ಬ್ರೇಕಿಂಗ್ ನ್ಯೂಸ್
19-03-21 12:05 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.19 : ರಾಜ್ಯದಲ್ಲಿ ನಡೆಯುವ ಉಪ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಈ ಬಾರಿ ರಣತಂತ್ರ ಹೆಣೆಯಲು ಮುಂದಾಗಿದೆ. ಅದರ ಭಾಗವಾಗಿ ಪಕ್ಷದ ಹಿರಿಯ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದು ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಿರಿಯ ಕಾಂಗ್ರೆಸ್ ಮುಖಂಡರಿಗೆ ಭೋಜನ ಕೂಟ ಹಮ್ಮಿಕೊಂಡಿದ್ದಾರೆ.
ಮಾರ್ಚ್ 24ರಂದು ಸಿದ್ದರಾಮಯ್ಯ ತಮ್ಮ ಸರ್ಕಾರಿ ನಿವಾಸದಲ್ಲಿ ಭೋಜನ ಕೂಟ ಹಮ್ಮಿಕೊಂಡಿದ್ದು, ಹಿರಿಯ ಮುಖಂಡರನ್ನು ಭೋಜನಕ್ಕೆ ಆಹ್ವಾನಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯರು, ರಾಜ್ಯಸಭಾ ಸದಸ್ಯರು ಸೇರಿದಂತೆ ಹಿರಿಯ ಮುಖಂಡರು ಭೋಜನ ಕೂಟದಲ್ಲಿ ಭಾಗಿಯಾಗಲಿದ್ದಾರೆ.

ಉಪ ಚುನಾವಣೆ, ಸಿಡಿ ರಾಜಕೀಯ, ಮೀಸಲಾತಿ ವಿಚಾರಗಳು ಈ ಸಂದರ್ಭದಲ್ಲಿ ಚರ್ಚೆಗೆ ಬರುವ ಸಾಧ್ಯತೆ ಇದೆ. ಬೆಳಗಾವಿ ಲೋಕಸಭೆ ಹಾಗೂ ಮಸ್ಕಿ, ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ವಿಚಾರದಲ್ಲಿ ಪ್ರಮುಖವಾಗಿ ಚರ್ಚೆ ನಡೆಯುವ ಸಾಧ್ಯತೆ ಇದೆ.

ಕಳೆದ ಎರಡು ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಸೋಲು ಅನುಭವಿಸಿದ್ದು ಈ ಬಾರಿ ಗೆಲ್ಲಲೇಬೇಕೆಂಬ ಸವಾಲು ಕೆಪಿಸಿಸಿ ಮುಂದಿದೆ. ಇದಕ್ಕಾಗಿ ರಾಜ್ಯ ಕಾಂಗ್ರೆಸಿನ ಹಿರಿಯ ಮುಖಂಡರನ್ನು ಕರೆದು ಒಂದೆಡೆ ಸೇರಿಸುವ ನಿಟ್ಟಿನಲ್ಲಿ ಭೋಜನ ಕೂಟದ ಏರ್ಪಡಿಸಿದ್ದಾರೆ ಎನ್ನಲಾಗುತ್ತಿದೆ. ರಾಜ್ಯ ಸರ್ಕಾರಕ್ಕೆ ಸಿ.ಡಿ ಹಾಗೂ ಇನ್ನಿತರ ವಿಚಾರಗಳಲ್ಲಿ ಮುಜುಗರ ಸೃಷ್ಟಿಯಾಗಿದ್ದು, ಈ ಸಂದರ್ಭದಲ್ಲಿ ವಿರೋಧ ಪಕ್ಷವಾಗಿ ಕಾಂಗ್ರೆಸ್, ಅದೇ ವಿಚಾರವನ್ನು ಮುಂದಿಟ್ಟು ಹೋರಾಟ ನಡೆಸುವ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ.

ಸದ್ಯದ ರಾಜಕೀಯ ಸನ್ನಿವೇಶ ಕಾಂಗ್ರೆಸ್ ಪರವಾಗಿದ್ದು, ಈ ಸಂದರ್ಭದಲ್ಲಿ ಪಕ್ಷದಲ್ಲಿ ಒಗ್ಗಟ್ಟು ಪ್ರದರ್ಶನ ಹಾಗೂ ಭಿನ್ನಾಭಿಪ್ರಾಯ ಶಮನ ಗೊಳಿಸುವ ನಿಟ್ಟಿನಲ್ಲಿ ಭೋಜನ ಕೂಟವನ್ನು ವೇದಿಕೆಯನ್ನಾಗಿ ಬಳಸಿಕೊಳ್ಳಲು ಸಿದ್ದರಾಮಯ್ಯ ಮುಂದಾಗಿದ್ದಾರೆ. ಉತ್ತರ ಕರ್ನಾಟಕದಲ್ಲಿ ಬಿಜೆಪಿ ನಾಯಕರ ಒಳಜಗಳ, ಸಚಿವ ಸಂಪುಟದ ಅಸಮಾಧಾನ, ಜೊತೆಗೆ ಸಿಡಿ ರಾಜಕೀಯವನ್ನು ಮುಂದಿಟ್ಟು ಬಿಜೆಪಿಯನ್ನು ಹಣಿಯಲು ಮುಂದಾಗಿದ್ದಾರೆ.
Congress leader Siddaramaiah invites members for dinner party considering Karnataka Bypolls elections 2021.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm