ಬ್ರೇಕಿಂಗ್ ನ್ಯೂಸ್
21-03-21 05:48 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ 21: ತಾನು ಏನೂ ಸಾಧನೆ ಮಾಡಿಲ್ಲ, ತನ್ನ ಬಗ್ಗೆ ಮನೆಯವರು ಏನೂ ಮಾತನಾಡುತ್ತಿಲ್ಲ ಎಂದು ಖಿನ್ನತೆಗೆ ಒಳಗಾಗಿ ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಜೀವನ್ ಅಂಬಾಟೆ ಆತ್ಮಹತ್ಯೆಗೆ ಶರಣಾದವರು. ಏನಾದರೂ ಸಾಧನೆ ಮಾಡಬೇಕೆಂಬ ತುಡಿತದೊಂದಿಗೆ ಬೀದರ್ನಿಂದ ಬೆಂಗಳೂರಿಗೆ ಬಂದಿದ್ದ ಜೀವನ್, ಪ್ರತಿಷ್ಠಿತ ಅಮೆಜಾನ್ ಕಂಪೆನಿಯಲ್ಲಿ ಟೀಂ ಲೀಡರ್ ಆಗಿ ಕೆಲಸ ಮಾಡುತ್ತಿದ್ದ. ಆದರೆ ಇತ್ತೀಚಿನ ದಿನಗಳಲ್ಲಿ ತಾನು ಏನೂ ಸಾಧನೆ ಮಾಡುತ್ತಿಲ್ಲ ಎಂದು ಕೊರಗಿ ಖಿನ್ನತೆಗೆ ಒಳಗಾಗುತ್ತಿದ್ದ. ಮನೆಯವರು ತನ್ನನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಗೊಣಗಾಡುತ್ತಿದ್ದ.
ಹೀಗಾಗಿ ತಾನು ಬದುಕಿರುವುದು ವೇಸ್ಟ್ ಎಂದು ನಿರ್ಧರಿಸಿದ್ದ.ಕೊನೆಗೆ ರೂಮ್ನ ಗೆಳೆಯರು ಊರಿಗೆ ಹೋಗಿದ್ದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಾಯುವ ಬಗ್ಗೆ ವಿಡಿಯೋಗಳನ್ನು ನೋಡಿ ಅದರಂತೆ ಪ್ರಯೋಗ ಮಾಡಿಕೊಂಡು ಈತ ಸಾವನ್ನಪ್ಪಿದ್ದಾನೆ. ಮೂರು ದಿನ ಮನೆಯಲ್ಲೇ ಶವವಿತ್ತು.

ಸತ್ತ ನಂತರ ಯಾರಾದರೂ ರೂಂ ಒಳಗೆ ಬಂದರೆ ಅನಾಹುತವಾಗಬಹುದು ಎಂದು ಅರಿತು ಯಾವ ರೀತಿ ಮನೆ ಒಳಗೆ ಬರಬೇಕು ಎಂದು ಸಾಯುವ ಮುನ್ನ ಎಂದು ನಕ್ಷೆ ಮಾಡಿ ಮನೆ ಕಿಟಕಿ ಬಾಗಿಲಿಗೆ ಅಂಟಿಸಿದ್ದ. ನಕ್ಷೆಯಲ್ಲಿ ಡೋರ್ ತೆಗೆದ ಕೂಡಲೇ ಕಿಟಕಿ ಓಪನ್ ಮಾಡಿ. ಯಾರೂ ಲೈಟ್ಸ್ ಆನ್ಮಾಡಬೇಡಿ ಎಂದು ನಿರ್ದೇಶನ ನೀಡಿದ್ದ.
ಮೂರು ದಿನದ ನಂತರ ಬಂದಿದ್ದ ಸ್ನೇಹಿತರು ಜೀವನ್ ಮೃತರಾಗಿರುವುದು ಕಂಡು ಕೂಡಲೇ ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ. ತಕ್ಷಣವೇ ಸ್ಥಳಕ್ಕೆ ಮಹದೇವಪುರ ಪೊಲೀಸರು ಧಾವಿಸಿದ್ದಾರೆ. ಮೊದಲು ಕೊಲೆ ಎಂದು ಶಂಕೆ ವ್ಯಕ್ತಪಡಿಸಿದ್ದರು. ಪ್ರಾಥಮಿಕ ತನಿಖೆಯ ಸಂದರ್ಭದಲ್ಲಿ ಜೀವನ್ ಬರೆದಿದ್ದ ಡೆತ್ ನೋಟ್ ಸಿಕ್ಕಿದೆ. ಸಾಧನೆ ಇಲ್ಲ ಮನೆಯವರು ಮಾತಾಡ್ತಿಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬರೆದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
Youth commits suicide because of failure in life in Bengaluru.
20-06-26 01:33 pm
HK News Staffer
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm