ಬ್ರೇಕಿಂಗ್ ನ್ಯೂಸ್
23-03-21 08:07 pm Headline Karnataka News Network ಕರ್ನಾಟಕ
ಕಾರವಾರ, ಮಾರ್ಚ್ 23: ಬೊಲೆರೋ ಕಾರು ಹಾಗೂ ಎರಡು ಲಾರಿಗಳ ನಡುವೆ ನಡೆದ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದು, ಮಕ್ಕಳು ಸೇರಿದಂತೆ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಬಿದರಿಯ ರಾಜೇಶ್ವರಿ ಪರಡ್ಡಿ (35) ಹಾಗೂ ಚಿಕ್ಕಮ್ಮ ಪಾಟೀಲ (28) ಮೃತ ಮಹಿಳೆಯರಾಗಿದ್ದು, ತಿಮ್ಮನ ಗೌಡ, ಹನುಮಂತ, ಲಕ್ಷ್ಮೀ, ಶ್ರುತಿ, ಮಕ್ಕಳಾದ ಆಕಾಶ್ ಹಾಗೂ ಅಪೇಕ್ಷಾ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸಲಾಗಿದೆ.
ಹೊಸ ಬೊಲೆರೊ ಕಾರು ಖರೀದಿಸಿದ್ದ ಕಾರಣ ಬಾಗಲಕೋಟೆ ಮೂಲದ ಒಂದೇ ಕುಟುಂಬದ ಎಂಟು ಮಂದಿ ಧರ್ಮಸ್ಥಳಕ್ಕೆ ಪ್ರಯಾಣಿಸುತ್ತಿದ್ದರು. ಯಲ್ಲಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ಅರಬೈಲ್ ಘಟ್ಟದಲ್ಲಿ ಲಾರಿಯೊಂದು ಚಾಲಕನ ನಿಯಂತ್ರಣಕ್ಕೆ ಸಿಗದೆ ತಿರುವಿನಲ್ಲಿ ಧರ್ಮಸ್ಥಳಕ್ಕೆ ಹೊರಟಿದ್ದವರ ಬೊಲೆರೊಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಮುಂದೆ ದೂಕಿದೆ. ಈ ವೇಳೆ ಎದುರು ಬರುತ್ತಿದ್ದ ಟಿಪ್ಪರ್ ಗೆ ಬೊಲೆರೊ ಡಿಕ್ಕಿಯಾಗಿದೆ. ಟಿಪ್ಪರ್ ಹಾಗೂ ಲಾರಿಯ ನಡುವೆ ಸಿಕ್ಕಿ ಬೊಲೆರೊ ಅಪ್ಪಚ್ಚಿಯಾಗಿದ್ದು, ಸ್ಥಳದಲ್ಲೇ ಓರ್ವ ಮಹಿಳೆ ಮೃತಪಟ್ಟಿದ್ದಾರೆ.

ಇನ್ನುಳಿದ ಏಳು ಮಂದಿಯನ್ನು ಬೊಲೆರೊದಿಂದ ಹೊರ ತೆಗೆದ ಸ್ಥಳೀಯರು ಹಾಗೂ ಪೊಲೀಸರು ಕೂಡಲೇ ತಾಲೂಕು ಆಸ್ಪತ್ರೆಗೆ ಸಾಗಿಸಿದರಾದರೂ ಓರ್ವ ಮಹಿಳೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಗಂಭೀರವಾಗಿ ಗಾಯಗೊಂಡಿರುವ ಆರು ಮಂದಿಗೆ ಸದ್ಯ ಚಿಕಿತ್ಸೆ ಮುಂದುವರಿದಿದೆ.
ಅಪಘಾತದಿಂದ ಘಟ್ಟದಲ್ಲಿ ಕೆಲ ಕಾಲ ವಾಹನಗಳ ಸಂಚಾರಕ್ಕೆ ಅಡ್ಡಿಯಾಯಿತು. ಸ್ಥಳಕ್ಕೆ ಸಿಪಿಐ ಸುರೇಶ್ ಯಳ್ಳೂರ್ ಹಾಗೂ ಪಿಎಸ್ಐ ಮಂಜುನಾಥ್ ಗೌಡರ ತೆರಳಿ ಪರಿಶೀಲನೆ ನಡೆಸಿ, ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.
Two women were killed on the spot after a Bolero car was hit by two trucks after driver lost control in Yellapur, Karwar. The family was said to be going to
Daramasthala.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm