ಬ್ರೇಕಿಂಗ್ ನ್ಯೂಸ್
17-03-21 12:28 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.17: ಆರೆಸ್ಸೆಸ್ ರಾಷ್ಟ್ರೀಯ ಅಧಿವೇಶನವಾದ ಅಖಿಲ ಭಾರತ ಪ್ರತಿನಿಧಿ ಸಭಾ ಈ ಬಾರಿಯೂ ಬೆಂಗಳೂರಿನಲ್ಲೇ ಆಯೋಜಿಸಲಾಗಿದೆ. ಮಾರ್ಚ್ 19 ಹಾಗೂ 20ರಂದು ಅಧಿವೇಶನ ನಡೆಯಲಿದೆ.
ಕಳೆದ ವರ್ಷ ಬೆಂಗಳೂರಿನಲ್ಲಿ ಸಭೆ ಆಯೋಜನೆಯಾಗಿತ್ತಾದರೂ ಕೊರೊನಾ ಸೋಂಕಿನ ಕಾರಣ ಕೊನೆಕ್ಷಣದಲ್ಲಿ ರದ್ದುಪಡಿಸಲಾಗಿತ್ತು. ಪ್ರತಿ ಮೂರು ವರ್ಷಕ್ಕೊಮ್ಮೆ ಮಹಾರಾಷ್ಟ್ರದ ನಾಗಪುರದಲ್ಲಿ ಅಧಿವೇಶನ ನಡೆಯುವುದು ಹಿಂದಿನಿಂದ ಬಂದ ಸಂಪ್ರದಾಯವಾಗಿತ್ತು. ಕಳೆದ ಬಾರಿ ಬೆಂಗಳೂರಿನಲ್ಲಿ ಮಹತ್ವದ ಅಧಿವೇಶನ ನಡೆಸಲು ತಯಾರಿ ನಡೆದಿತ್ತು. ಕೊನೆಯ ಹಂತದಲ್ಲಿ ರದ್ದುಗೊಂಡಿದ್ದ ಅಧಿವೇಶನವನ್ನು ಈ ಬಾರಿ ಮತ್ತೆ ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ.
ಈ ಅಧಿವೇಶನದಲ್ಲಿ ಪ್ರತಿ ಬಾರಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಚುನಾವಣೆ ನಡೆಯುತ್ತದೆ. ಸದ್ಯ ಕಾರ್ಯವಾಹರಾಗಿ ಸುರೇಶ್ ಜೋಷಿ ಇದ್ದಾರೆ. ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಈ ಬಾರಿಯೂ ಚುನಾವಣೆ ನಡೆದಲ್ಲಿ ಮೊದಲ ಬಾರಿ ಬೆಂಗಳೂರಿನಲ್ಲಿ ಮಹತ್ವದ ನಿರ್ಧಾರ ಕೈಗೊಂಡಂತೆ ಆಗಲಿದೆ. ಜೋಶಿ ಅವರು 12 ವರ್ಷಗಳ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. ಅವರೇ ಮತ್ತೆ ಅಧಿಕಾರ ಬಯಸಿದರೆ ಆರ್ ಎಸ್ಎಸ್ ಮುಖ್ಯಸ್ಥರೇ ನಿರ್ಧರಿಸುತ್ತಾರೆ. 72 ವರ್ಷದ ಜೋಶಿ ಅವರು ಅದೇ ಸ್ಥಾನದಲ್ಲಿ ಮುಂದುವರಿದರೆ ಮತ್ತೆ ಮೂರು ವರ್ಷಕ್ಕೆ ಅವರ ಅವಧಿಯಿರುತ್ತದೆ.
ಸುರೇಶ್ ಭೈಯಾಜಿ ಜೋಷಿ ಅಧಿಕಾರದಿಂದ ಕೆಳಗಿಳಿಯಲು ಬಯಸಿದರೇ, ಅದನ್ನು ಪಡೆಯಲು ಆರು ಮಂದಿ ಸರದಿಯಲ್ಲಿದ್ದಾರೆ. ದತ್ತಾತ್ರೇಯ ಹೊಸಬಾಳೆ, ವಿ. ಭಾಗಯ್ಯ, ಸುರೇಶ್ ಸೋನಿ, ಕೃಷ್ಣ ಗೋಪಾಲ್, ಮನಮೋಹನ್ ವೈದ್ಯ ಮತ್ತು ಮುಕುಂದ ಸಿ.ಆರ್ ಕೂಡ ರೇಸ್ ನಲ್ಲಿದ್ದಾರೆ ಎನ್ನುವ ಮಾಹಿತಿಯಿದೆ.
ಚುನಾವಣೆ ನಡೆಸುವುದು ಸಂಘದ ವರಿಷ್ಠರಿಗೆ ಬಿಟ್ಟ ವಿಷಯವಾಗಿದ್ದು, ಒಟ್ಟು 11 ವಿಭಾಗದ 500 ಮಂದಿ ಪ್ರತಿನಿಧಿಗಳು ಚುನಾವಣೆಯಲ್ಲಿ ಭಾಗವಹಿಸಲಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ನಾಗಪುರದಿಂದ ಹೊರಗೆ ಚುನಾವಣೆ ನಡೆಯುತ್ತಿರುವುದು ಬಹಶಃ ಇದೇ ಮೊದಲು ಎನ್ನಲಾಗಿದೆ. ಚನ್ನೇನಹಳ್ಳಿಯ ಜನಸೇವಾ ಕೇಂದ್ರದಲ್ಲೇ ಈ ಬಾರಿಯೂ ಅಧಿವೇಶನ ನಡೆಯಲಿದೆ. ಸಾಮಾನ್ಯವಾಗಿ 1400 ಪ್ರತಿನಿಧಿಗಳು ದೇಶದ ವಿವಿಧ ಭಾಗಗಳಿಂದ ಆಗಮಿಸುತ್ತಾರೆ. ಆದರೆ ಕೊರೊನಾ ಸೋಂಕು ಇರುವುದರಿಂದ ಈ ಸಲ ಎಷ್ಟು ಮಂದಿ ಪಾಲ್ಗೊಳ್ಳಲಿದ್ದಾರೆಂದು ಖಚಿತವಾಗಿಲ್ಲ.
Bengaluru is again set to host the annual conclave of the Rashtriya Swayamsevak Sangh’s (RSS) highest decision-making body for the first time.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm