ಬ್ರೇಕಿಂಗ್ ನ್ಯೂಸ್
19-03-21 12:05 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.19 : ರಾಜ್ಯದಲ್ಲಿ ನಡೆಯುವ ಉಪ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಈ ಬಾರಿ ರಣತಂತ್ರ ಹೆಣೆಯಲು ಮುಂದಾಗಿದೆ. ಅದರ ಭಾಗವಾಗಿ ಪಕ್ಷದ ಹಿರಿಯ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದು ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಿರಿಯ ಕಾಂಗ್ರೆಸ್ ಮುಖಂಡರಿಗೆ ಭೋಜನ ಕೂಟ ಹಮ್ಮಿಕೊಂಡಿದ್ದಾರೆ.
ಮಾರ್ಚ್ 24ರಂದು ಸಿದ್ದರಾಮಯ್ಯ ತಮ್ಮ ಸರ್ಕಾರಿ ನಿವಾಸದಲ್ಲಿ ಭೋಜನ ಕೂಟ ಹಮ್ಮಿಕೊಂಡಿದ್ದು, ಹಿರಿಯ ಮುಖಂಡರನ್ನು ಭೋಜನಕ್ಕೆ ಆಹ್ವಾನಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯರು, ರಾಜ್ಯಸಭಾ ಸದಸ್ಯರು ಸೇರಿದಂತೆ ಹಿರಿಯ ಮುಖಂಡರು ಭೋಜನ ಕೂಟದಲ್ಲಿ ಭಾಗಿಯಾಗಲಿದ್ದಾರೆ.

ಉಪ ಚುನಾವಣೆ, ಸಿಡಿ ರಾಜಕೀಯ, ಮೀಸಲಾತಿ ವಿಚಾರಗಳು ಈ ಸಂದರ್ಭದಲ್ಲಿ ಚರ್ಚೆಗೆ ಬರುವ ಸಾಧ್ಯತೆ ಇದೆ. ಬೆಳಗಾವಿ ಲೋಕಸಭೆ ಹಾಗೂ ಮಸ್ಕಿ, ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ವಿಚಾರದಲ್ಲಿ ಪ್ರಮುಖವಾಗಿ ಚರ್ಚೆ ನಡೆಯುವ ಸಾಧ್ಯತೆ ಇದೆ.

ಕಳೆದ ಎರಡು ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಸೋಲು ಅನುಭವಿಸಿದ್ದು ಈ ಬಾರಿ ಗೆಲ್ಲಲೇಬೇಕೆಂಬ ಸವಾಲು ಕೆಪಿಸಿಸಿ ಮುಂದಿದೆ. ಇದಕ್ಕಾಗಿ ರಾಜ್ಯ ಕಾಂಗ್ರೆಸಿನ ಹಿರಿಯ ಮುಖಂಡರನ್ನು ಕರೆದು ಒಂದೆಡೆ ಸೇರಿಸುವ ನಿಟ್ಟಿನಲ್ಲಿ ಭೋಜನ ಕೂಟದ ಏರ್ಪಡಿಸಿದ್ದಾರೆ ಎನ್ನಲಾಗುತ್ತಿದೆ. ರಾಜ್ಯ ಸರ್ಕಾರಕ್ಕೆ ಸಿ.ಡಿ ಹಾಗೂ ಇನ್ನಿತರ ವಿಚಾರಗಳಲ್ಲಿ ಮುಜುಗರ ಸೃಷ್ಟಿಯಾಗಿದ್ದು, ಈ ಸಂದರ್ಭದಲ್ಲಿ ವಿರೋಧ ಪಕ್ಷವಾಗಿ ಕಾಂಗ್ರೆಸ್, ಅದೇ ವಿಚಾರವನ್ನು ಮುಂದಿಟ್ಟು ಹೋರಾಟ ನಡೆಸುವ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ.

ಸದ್ಯದ ರಾಜಕೀಯ ಸನ್ನಿವೇಶ ಕಾಂಗ್ರೆಸ್ ಪರವಾಗಿದ್ದು, ಈ ಸಂದರ್ಭದಲ್ಲಿ ಪಕ್ಷದಲ್ಲಿ ಒಗ್ಗಟ್ಟು ಪ್ರದರ್ಶನ ಹಾಗೂ ಭಿನ್ನಾಭಿಪ್ರಾಯ ಶಮನ ಗೊಳಿಸುವ ನಿಟ್ಟಿನಲ್ಲಿ ಭೋಜನ ಕೂಟವನ್ನು ವೇದಿಕೆಯನ್ನಾಗಿ ಬಳಸಿಕೊಳ್ಳಲು ಸಿದ್ದರಾಮಯ್ಯ ಮುಂದಾಗಿದ್ದಾರೆ. ಉತ್ತರ ಕರ್ನಾಟಕದಲ್ಲಿ ಬಿಜೆಪಿ ನಾಯಕರ ಒಳಜಗಳ, ಸಚಿವ ಸಂಪುಟದ ಅಸಮಾಧಾನ, ಜೊತೆಗೆ ಸಿಡಿ ರಾಜಕೀಯವನ್ನು ಮುಂದಿಟ್ಟು ಬಿಜೆಪಿಯನ್ನು ಹಣಿಯಲು ಮುಂದಾಗಿದ್ದಾರೆ.
Congress leader Siddaramaiah invites members for dinner party considering Karnataka Bypolls elections 2021.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm