ಬ್ರೇಕಿಂಗ್ ನ್ಯೂಸ್
21-03-21 05:48 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ 21: ತಾನು ಏನೂ ಸಾಧನೆ ಮಾಡಿಲ್ಲ, ತನ್ನ ಬಗ್ಗೆ ಮನೆಯವರು ಏನೂ ಮಾತನಾಡುತ್ತಿಲ್ಲ ಎಂದು ಖಿನ್ನತೆಗೆ ಒಳಗಾಗಿ ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಜೀವನ್ ಅಂಬಾಟೆ ಆತ್ಮಹತ್ಯೆಗೆ ಶರಣಾದವರು. ಏನಾದರೂ ಸಾಧನೆ ಮಾಡಬೇಕೆಂಬ ತುಡಿತದೊಂದಿಗೆ ಬೀದರ್ನಿಂದ ಬೆಂಗಳೂರಿಗೆ ಬಂದಿದ್ದ ಜೀವನ್, ಪ್ರತಿಷ್ಠಿತ ಅಮೆಜಾನ್ ಕಂಪೆನಿಯಲ್ಲಿ ಟೀಂ ಲೀಡರ್ ಆಗಿ ಕೆಲಸ ಮಾಡುತ್ತಿದ್ದ. ಆದರೆ ಇತ್ತೀಚಿನ ದಿನಗಳಲ್ಲಿ ತಾನು ಏನೂ ಸಾಧನೆ ಮಾಡುತ್ತಿಲ್ಲ ಎಂದು ಕೊರಗಿ ಖಿನ್ನತೆಗೆ ಒಳಗಾಗುತ್ತಿದ್ದ. ಮನೆಯವರು ತನ್ನನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಗೊಣಗಾಡುತ್ತಿದ್ದ.
ಹೀಗಾಗಿ ತಾನು ಬದುಕಿರುವುದು ವೇಸ್ಟ್ ಎಂದು ನಿರ್ಧರಿಸಿದ್ದ.ಕೊನೆಗೆ ರೂಮ್ನ ಗೆಳೆಯರು ಊರಿಗೆ ಹೋಗಿದ್ದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಾಯುವ ಬಗ್ಗೆ ವಿಡಿಯೋಗಳನ್ನು ನೋಡಿ ಅದರಂತೆ ಪ್ರಯೋಗ ಮಾಡಿಕೊಂಡು ಈತ ಸಾವನ್ನಪ್ಪಿದ್ದಾನೆ. ಮೂರು ದಿನ ಮನೆಯಲ್ಲೇ ಶವವಿತ್ತು.

ಸತ್ತ ನಂತರ ಯಾರಾದರೂ ರೂಂ ಒಳಗೆ ಬಂದರೆ ಅನಾಹುತವಾಗಬಹುದು ಎಂದು ಅರಿತು ಯಾವ ರೀತಿ ಮನೆ ಒಳಗೆ ಬರಬೇಕು ಎಂದು ಸಾಯುವ ಮುನ್ನ ಎಂದು ನಕ್ಷೆ ಮಾಡಿ ಮನೆ ಕಿಟಕಿ ಬಾಗಿಲಿಗೆ ಅಂಟಿಸಿದ್ದ. ನಕ್ಷೆಯಲ್ಲಿ ಡೋರ್ ತೆಗೆದ ಕೂಡಲೇ ಕಿಟಕಿ ಓಪನ್ ಮಾಡಿ. ಯಾರೂ ಲೈಟ್ಸ್ ಆನ್ಮಾಡಬೇಡಿ ಎಂದು ನಿರ್ದೇಶನ ನೀಡಿದ್ದ.
ಮೂರು ದಿನದ ನಂತರ ಬಂದಿದ್ದ ಸ್ನೇಹಿತರು ಜೀವನ್ ಮೃತರಾಗಿರುವುದು ಕಂಡು ಕೂಡಲೇ ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ. ತಕ್ಷಣವೇ ಸ್ಥಳಕ್ಕೆ ಮಹದೇವಪುರ ಪೊಲೀಸರು ಧಾವಿಸಿದ್ದಾರೆ. ಮೊದಲು ಕೊಲೆ ಎಂದು ಶಂಕೆ ವ್ಯಕ್ತಪಡಿಸಿದ್ದರು. ಪ್ರಾಥಮಿಕ ತನಿಖೆಯ ಸಂದರ್ಭದಲ್ಲಿ ಜೀವನ್ ಬರೆದಿದ್ದ ಡೆತ್ ನೋಟ್ ಸಿಕ್ಕಿದೆ. ಸಾಧನೆ ಇಲ್ಲ ಮನೆಯವರು ಮಾತಾಡ್ತಿಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬರೆದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
Youth commits suicide because of failure in life in Bengaluru.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm