾ.2ರ ಬಳಿಕ ನಮ್ಮ ಮಗಳು ಸಂಪರ್ಕಕ್ಕೆ ಸಿಕ್ಕಿಲ್ಲ. ಆಕೆಯನ್ನು ಅಶ್ಲೀಲವಾಗಿ ಬಳಸಿಕೊಂಡು ಸಿಡಿ ಮಾಡಿ ಮಾನ ಕಳೆದಿದ್ದಾರೆ. ಈಗ ಯಾರೋ ಕಿಡ್ನಾಪ್ ಮಾಡಿದ್ದಾರೆ. ಮಗಳ ಪ್ರಾಣಕ್ಕೆ ಭೀತಿ ಇದೆ, ರಕ್ಷಣೆ ಕೊಡಬೇಕು. ಮಗಳನ್ನು ಪತ್ತೆ ಮಾಡಿಕೊಡಬೇಕು ಎಂದು ಆಕೆಯ ಪೋಷಕರು ಬೆಳಗಾವಿಯ ಎಪಿಎಂಸಿ ಠಾಣೆಯಲ್ಲಿ ದೂರು ನೀಡಿದ್ದಾರೆ.

ಕಿಡ್ನಾಪ್, ಲೈಂಗಿಕ ಕಿರುಕುಳ, ಜೀವ ಬೆದರಿಕೆ ಬಗ್ಗೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಹಾಸ್ಟೆಲಿನಲ್ಲಿದ್ದ ಯುವತಿಯನ್ನು ಯಾರೋ ಅಪಹರಿಸಿದ್ದಾಗಿ ದೂರು ದಾಖಲಾಗಿದೆ.
ಇದೇ ವೇಳೆ, ಸಿಡಿ ಪ್ರಕರಣದಲ್ಲಿ ಭಾಗಿಯಾಗಿದ್ದಾರೆಂಬ ಆರೋಪದಲ್ಲಿ ನಾಲ್ವರು ಪತ್ರಕರ್ತರ ಪತ್ತೆಗೆ ಜಾಲ ಬೀಸಿದೆ. ಖಾಸಗಿ ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಸೇರಿ ಸಿಡಿ ಮಾಡಿದ್ದಾರೆ ಎನ್ನಲಾಗುತ್ತಿದ್ದು ಅವರ ಖಾತೆಗೆ ಹಣ ಸಂದಾಯ ಆಗಿರುವುದನ್ನು ಎಸ್ಐಟಿ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.
ಸಿಡಿ ಪ್ರಕರಣದ ಹಿಂದಿರೋ ಆರೋಪಿಗಳೇ ಯುವತಿಯನ್ನು ಅಪಹರಿಸಿದ್ದಾರೆಯೇ ಎಂಬ ಶಂಕೆ ಮೂಡಿದೆ. ಎರಡು ದಿನಗಳ ಹಿಂದಷ್ಟೇ ಯುವತಿಯ ವಿಡಿಯೋ ಹೇಳಿಕೆ ಮಾಧ್ಯಮಕ್ಕೆ ಲಭಿಸಿತ್ತು. ಅದಾಗಿ ಎರಡು ದಿನದಲ್ಲಿ ಬೆಳಗಾವಿಯಲ್ಲಿ ಆಕೆಯ ಪೋಷಕರು ದೂರು ನೀಡಿರುವುದು ಇಡೀ ಪ್ರಕರಣ ಈಗ ಮತ್ತೊಂದು ತಿರುವು ಪಡೆಯುವ ಸೂಚನೆ ನೀಡಿದೆ.
Woman found in sex video of Fromer Minister Ramesh Jarkiholi goes missing. Parents file Kidnap case at Bengaluru Police Station.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm