ಬ್ರೇಕಿಂಗ್ ನ್ಯೂಸ್
21-03-21 07:03 pm Headline Karnataka News Network ಕರ್ನಾಟಕ
ವಿಜಯಪುರ, ಮಾ.21: ಸೀಡಿ ಪ್ರಕರಣದ ಬಗ್ಗೆ ಸಮಗ್ರ ತನಿಖೆಯಾಗಬೇಕು. ಕಾಂಗ್ರೆಸ್ ಹಾಗೂ ಬಿಜೆಪಿಯ ಇಬ್ಬರು ಮಹಾನ್ ನಾಯಕರ ಬಳಿಯೇ ಸಿಡಿ ರೆಡಿ ಆಗುತ್ತದೆ. ಅವರು ಸೀಡಿ ರೆಡಿ ಮಾಡುವ ಪ್ಯಾಕ್ಟರಿಯನ್ನು ಹೊಂದಿದ್ದಾರೆ ಎಂದು ಬಿಜೆಪಿಯ ರೆಬಲ್ ಶಾಸಕ ಬಸವನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.
ಮಾಧ್ಯಮದ ಜೊತೆ ಮಾತನಾಡಿದ ಅವರು, ಜಲ ಸಂಪನ್ಮೂಲ, ಇಂಧನ ಇಲಾಖೆ ಹಾಗೂ ಬೆಂಗಳೂರು ನಗರಾಭಿವೃದ್ದ ಇಲಾಖೆಯನ್ನು ಮುಖ್ಯಮಂತ್ರಿಗೆ ತಮ್ಮ ಬಳಿಯೇ ಇಟ್ಟುಕೊಳ್ಳಬೇಕು ಎಂದು ಮೊದಲಿನಿಂದಲೂ ಇತ್ತು. ಮಾರ್ಚ್ ಎಂಡ್ ನಲ್ಲಿ ಸಾವಿರಾರು ಕೋಟಿ ಈ ಇಲಾಖೆಗಳಿಗೆ ಬಿಡುಗಡೆ ಆಗತ್ತೆ. ಆ ಹಣವನ್ನು ಹೇಗೆ ತೆಗೆದುಕೊಳ್ಳಬೇಕು ಎಂಬುದು ಮುಖ್ಯಮಂತ್ರಿ ಪ್ಲ್ಯಾನ್ ಆಗಿತ್ತು. ಅದಕ್ಕಾಗಿ ಜಾರಕಿಹೊಳಿ ಅವರನ್ನು ಹೀಗೆ ಕೇಸ್ ಒಂದರಲ್ಲಿ ಸಿಲುಕಿಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಹಿಂದೆ ಜಾರಕಿಹೊಳಿ ಅವರಿಗೆ ಅನಿವಾರ್ಯವಾಗಿ ಆ ಖಾತೆಯನ್ನು ಸಿಎಂ ಕೊಟ್ಟಿದ್ದರು. ಗೋವಿಂದ ಕಾರಜೋಳ, ಬೊಮ್ಮಾಯಿ, ಆರ್. ಅಶೋಕ ಅವರಿಗೆ ಕೊಡಬಹುದಾಗಿತ್ತು. ಯಡಿಯೂರಪ್ಪ ಅವರಿಗೆ ಈ ಮೂರು ಇಲಾಖೆಯನ್ನ ಯಾರಿಗೂ ಕೊಡೋಕೆ ಇಷ್ಟ ಇರಲಿಲ್ಲ. ವಿಜಯೇಂದ್ರನ ಕೈಯಲ್ಲೇ ಉಳಿಸಿಕೊಳ್ಳಬೇಕಾಗಿದೆ. ಹೀಗಾಗಿ ಮತ್ತೆ ಈ ಖಾತೆಗಳನ್ನು ಇಟ್ಟುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಪಂಚರಾಜ್ಯ ಚುನಾವಣೆ ಬಳಿಕ ನಾಯಕರ ಬದಲಾವಣೆ
ಮೂರು ರಾಜ್ಯದ ನಾಯಕರ ಬದಲಾವಣೆ ಮಾಡಬೇಕು ಎಂಬುದು ಬಹಳ ದಿನದಿಂದ ಚರ್ಚೆ ನಡೆದಿದೆ. ಪಂಚರಾಜ್ಯ ಚುನಾವಣೆಯ ಬಳಿಕ ಅದು ಬದಲಾವಣೆ ಆಗಲಿದೆ. ಉತ್ತರಾಖಂಡದಲ್ಲಿ ಬದಲಾವಣೆಗೆ ಆಗಿದೆ, ಇನ್ನು ಹರಿಯಾಣ ಹಾಗೂ ಕರ್ನಾಟಕದಲ್ಲಿ ಸಹಿತ ಬದಲಾವಣೆ ಆಗತ್ತೆ. ನನಗೆ ಕೇಂದ್ರದ ನಾಯಕರಿಂದ ಮಾಹಿತಿ ಗೊತ್ತಾಗಿದೆ ಎಂದ ಶಾಸಕ ಯತ್ನಾಳ್ ಹೇಳಿದ್ದಾರೆ.
Karnataka CM is behind the sex cd scandal of Ramesh Jarkiholi alleges Patil Yatnal in Vijayapura.
20-06-26 01:33 pm
HK News Staffer
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm