ಬ್ರೇಕಿಂಗ್ ನ್ಯೂಸ್
21-03-21 05:48 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ 21: ತಾನು ಏನೂ ಸಾಧನೆ ಮಾಡಿಲ್ಲ, ತನ್ನ ಬಗ್ಗೆ ಮನೆಯವರು ಏನೂ ಮಾತನಾಡುತ್ತಿಲ್ಲ ಎಂದು ಖಿನ್ನತೆಗೆ ಒಳಗಾಗಿ ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಜೀವನ್ ಅಂಬಾಟೆ ಆತ್ಮಹತ್ಯೆಗೆ ಶರಣಾದವರು. ಏನಾದರೂ ಸಾಧನೆ ಮಾಡಬೇಕೆಂಬ ತುಡಿತದೊಂದಿಗೆ ಬೀದರ್ನಿಂದ ಬೆಂಗಳೂರಿಗೆ ಬಂದಿದ್ದ ಜೀವನ್, ಪ್ರತಿಷ್ಠಿತ ಅಮೆಜಾನ್ ಕಂಪೆನಿಯಲ್ಲಿ ಟೀಂ ಲೀಡರ್ ಆಗಿ ಕೆಲಸ ಮಾಡುತ್ತಿದ್ದ. ಆದರೆ ಇತ್ತೀಚಿನ ದಿನಗಳಲ್ಲಿ ತಾನು ಏನೂ ಸಾಧನೆ ಮಾಡುತ್ತಿಲ್ಲ ಎಂದು ಕೊರಗಿ ಖಿನ್ನತೆಗೆ ಒಳಗಾಗುತ್ತಿದ್ದ. ಮನೆಯವರು ತನ್ನನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಗೊಣಗಾಡುತ್ತಿದ್ದ.
ಹೀಗಾಗಿ ತಾನು ಬದುಕಿರುವುದು ವೇಸ್ಟ್ ಎಂದು ನಿರ್ಧರಿಸಿದ್ದ.ಕೊನೆಗೆ ರೂಮ್ನ ಗೆಳೆಯರು ಊರಿಗೆ ಹೋಗಿದ್ದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಾಯುವ ಬಗ್ಗೆ ವಿಡಿಯೋಗಳನ್ನು ನೋಡಿ ಅದರಂತೆ ಪ್ರಯೋಗ ಮಾಡಿಕೊಂಡು ಈತ ಸಾವನ್ನಪ್ಪಿದ್ದಾನೆ. ಮೂರು ದಿನ ಮನೆಯಲ್ಲೇ ಶವವಿತ್ತು.

ಸತ್ತ ನಂತರ ಯಾರಾದರೂ ರೂಂ ಒಳಗೆ ಬಂದರೆ ಅನಾಹುತವಾಗಬಹುದು ಎಂದು ಅರಿತು ಯಾವ ರೀತಿ ಮನೆ ಒಳಗೆ ಬರಬೇಕು ಎಂದು ಸಾಯುವ ಮುನ್ನ ಎಂದು ನಕ್ಷೆ ಮಾಡಿ ಮನೆ ಕಿಟಕಿ ಬಾಗಿಲಿಗೆ ಅಂಟಿಸಿದ್ದ. ನಕ್ಷೆಯಲ್ಲಿ ಡೋರ್ ತೆಗೆದ ಕೂಡಲೇ ಕಿಟಕಿ ಓಪನ್ ಮಾಡಿ. ಯಾರೂ ಲೈಟ್ಸ್ ಆನ್ಮಾಡಬೇಡಿ ಎಂದು ನಿರ್ದೇಶನ ನೀಡಿದ್ದ.
ಮೂರು ದಿನದ ನಂತರ ಬಂದಿದ್ದ ಸ್ನೇಹಿತರು ಜೀವನ್ ಮೃತರಾಗಿರುವುದು ಕಂಡು ಕೂಡಲೇ ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ. ತಕ್ಷಣವೇ ಸ್ಥಳಕ್ಕೆ ಮಹದೇವಪುರ ಪೊಲೀಸರು ಧಾವಿಸಿದ್ದಾರೆ. ಮೊದಲು ಕೊಲೆ ಎಂದು ಶಂಕೆ ವ್ಯಕ್ತಪಡಿಸಿದ್ದರು. ಪ್ರಾಥಮಿಕ ತನಿಖೆಯ ಸಂದರ್ಭದಲ್ಲಿ ಜೀವನ್ ಬರೆದಿದ್ದ ಡೆತ್ ನೋಟ್ ಸಿಕ್ಕಿದೆ. ಸಾಧನೆ ಇಲ್ಲ ಮನೆಯವರು ಮಾತಾಡ್ತಿಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬರೆದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
Youth commits suicide because of failure in life in Bengaluru.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm