ಬ್ರೇಕಿಂಗ್ ನ್ಯೂಸ್
21-08-20 03:00 pm Headline Karnataka News Network ಕರ್ನಾಟಕ
ಕೊಪ್ಪಳ, ಆಗಸ್ಟ್ 21: ಕೊರೊನಾ ನಿರ್ಬಂಧದ ನಡುವೆಯೂ ಇಲ್ಲಿನ ಕುಷ್ಟಗಿ ತಾಲೂಕಿನಲ್ಲಿ ಅವಧೂತ ಶುಕಮುನಿ ದೇವರ ಆರಾಧನೆಯ ಹೆಸರಲ್ಲಿ ಭಕ್ತರು ಬಲವಂತವಾಗಿ ಅಡ್ಡಪಲ್ಲಕ್ಕಿ ಉತ್ಸವ ಆಚರಿಸಿದ ಘಟನೆ ನಡೆದಿದ್ದು ಪೊಲೀಸರು 50ಕ್ಕೂ ಅಧಿಕ ಮಂದಿಯನ್ನು ಬಂಧಿಸಿದ್ದಾರೆ.
ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ದೋಟಿಹಾಳ ಗ್ರಾಮದ ಶ್ರೀ ಅವಧೂತ ಶುಕಮುನಿ ದೇವರ ಆರಾಧನೆ ಮಹೋತ್ಸವ ನಿಮಿತ್ತ ಪ್ರತಿ ವರ್ಷ ಅಡ್ಡಪಲ್ಲಕ್ಕಿ ಉತ್ಸವ ಅದ್ಧೂರಿಯಾಗಿ ಆಚರಿಸಲಾಗುತ್ತಿತ್ತು. ಆದರೆ ಈ ಬಾರಿ ಕೊರೊನಾ ಭೀತಿಯಿಂದ ತಲತಲಾಂತರದಿಂದ ಆಚರಿಸಿಕೊಂಡು ಬಂದಿದ್ದ ಅಡ್ಡಪಲ್ಲಕ್ಕಿ ಉತ್ಸವವನ್ನು ಸರಳವಾಗಿ ಆಚರಿಸಲು ದೇವಸ್ಥಾನದ ಆಡಳಿತ ನಿರ್ಧರಿಸಿತ್ತು.

ಇದರಂತೆ, ನಿನ್ನೆ ರಾತ್ರಿ ಅಡ್ಡಪಲ್ಲಕ್ಕಿ ಉತ್ಸವ ಮೆರವಣಿಗೆ ಆರಂಭವಾಗುತ್ತಿದಂತೆ ಏಕಾಏಕಿ ಕೆಲವು ಭಕ್ತರು ಸೇರಿ, ದೇವಸ್ಥಾನದ ಮುಖ್ಯದ್ವಾರದ ಬಾಗಿಲು ಒಡೆಯಲು ಆರಂಭಿಸಿದ್ದಾರೆ. ಕೊನೆಗೆ ದೇವಸ್ಥಾನದ ಬಾಗಿಲು ಮುರಿದು ಪಲ್ಲಕ್ಕಿಯನ್ನು ಹೊರ ತಂದಿದ್ದು ಗ್ರಾಮದಲ್ಲಿ ಮೆರವಣಿಗೆ ಮಾಡಿದ್ದಾರೆ. ಈ ಮಧ್ಯೆ ಪಲ್ಲಕ್ಕಿ ಹೊರಬರುತ್ತಿದಂತೆ ಅಲ್ಲಿಯೇ ನಿಲ್ಲಿಸಿದ್ದ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಪೊಲೀಸ್ ವಾಹನದ ಗಾಜು ಪುಡಿಯಾಗಿದೆ.
ಅಡ್ಡಪಲ್ಲಕ್ಕಿ ಉತ್ಸವದ ಮೆರವಣಿಗೆ ನಡೆಸಲು ತಹಶೀಲ್ದಾರರು ನಿರ್ಬಂಧ ಹೇರಿದ್ದರೂ ಸಾವಿರಾರು ಮಂದಿ ಜನಜಂಗುಳಿ ಮಧ್ಯೆ ಪಲ್ಲಕ್ಕಿ ಉತ್ಸವ ಆಚರಣೆ ಮಾಡಿದ್ದಾರೆ. ಸ್ಥಳದಲ್ಲಿ ಬೀಡು ಬಿಟ್ಟಿದ್ದ ಕುಷ್ಟಗಿ ತಹಶೀಲ್ದಾರ್ ಎಂ.ಸಿದ್ದೇಶ ಸೇರಿದಂತೆ ಪೊಲೀಸ್ ಅಧಿಕಾರಿಗಳ ಮಾತಿಗೆ ಒಪ್ಪದೆ ಜನರು ಮೆರವಣಿಗೆ ನಡೆಸಿದ್ದಾರೆ. ಕೊನೆಗೆ ಪೊಲೀಸರು ಮತ್ತು ಜನರ ನಡುವೆ ಮಾತಿನ ಚಕಮಕಿ ನಡೆದು, ಪೊಲೀಸರು ಲಾಠಿ ಬೀಸಿದ ಚದುರಿಸುವ ಪ್ರಯತ್ನವನ್ನೂ ಮಾಡಿದರು. ಒಂದು ಗಂಟೆ ಕಾಲದ ಪ್ರಹಸನದ ಬಳಿಕ ಗ್ರಾಮದ ಮಧ್ಯೆ ಜನರು ಪಲ್ಲಕ್ಕಿಯನ್ನು ಬಿಟ್ಟು ಓಡಿದ್ದಾರೆ. ಬಳಿಕ ಪೊಲೀಸರೇ ಪಲ್ಲಕ್ಕಿಯನ್ನು ಹೊತ್ತು ದೇವಸ್ಥಾನಕ್ಕೆ ತಂದಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ರಾತ್ರಿ ಸ್ಥಳಕ್ಕೆ ಎಸ್ಪಿ ಜಿ.ಸಂಗೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಂದಾಯ ನೀರಿಕ್ಷಕ ಮತ್ತು ಪೊಲೀಸ್ ಠಾಣೆ ಸಿಬ್ಬಂದಿಯ ಪ್ರತ್ಯೇಕ ದೂರಿನಂತೆ ಪೊಲೀಸರು 50ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm