ಬ್ರೇಕಿಂಗ್ ನ್ಯೂಸ್
19-03-21 04:09 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.19 : ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮನೆ ಮುಂದೆ ಗನ್ ಮ್ಯಾನ್ ಮತ್ತು ವಾಹನ ಚಾಲಕ ಕಿತ್ತಾಡಿಕೊಂಡಿದ್ದು ಇಬ್ಬರು ಸಿಬ್ಬಂದಿಗಳ ಹೊಡೆದಾಟ ಬಿಡಿಸಲು ಪೊಲೀಸ್ ಸಿಬ್ಬಂದಿ ಹರಸಾಹಸ ಪಟ್ಟಿರುವ ವಿಡಿಯೋ ಈಗ ವೈರಲ್ ಆಗಿದೆ.

ಸಚಿವ ಸುಧಾಕರ್ ಮನೆಯ ಖಾಸಗಿ ಚಾಲಕ ಸೋಮಶೇಖರ್ ಮತ್ತು ಗನ್ಮ್ಯಾನ್ ತಿಮ್ಮಯ್ಯ ಪರಸ್ಪರ ಬೀದಿಯಲ್ಲಿ ಹೊಡೆದಾಡಿದವರು. ನಿನ್ನೆ ಡಾ.ಕೆ.ಸುಧಾಕರ್ ಅವರು ತನ್ನ ಮನೆ ಬಳಿ ಬರುವ ವೇಳೆಗೆ ಟೀ ಮಾರುತ್ತಿದ್ದ ಅಂಗವಿಕಲ ವ್ಯಕ್ತಿಯೋರ್ವರು ಅಡ್ಡ ಬಂದಿದ್ದಾರೆ. ಇದರಿಂದ ಸಿಟ್ಟಿಗೆದ್ದ ಸಚಿವರ ಗನ್ಮ್ಯಾನ್ ತಿಮ್ಮಯ್ಯ, ಟೀ ಮಾರುವ ವಿಶೇಷಚೇತನ ವ್ಯಕ್ತಿಗೆ ಹೊಡೆದಿದ್ದಾರೆ. ಗನ್ ಮ್ಯಾನ್ ಒಬ್ಬ ವಿಶೇಷಚೇತನ ವ್ಯಕ್ತಿಯ ಮೇಲೆ ಕೈಮಾಡಿದ್ದು ಅಲ್ಲಿದ್ದ ಎಲ್ಲರಿಗೂ ಬೇಸರ ತರಿಸಿದೆ.

ಘಟನೆ ಬಳಿಕ ಈ ವಿಚಾರದಲ್ಲಿ ಸ್ಥಳೀಯರು ತಿಮ್ಮಯ್ಯನನ್ನು ಪ್ರಶ್ನೆ ಮಾಡಿದ್ದರು. ಘಟನೆ ನೋಡಿದ್ದ ಖಾಸಗಿ ವಾಹನ ಚಾಲಕ ಸೋಮಶೇಖರ್ ಸಚಿವರಿಗೆ ಈ ಬಗ್ಗೆ ದೂರು ನೀಡಿರಬಹುದು ಎಂಬ ಅನುಮಾನದಲ್ಲಿ ಇಂದು ಬೆಳಗ್ಗೆ ಸೋಮಶೇಖರ್ ನನ್ನು ಪ್ರಶ್ನೆ ಮಾಡಿದ್ದಾನೆ. ‘ನಾನು ಟೀ ಮಾರಾಟಗಾರನಿಗೆ ಹಲ್ಲೆ ನಡೆಸಿದ್ದನ್ನು ನೀನು ಸಚಿವರಿಗೆ ಹೇಳಿದ್ದೀಯಾ’ ಎಂದು ಕೂಗುತ್ತಾ ಸೋಮಶೇಖರ್ ಮೇಲೆ ತಿಮ್ಮಯ್ಯ ಕೈಎತ್ತಿದ್ದಾನೆ. ಈ ಘಟನೆ ಸಚಿವ ಸುಧಾಕರ್ ಮನೆ ಮುಂದಿನ ರಸ್ತೆಯಲ್ಲೇ ನಡೆದಿದ್ದು ರಸ್ತೆಯಲ್ಲಿ ಇಬ್ಬರೂ ತಾವು ಸಚಿವರ ಸಿಬಂದಿ ಅನ್ನುವ ಪರಿವೇ ಇಲ್ಲದೆ ಹೊರಳಾಡಿದ್ದಾರೆ. ಸಿಬಂದಿಗಳಿಬ್ಬರು ಹೊಡೆದಾಟ, ಹೊರಳಾಡಿರುವ ಘಟನೆಯ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದು ವ್ಯಾಪಕ ಟೀಕೆ ಕೇಳಿಬಂದಿದೆ.

ಡಾ.ಕೆ.ಸುಧಾಕರ್ ಅವರ ಮನೆ ಸಮೀಪವೇ ರಮೇಶ್ ಜಾರಕಿಹೊಳಿ ಅವರ ಮನೆಯಿದೆ. ಸೀಡಿ ಪ್ರಕರಣದ ಬಳಿಕ ಮಾಧ್ಯಮ ಸಿಬ್ಬಂದಿಗಳು ಅವರ ಮನೆ ಮುಂದೆ ಇರುವುದು ವಾಡಿಕೆಯಾಗಿದ್ದರೆ, ಕೊರೊನಾ ಸೋಂಕಿನ ಆತಂಕದಿಂದಾಗಿ ಡಾ.ಕೆ.ಸುಧಾಕರ್ ಮನೆ ಬಳಿಯೂ ವಿವರ ಪಡೆಯಲು ಮಾಧ್ಯಮ ಪ್ರತಿನಿಧಿಗಳು ಇರುತ್ತಾರೆ. ಇದೆಲ್ಲ ಗೊತ್ತಿದ್ದರೂ, ಹೀಗೆ ನಡುರಸ್ತೆಯಲ್ಲಿ ಸಚಿವರ ಸಿಬಂದಿ ಹೊಡೆದಾಡಿರುವುದು ಮಾಧ್ಯಮ ವಲಯದಲ್ಲಿ ನಗೆಪಾಟಲು ಮತ್ತು ಸಾರ್ವಜನಿಕರ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.
Minister Sudhakar gunman and driver fight in front of his residence in Bangalore video goes viral on social media.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm