ಬ್ರೇಕಿಂಗ್ ನ್ಯೂಸ್
19-03-21 12:05 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.19 : ರಾಜ್ಯದಲ್ಲಿ ನಡೆಯುವ ಉಪ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಈ ಬಾರಿ ರಣತಂತ್ರ ಹೆಣೆಯಲು ಮುಂದಾಗಿದೆ. ಅದರ ಭಾಗವಾಗಿ ಪಕ್ಷದ ಹಿರಿಯ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದು ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಿರಿಯ ಕಾಂಗ್ರೆಸ್ ಮುಖಂಡರಿಗೆ ಭೋಜನ ಕೂಟ ಹಮ್ಮಿಕೊಂಡಿದ್ದಾರೆ.
ಮಾರ್ಚ್ 24ರಂದು ಸಿದ್ದರಾಮಯ್ಯ ತಮ್ಮ ಸರ್ಕಾರಿ ನಿವಾಸದಲ್ಲಿ ಭೋಜನ ಕೂಟ ಹಮ್ಮಿಕೊಂಡಿದ್ದು, ಹಿರಿಯ ಮುಖಂಡರನ್ನು ಭೋಜನಕ್ಕೆ ಆಹ್ವಾನಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯರು, ರಾಜ್ಯಸಭಾ ಸದಸ್ಯರು ಸೇರಿದಂತೆ ಹಿರಿಯ ಮುಖಂಡರು ಭೋಜನ ಕೂಟದಲ್ಲಿ ಭಾಗಿಯಾಗಲಿದ್ದಾರೆ.

ಉಪ ಚುನಾವಣೆ, ಸಿಡಿ ರಾಜಕೀಯ, ಮೀಸಲಾತಿ ವಿಚಾರಗಳು ಈ ಸಂದರ್ಭದಲ್ಲಿ ಚರ್ಚೆಗೆ ಬರುವ ಸಾಧ್ಯತೆ ಇದೆ. ಬೆಳಗಾವಿ ಲೋಕಸಭೆ ಹಾಗೂ ಮಸ್ಕಿ, ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ವಿಚಾರದಲ್ಲಿ ಪ್ರಮುಖವಾಗಿ ಚರ್ಚೆ ನಡೆಯುವ ಸಾಧ್ಯತೆ ಇದೆ.

ಕಳೆದ ಎರಡು ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಸೋಲು ಅನುಭವಿಸಿದ್ದು ಈ ಬಾರಿ ಗೆಲ್ಲಲೇಬೇಕೆಂಬ ಸವಾಲು ಕೆಪಿಸಿಸಿ ಮುಂದಿದೆ. ಇದಕ್ಕಾಗಿ ರಾಜ್ಯ ಕಾಂಗ್ರೆಸಿನ ಹಿರಿಯ ಮುಖಂಡರನ್ನು ಕರೆದು ಒಂದೆಡೆ ಸೇರಿಸುವ ನಿಟ್ಟಿನಲ್ಲಿ ಭೋಜನ ಕೂಟದ ಏರ್ಪಡಿಸಿದ್ದಾರೆ ಎನ್ನಲಾಗುತ್ತಿದೆ. ರಾಜ್ಯ ಸರ್ಕಾರಕ್ಕೆ ಸಿ.ಡಿ ಹಾಗೂ ಇನ್ನಿತರ ವಿಚಾರಗಳಲ್ಲಿ ಮುಜುಗರ ಸೃಷ್ಟಿಯಾಗಿದ್ದು, ಈ ಸಂದರ್ಭದಲ್ಲಿ ವಿರೋಧ ಪಕ್ಷವಾಗಿ ಕಾಂಗ್ರೆಸ್, ಅದೇ ವಿಚಾರವನ್ನು ಮುಂದಿಟ್ಟು ಹೋರಾಟ ನಡೆಸುವ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ.

ಸದ್ಯದ ರಾಜಕೀಯ ಸನ್ನಿವೇಶ ಕಾಂಗ್ರೆಸ್ ಪರವಾಗಿದ್ದು, ಈ ಸಂದರ್ಭದಲ್ಲಿ ಪಕ್ಷದಲ್ಲಿ ಒಗ್ಗಟ್ಟು ಪ್ರದರ್ಶನ ಹಾಗೂ ಭಿನ್ನಾಭಿಪ್ರಾಯ ಶಮನ ಗೊಳಿಸುವ ನಿಟ್ಟಿನಲ್ಲಿ ಭೋಜನ ಕೂಟವನ್ನು ವೇದಿಕೆಯನ್ನಾಗಿ ಬಳಸಿಕೊಳ್ಳಲು ಸಿದ್ದರಾಮಯ್ಯ ಮುಂದಾಗಿದ್ದಾರೆ. ಉತ್ತರ ಕರ್ನಾಟಕದಲ್ಲಿ ಬಿಜೆಪಿ ನಾಯಕರ ಒಳಜಗಳ, ಸಚಿವ ಸಂಪುಟದ ಅಸಮಾಧಾನ, ಜೊತೆಗೆ ಸಿಡಿ ರಾಜಕೀಯವನ್ನು ಮುಂದಿಟ್ಟು ಬಿಜೆಪಿಯನ್ನು ಹಣಿಯಲು ಮುಂದಾಗಿದ್ದಾರೆ.
Congress leader Siddaramaiah invites members for dinner party considering Karnataka Bypolls elections 2021.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm