ಬ್ರೇಕಿಂಗ್ ನ್ಯೂಸ್
24-03-21 11:08 am Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಮಾ.24: ಕಾಡಿನಿಂದ ನಾಡಿಗೆ ಬಂದಿದ್ದ ಪ್ರಾಣಿಯೊಂದಿಗೆ ಜನ ಸೆಲ್ಫಿ, ಫೋಟೋ ಕ್ಲಿಕ್ಕಿಸಿಕೊಂಡು ಸಂತಸಪಟ್ಟ ಅಪರೂಪದ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆ ಕೊಟ್ಟಿಗೆಹಾರದಲ್ಲಿ ನಡೆದಿದೆ.
ತಡರಾತ್ರಿ ಕಾಡುಪಾಪವೊಂದು ಕಾಡಿನಿಂದ ಕೊಟ್ಟಿಗೆಹಾರದ ಪೆಟ್ರೋಲ್ ಬಂಕ್ಗೆ ದಾರಿತಪ್ಪಿ ಬಂದಿದ್ದು ನಾಯಿಗಳಿಂದ ಅಪರೂಪದ ಅತಿಥಿಯನ್ನು ರಕ್ಷಿಸಿದ್ದಾರೆ. ಅಡವಿ ಪಾಪನ ಕಂಡು ಜನ ಸಂತಸಗೊಂಡಿದ್ದಾರೆ. ಮೊದಲಿಗೆ ಭಯವಾದರೂ ಅದು ಕಾಡುಪಾಪ ಎಂದು ತಿಳಿದ ಮೇಲೆ ಪೆಟ್ರೋಲ್ ಬಂಕ್ಗೆ ಬಂದಿದ್ದ ಸವಾರರು ಕಾಡುಪಾಪದೊಂದಿಗೆ ಸೆಲ್ಫಿ, ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.

ಇನ್ನು ಕಾಡಿನಿಂದ ದಾರಿ ತಪ್ಪಿ ಬಂದಿದ್ದ ಕಾಡುಪಾಪವನ್ನು ಬೀದಿ ನಾಯಿಗಳು ದಾಳಿ ನಡೆಸಿದ್ದವು. ಸದ್ಯ ನಾಯಿ ದಾಳಿಯಿಂದ ಸ್ಥಳೀಯರು ಕಾಡುಪಾಪವನ್ನು ರಕ್ಷಿಸಿದ್ದಾರೆ. ಅಪರೂಪದ ಪ್ರಾಣಿಕಂಡು ಚಕಿತರಾದ ಜನರು ಅದರ ಜೊತೆ ಸೆಲ್ಫಿ, ಫೋಟೋ ಕ್ಲಿಕ್ಕಿಸಿಕೊಂಡು ಸಂತಸಗೊಂಡಿದ್ದಾರೆ. ಬಳಿಕ ಅರಣ್ಯ ಇಲಾಖೆ ಸಿಬ್ಬಂದಿಗೆ ವಿಷಯ ತಿಳಿಸಿ ಅವರ ಸಮ್ಮುಖದಲ್ಲೇ ಚಾರ್ಮಾಡಿ ಅರಣ್ಯದಲ್ಲಿ ಕಾಡುಪಾಪ ಬಿಟ್ಟು ಬಂದಿದ್ದಾರೆ.
ಇನ್ನು ಕಾಡುಪಾಪಗಳಿಗೆ ದೊಡ್ಡ ಕಣ್ಣು(ಪಾಪೆ) ಇರುವುದರಿಂದ ಅದನ್ನು ಅಡವಿ ಪಾಪ ಎಂದೂ ಸಹ ಕರೆಯುತ್ತಾರೆ. ಕಾಡು ಪ್ರಾಣಿಗಳಲ್ಲೇ ಇದು ಅತ್ಯಂತ ಮುಗ್ಧ ಜೀವಿ. ಕಾಡುಪಾಪಗಳಿಗೆ ಹೆಚ್ಚು ನಾಚಿಕೆ ಸ್ವಭಾವವಿರುತ್ತೆ. ಇವು ನಿಶಾಚರಿ ಜೀವಿಗಳಾದ್ದರಿಂದ ಜನರ ಕಣ್ಣಿಗೆ ಬೀಳುವುದು ಅಪರೂಪ. ತಂಪು ಹವೆಯ ಎಲೆ ತೋಟಗಳು, ಮಾವಿನಮರ, ನೀಲಗಿರಿ, ಆಲ, ಅರಳಿ, ಹುಣಸೆ ಮರಗಳಲ್ಲಿ ಇವು ಬೀಡು ಬಿಡುತ್ತವೆ. ಹಣ್ಣು, ಕಾಯಿ, ಕೀಟ, ಜೀರುಂಡೆ, ಮಿಡತೆ, ಹಲ್ಲಿ, ಹಾವುರಾಣಿ, ಹಕ್ಕಿಗಳ ಮೊಟ್ಟೆ, ಮರಗಪ್ಪೆ ತಿನ್ನುತ್ತವೆ ಎಂದು ಪ್ರಾಣಿ ಪ್ರಿಯರು ಹೇಳುತ್ತಾರೆ.
Slender loris also called as kadu papa was found in Chikmagalur we're people thronged to click selfies with the animal.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm