ಬ್ರೇಕಿಂಗ್ ನ್ಯೂಸ್
21-03-21 08:46 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ. 22: ಬ್ರಾಹ್ಮಣ ಸಮುದಾಯದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ, ಕೆಲವರ ವಿರೋಧಕ್ಕೆ ಕಾರಣವಾಗಿದ್ದ ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್ ಅವರಿಗೆ ಕೊಲೆ ಬೆದರಿಕೆ ಪತ್ರ ಬಂದಿದೆ. ಈ ವಿಚಾರವನ್ನು ಸ್ವತಃ ಬಿ.ಟಿ ಲಲಿತಾ ನಾಯಕ್ ಅವರೇ ಬಹಿರಂಗ ಪಡಿಸಿದ್ದಾರೆ.
ಬಂಡಾಯ ಸಾಹಿತಿ ಹಾಗೂ ರಾಜಕಾರಣಿಯಾಗಿ ಗುರುತಿಸಿಕೊಂಡಿರುವ ಬಿ.ಟಿ ಲಲಿತಾ ನಾಯಕ್ ಮಹಿಳೆಯರ ಪರ ಧ್ವನಿಯೆತ್ತುವ ಮೂಲಕ ಪರಿಚಿತರು. ಮಾಜಿ ಸಚಿವ ಎಚ್.ಎಂ. ರೇವಣ್ಣ ಅವರಿಗೆ ನಲವತ್ತು ವರ್ಷ ತುಂಬಿದ ಹಿನ್ನೆಲೆಯಲ್ಲಿ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ಲಲಿತಾ ನಾಯಕ್, ತಮಗೆ ಸೇರಿದಂತೆ ಹಲವು ಗಣ್ಯರಿಗೆ ಕೊಲೆ ಬೆದರಿಕೆ ಬಂದಿರುವ ಪತ್ರವನ್ನು ಉಲ್ಲೇಖಿಸಿ ಮಾತನಾಡಿದರು.
ಮೇ 1 ರಂದು ನನ್ನನ್ನು ಕೊಲೆ ಮಾಡುವುದಾಗಿ ಹೇಳಿ ನನಗೆ ಪತ್ರ ಬಂದಿತ್ತು. ಬಿಜೆಪಿ ಶಾಸಕ ಸಿ.ಟಿ. ರವಿ, ಸಂಪಾದಕ ರಂಗನಾಥ್(ಪಬ್ಲಿಕ್ ಟಿವಿ), ನಟ ಶಿವರಾಜ್ ಕುಮಾರ್ ಅವರನ್ನು ಕೊಲೆ ಮಾಡುತ್ತಾರಂತೆ. ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದೇನೆ. ಪೊಲೀಸರು ಅದನ್ನು ಪರಿಶೀಲನೆ ಮಾಡುತ್ತಿದ್ದಾರೆ. ಈ ಬೆದರಿಕೆಗಳಿಗೆ ನಾನು ಹೆದರುವವಳಲ್ಲ. ಸಿ.ಟಿ. ರವಿಯನ್ನು ಕೊಲೆ ಮಾಡಿದರೆ ನಾನು ಉಳಿಯುತ್ತೇನೆ. ನನ್ನ ಕೊಲೆ ಮಾಡಿದರೆ ಸಿಟಿ ರವಿ ಉಳಿಯುತ್ತಾರೆ. ಇಂತಹ ಸಂದಿಗ್ಧ ಪರಿಸ್ಥಿತಿ ಎದುರಾಗಿದೆ. ಕೊಲೆ ಮಾಡುವವರು ಎಲ್ಲಿದ್ದರೂ, ಕೊಲೆ ಮಾಡುತ್ತಾರೆ. ಹಾಗಾಗಿ ನಾನು ಹೆದರಿಕೆಯಿಲ್ಲದೆ ಸಮಾರಂಭದಲ್ಲಿ ಪಾಲ್ಗೊಂಡಿದ್ದೇನೆ ಎಂದು ಲಲಿತಾ ನಾಯಕ್ ಹೇಳಿದರು.
ಬ್ರಾಹ್ಮಣ ಹುಡುಗಿಯರು ಅಂತರ್ಜಾತಿ ಮದುವೆ ಮಾಡಿಕೊಳ್ಳುತ್ತಿದ್ದಾರೆ. ಇದನ್ನು ತಡೆಯಬೇಕು ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ. ಎಚ್.ಎಂ. ರೇವಣ್ಣ ಅವರು ಕೂಡ ಬ್ರಾಹ್ಮಣ ಸಮುದಾಯದ ಹುಡುಗಿಯನ್ನು ಮದುವೆಯಾಗಿದ್ದಾರೆ. ಅವರು ತುಂಬಾ ಚೆನ್ನಾಗಿ ಜೀವನ ನಡೆಸುತ್ತಿದ್ದಾರೆ. ಬ್ರಾಹ್ಮಣ ಸಮುದಾಯದವರು ಹೆಣ್ಣು ಮಕ್ಕಳು ಋತುಮತಿಯಾದ ವೇಳೆ ಕಣ್ಣಿಗೆ ಬಟ್ಟೆ ಕಟ್ಟಿ ಕಾಡಿಗೆ ಬಿಡುತ್ತಿದ್ದರು. ಆಗ ಅಲೆಮಾರಿ ಸಮುದಾಯ ಅವರನ್ನು ಮದುವೆ ಆಗುತ್ತಿದ್ದರು. ಈಗ ಅಂತರ್ಜಾತಿ ವಿವಾಹಗಳು ಪ್ರೀತಿ ಆಧಾರದ ಮೇಲೆ ನಡೆಯುತ್ತಿವೆ. ಪ್ರೀತಿ ಇರೋದ್ರಿಂದ ಜಾತಿ ಮೀರಿ ಮದುವೆಗಳಾಗುತ್ತಿವೆ. ಇದನ್ನು ಸ್ವಾಮೀಜಿ ಅರ್ಥ ಮಾಡಿಕೊಳ್ಳಬೇಕು ಎಂದು ತಿರುಗೇಟು ನೀಡಿದ್ದಾರೆ.
A letter has reached Lalitha Naik a social activist stating to Kill her along with Minister CT Ravi and Public Tv Ranganath on May 1st, 2021.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm