ಬ್ರೇಕಿಂಗ್ ನ್ಯೂಸ್
19-03-21 04:09 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.19 : ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮನೆ ಮುಂದೆ ಗನ್ ಮ್ಯಾನ್ ಮತ್ತು ವಾಹನ ಚಾಲಕ ಕಿತ್ತಾಡಿಕೊಂಡಿದ್ದು ಇಬ್ಬರು ಸಿಬ್ಬಂದಿಗಳ ಹೊಡೆದಾಟ ಬಿಡಿಸಲು ಪೊಲೀಸ್ ಸಿಬ್ಬಂದಿ ಹರಸಾಹಸ ಪಟ್ಟಿರುವ ವಿಡಿಯೋ ಈಗ ವೈರಲ್ ಆಗಿದೆ.

ಸಚಿವ ಸುಧಾಕರ್ ಮನೆಯ ಖಾಸಗಿ ಚಾಲಕ ಸೋಮಶೇಖರ್ ಮತ್ತು ಗನ್ಮ್ಯಾನ್ ತಿಮ್ಮಯ್ಯ ಪರಸ್ಪರ ಬೀದಿಯಲ್ಲಿ ಹೊಡೆದಾಡಿದವರು. ನಿನ್ನೆ ಡಾ.ಕೆ.ಸುಧಾಕರ್ ಅವರು ತನ್ನ ಮನೆ ಬಳಿ ಬರುವ ವೇಳೆಗೆ ಟೀ ಮಾರುತ್ತಿದ್ದ ಅಂಗವಿಕಲ ವ್ಯಕ್ತಿಯೋರ್ವರು ಅಡ್ಡ ಬಂದಿದ್ದಾರೆ. ಇದರಿಂದ ಸಿಟ್ಟಿಗೆದ್ದ ಸಚಿವರ ಗನ್ಮ್ಯಾನ್ ತಿಮ್ಮಯ್ಯ, ಟೀ ಮಾರುವ ವಿಶೇಷಚೇತನ ವ್ಯಕ್ತಿಗೆ ಹೊಡೆದಿದ್ದಾರೆ. ಗನ್ ಮ್ಯಾನ್ ಒಬ್ಬ ವಿಶೇಷಚೇತನ ವ್ಯಕ್ತಿಯ ಮೇಲೆ ಕೈಮಾಡಿದ್ದು ಅಲ್ಲಿದ್ದ ಎಲ್ಲರಿಗೂ ಬೇಸರ ತರಿಸಿದೆ.

ಘಟನೆ ಬಳಿಕ ಈ ವಿಚಾರದಲ್ಲಿ ಸ್ಥಳೀಯರು ತಿಮ್ಮಯ್ಯನನ್ನು ಪ್ರಶ್ನೆ ಮಾಡಿದ್ದರು. ಘಟನೆ ನೋಡಿದ್ದ ಖಾಸಗಿ ವಾಹನ ಚಾಲಕ ಸೋಮಶೇಖರ್ ಸಚಿವರಿಗೆ ಈ ಬಗ್ಗೆ ದೂರು ನೀಡಿರಬಹುದು ಎಂಬ ಅನುಮಾನದಲ್ಲಿ ಇಂದು ಬೆಳಗ್ಗೆ ಸೋಮಶೇಖರ್ ನನ್ನು ಪ್ರಶ್ನೆ ಮಾಡಿದ್ದಾನೆ. ‘ನಾನು ಟೀ ಮಾರಾಟಗಾರನಿಗೆ ಹಲ್ಲೆ ನಡೆಸಿದ್ದನ್ನು ನೀನು ಸಚಿವರಿಗೆ ಹೇಳಿದ್ದೀಯಾ’ ಎಂದು ಕೂಗುತ್ತಾ ಸೋಮಶೇಖರ್ ಮೇಲೆ ತಿಮ್ಮಯ್ಯ ಕೈಎತ್ತಿದ್ದಾನೆ. ಈ ಘಟನೆ ಸಚಿವ ಸುಧಾಕರ್ ಮನೆ ಮುಂದಿನ ರಸ್ತೆಯಲ್ಲೇ ನಡೆದಿದ್ದು ರಸ್ತೆಯಲ್ಲಿ ಇಬ್ಬರೂ ತಾವು ಸಚಿವರ ಸಿಬಂದಿ ಅನ್ನುವ ಪರಿವೇ ಇಲ್ಲದೆ ಹೊರಳಾಡಿದ್ದಾರೆ. ಸಿಬಂದಿಗಳಿಬ್ಬರು ಹೊಡೆದಾಟ, ಹೊರಳಾಡಿರುವ ಘಟನೆಯ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದು ವ್ಯಾಪಕ ಟೀಕೆ ಕೇಳಿಬಂದಿದೆ.

ಡಾ.ಕೆ.ಸುಧಾಕರ್ ಅವರ ಮನೆ ಸಮೀಪವೇ ರಮೇಶ್ ಜಾರಕಿಹೊಳಿ ಅವರ ಮನೆಯಿದೆ. ಸೀಡಿ ಪ್ರಕರಣದ ಬಳಿಕ ಮಾಧ್ಯಮ ಸಿಬ್ಬಂದಿಗಳು ಅವರ ಮನೆ ಮುಂದೆ ಇರುವುದು ವಾಡಿಕೆಯಾಗಿದ್ದರೆ, ಕೊರೊನಾ ಸೋಂಕಿನ ಆತಂಕದಿಂದಾಗಿ ಡಾ.ಕೆ.ಸುಧಾಕರ್ ಮನೆ ಬಳಿಯೂ ವಿವರ ಪಡೆಯಲು ಮಾಧ್ಯಮ ಪ್ರತಿನಿಧಿಗಳು ಇರುತ್ತಾರೆ. ಇದೆಲ್ಲ ಗೊತ್ತಿದ್ದರೂ, ಹೀಗೆ ನಡುರಸ್ತೆಯಲ್ಲಿ ಸಚಿವರ ಸಿಬಂದಿ ಹೊಡೆದಾಡಿರುವುದು ಮಾಧ್ಯಮ ವಲಯದಲ್ಲಿ ನಗೆಪಾಟಲು ಮತ್ತು ಸಾರ್ವಜನಿಕರ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.
Minister Sudhakar gunman and driver fight in front of his residence in Bangalore video goes viral on social media.
20-06-26 01:33 pm
HK News Staffer
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm