ಬ್ರೇಕಿಂಗ್ ನ್ಯೂಸ್
21-08-20 11:32 am Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 20: ಸ್ವಯಂಘೋಷಿತ ದೇವಮಾನವ ಸ್ವಾಮಿ ನಿತ್ಯಾನಂದ ಈಗ ಹೊಸ ಅವತಾರಕ್ಕೆ ರೆಡಿಯಾಗಿದ್ದಾನೆ. ಕಳೆದ ವರ್ಷ ದಿಢೀರ್ ಆಗಿ ನಾಪತ್ತೆಯಾಗಿದ್ದ ರೇಪ್ ಆರೋಪಿ ನಿತ್ಯಾನಂದ ಈಗ ವಿಡಿಯೋ ಒಂದನ್ನು ಹರಿಯಬಿಟ್ಟಿದ್ದು, ತನ್ನ ಹೊಸ ಲೋಕದ ಬಗ್ಗೆ ಹೇಳಿಕೊಂಡಿದ್ದಾನೆ.
ತಾನು ಹೊಸತೊಂದು ಲೋಕ ಸೃಷ್ಟಿಸಿದ್ದು ಆ ದೇಶಕ್ಕೆ ಕೈಲಾಸ ಎನ್ನುವ ಹೆಸರಿಟ್ಟಿದ್ದೇನೆ. ಆ ದೇಶಕ್ಕೊಂದು ಬೇರೆಯದ್ದೇ ಆದ ಕರೆನ್ಸಿಯನ್ನೂ ಜಾರಿಗೆ ತರುತ್ತೇನೆ. ಅದು ಕೈಲಾಸದ ರಿಸರ್ವ್ ಬ್ಯಾಂಕ್ ಆಗಿರಲಿದ್ದು ವ್ಯಾಟಿಕನ್ ಬ್ಯಾಂಕಿನ ಮಾದರಿಯಲ್ಲೇ ಇರಲಿದೆ. ಈ ಹೊಸ ಕರೆನ್ಸಿಯನ್ನು ಗಣೇಶ ಚತುರ್ಥಿ ದಿವಸ ಆಗಸ್ಟ್ 22ರಂದು ಜಾರಿಗೆ ತರಲಿದ್ದೇನೆ ಎಂದು ವಿಡಿಯೋದಲ್ಲಿ ಹೇಳಿಕೊಂಡಿದ್ದಾನೆ.
ಹೊಸ ಕರೆನ್ಸಿ ಜಾರಿಗೆ ತರುವುದಕ್ಕಾಗಿ ಆ ದೇಶದೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇವೆ. ಹೊಸ ಕರೆನ್ಸಿ ಮತ್ತು ಬ್ಯಾಂಕ್ ಸ್ಥಾಪನೆ ಎಲ್ಲವೂ ಕಾನೂನು ರೀತ್ಯ ಆಗಲಿದ್ದು, ಅದಕ್ಕಾಗಿ 300 ಪುಟಗಳ ಆರ್ಥಿಕ ಮಾಹಿತಿಗಳುಳ್ಳ ದಾಖಲೆಯನ್ನು ರೆಡಿ ಮಾಡಿದ್ದೇನೆ. ಇತರೇ ದೇಶಗಳ ಜೊತೆ ಹೇಗೆ ಕರೆನ್ಸಿ ವ್ಯವಹರಿಸಲಿದೆ ಎನ್ನುವುದಕ್ಕೆ ಪ್ರತ್ಯೇಕ ಪಾಲಿಸಿಗಳನ್ನು ಹೊಂದಿದ್ದೇನೆ ಎಂದಿರುವ ನಿತ್ಯಾನಂದ, ಕೊರೊನಾ ಸೋಂಕು ಹರಡುವ ಮುನ್ನವೇ ನಾನು ನಿಗೂಢ ಜಾಗದಲ್ಲಿ ಹೊಸ ದೇಶದ ಸೃಷ್ಟಿಯಲ್ಲಿ ತೊಡಗಿದ್ದೆ. ಅದಕ್ಕಾಗಿ ಭಕ್ತರಿಂದ ಪ್ರತ್ಯೇಕವಾಗಿ ಇದ್ದೇನೆ ಎಂದು ಹೇಳಿದ್ದಾಗ ಕೆಲವರು ನಕ್ಕಿದ್ದರು. ಕುಹಕದ ಮಾತಾಡಿದ್ದರು. ಆದರೆ, ಈಗ ಎಲ್ಲರೂ ಕ್ವಾರಂಟೈನ್, ಐಸೋಲೇಶನ್, ಅಂತರ ಕಾಯ್ದುಕೊಳ್ಳುವ ಮಂತ್ರ ಜಪಿಸುತ್ತಿದ್ದಾರೆ. ಆ ಪರಶಿವನೇ ನಮ್ಮನ್ನು ಕಾಪಾಡಬೇಕು. ಅದು ದೇವನ ಶಕ್ತಿ ಎಂದು ಹೇಳಿದ್ದಾನೆ.

ಕೈಲಾಸ ದೇಶಕ್ಕೆ ಯಾವುದೇ ಗಡಿಗಳ ತಂಟೆ ಇರುವುದಿಲ್ಲ. ಜಗತ್ತಿನಲ್ಲಿ ಅನಾಥವಾಗಿರುವ ಹಿಂದುಗಳೆಲ್ಲ ಸೇರಿ ಈ ದೇಶವನ್ನು ನಿರ್ಮಿಸಿದ್ದಾರೆ. ತಮ್ಮ ದೇಶಗಳಲ್ಲಿ ಹಿಂದುಯಿಸಂನ್ನು ಪಾಲಿಸಲಾಗದೆ ಹೊರಬಂದವರು ಈ ದೇಶದಲ್ಲಿ ಇರಲಿದ್ದಾರೆ ಎಂದಿರುವ ನಿತ್ಯಾನಂದ ಈ ದೇಶ ಎಲ್ಲಿದೆ ಎನ್ನುವುದನ್ನು ಹೇಳಿಕೊಂಡಿಲ್ಲ. Kailasa.org ಎನ್ನುವ ಹೆಸರಿನಲ್ಲಿ ವೆಬ್ ಸೈಟ್ ಹಾಗೂ Nithyanandapedia ಎನ್ನುವ ಹೆಸರಲ್ಲಿ ವಿಕಿಪೀಡಿಯಾ ಪೇಜ್ ಗಳನ್ನು ಹೊಂದಿದ್ದು, ತನ್ನ ವಿಚಾರಗಳನ್ನು ಪ್ರಕಟಿಸಲು ವೇದಿಕೆಯಾಗಿ ಮಾಡಿಕೊಂಡಿದ್ದಾನೆ.
ಅಂದಹಾಗೆ, 2010ರ ಚಿತ್ರನಟಿಯ ರೇಪ್ ಪ್ರಕರಣದಲ್ಲಿ ಆರೋಪಿಯಾಗಿರುವ ನಿತ್ಯಾನಂದನ ಜಾಮೀನನ್ನು ಕಳೆದ ಜನವರಿ ತಿಂಗಳಲ್ಲಿ ಹೈಕೋರ್ಟ್ ರದ್ದು ಮಾಡಿತ್ತು. ಅಲ್ಲದೆ, ಕೆಳಗಿನ ಕೋರ್ಟಿಗೆ ನಿತ್ಯಾನಂದನ ಬಂಧನಕ್ಕೆ ಆದೇಶ ಮಾಡುವಂತೆ ನಿರ್ದೇಶನ ನೀಡಿತ್ತು.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 03:31 pm
HK News Staffer
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
19-06-26 05:47 pm
HK News Staffer
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm