ಬ್ರೇಕಿಂಗ್ ನ್ಯೂಸ್
24-03-21 05:18 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.24: ಸಿಂಗಲ್ ಹೆಂಡ್ತಿ ಹೇಳಿಕೆಗೆ ಬಿಜೆಪಿ, ಕಾಂಗ್ರೆಸ್ ಪಕ್ಷದ ನಾಯಕರಿಂದ ಭಾರೀ ವಿರೋಧ ಕೇಳಿಬರುತ್ತಲೇ ಆರೋಗ್ಯ ಸಚಿವ ಸುಧಾಕರ್ ತನ್ನ ಹೇಳಿಕೆ ಬಗ್ಗೆ ಕ್ಷಮೆ ಯಾಚಿಸಿದ್ದಾರೆ.
ಇಲ್ಲಿ ಯಾರೂ ಸತ್ಯ ಹರಿಶ್ಚಂದ್ರರು ಅಲ್ಲ. ಪತ್ನಿಯ ಹೊರತಾದ ಸಂಬಂಧ ಎಷ್ಟು ಮಂದಿ ಇಟ್ಟುಕೊಂಡಿಲ್ಲ. ತನಿಖೆ ನಡೆದರೆ ಎಲ್ಲ 224 ಶಾಸಕರ ನೈತಿಕತೆಯ ಬಗ್ಗೆಯೂ ತನಿಖೆಯಾಗಲಿ. ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ, ರಮೇಶ್ ಕುಮಾರ್ ಎಲ್ಲ ಏಕಪತ್ನಿ ವೃತ ಮಾಡುತ್ತಿದ್ದಾರೆಯೇ ಎಂದು ಸುಧಾಕರ್ ಪ್ರಶ್ನೆ ಮಾಡಿದ್ದರು. ಬಿಜೆಪಿ ನಾಯಕರ ವಿರುದ್ಧ ಹೇಳಿಕೆ ನೀಡುತ್ತಿದ್ದ ಕಾಂಗ್ರೆಸಿಗರನ್ನು ಗುರಿಯಾಗಿರಿಸಿ ಸುಧಾಕರ್ ಹೇಳಿಕೆ ನೀಡಿದ್ದು ವಿವಾದದ ರೂಪ ಪಡೆಯುತ್ತಲೇ ಬಿಜೆಪಿಯ ಕೆಲವು ಶಾಸಕರೇ ವಿರೋಧ ವ್ಯಕ್ತಪಡಿಸಿದ್ದರು. ಮಹಿಳಾ ಶಾಸಕಿಯರೂ ಈ ಬಗ್ಗೆ ಕಿಡಿಕಾರಿದ್ದರು.
ಇದಲ್ಲದೆ, ಸಿದ್ದರಾಮಯ್ಯ, ರೇಣುಕಾಚಾರ್ಯ, ದೇಶಪಾಂಡೆ ಮತ್ತಿತರ ಕೆಲವು ಶಾಸಕರು ಸುಧಾಕರ್ ಸದನದಲ್ಲೇ ಕ್ಷಮೆ ಕೇಳಬೇಕೆಂದು ಒತ್ತಾಯಿಸಿದ್ದರು. ವಿರೋಧ ಕೇಳಿಬಂದ ಹಿನ್ನೆಲೆಯಲ್ಲಿ ಸುಧಾಕರ್ ಟ್ವೀಟ್ ಮಾಡಿದ್ದು, ಕೆಲವು ನಾಯಕರ ಏಕಪಕ್ಷೀಯ ಮತ್ತು ಪೂರ್ವಾಗ್ರಹ ಪೀಡಿತ ಹೇಳಿಕೆಗಳಿಂದ ಬೇಸತ್ತು ಅವರ ನೈತಿಕತೆಯನ್ನು ಪ್ರಶ್ನಿಸಿ ಬೆಳಗ್ಗೆ ನಾನು ನೀಡಿದ್ದ ಹೇಳಿಕೆ ಬೇರೆ ಬೇರೆ ಆಯಾಮಗಳನ್ನು ಪಡೆದುಕೊಂಡಿದೆ. ಎಲ್ಲ 224 ಶಾಸಕರ ಬಗ್ಗೆ ಗೌರವ ಇಟ್ಟುಕೊಂಡಿದ್ದೇನೆ. ಇದರಿಂದ ಯಾರಿಗಾದರೂ ನೋವಾಗಿದ್ದಲ್ಲಿ ನಾನು ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
6 ಜನ ಮಂತ್ರಿಗಳ ವಿರುದ್ಧ ನಿರಂತರ ಶಂಕೆ, ಆರೋಪ ಮಾಡುತ್ತಿರುವಾಗ ಅವರಿಗಾಗಿರಬಹುದಾದ ಅವಮಾನ, ಮಾನಸಿಕ, ಭಾವನಾತ್ಮಕ ನೋವು ಅರಿವಾಗಲಿಲ್ಲ. ಆದರೆ ಎಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕು ಎನ್ನುವ ನನ್ನ ಹೇಳಿಕೆ ಕೆಲವರಿಗೆ ಬಹಳ ತಪ್ಪಾಗಿ ಕಾಣುತ್ತಿದೆ.
— Dr Sudhakar K (@mla_sudhakar) March 24, 2021
2/3
ನನ್ನ ಹೇಳಿಕೆಯನ್ನು ಶಬ್ದಶಃ ಅರ್ಥೈಸದೆ, ನಮ್ಮ ಸ್ಥಾನದಲ್ಲಿ ನಿಂತು, ಅದರ ಹಿಂದಿರುವ ಆಘಾತ, ವೇದನೆ, ಭಾವನೆಗಳನ್ನು ಅವಲೋಕಿಸಿ, ಅರ್ಥ ಮಾಡಿಕೊಳ್ಳಬೇಕೆಂದು ನಿವೇದನೆ ಮಾಡಿಕೊಳ್ಳುತ್ತೇನೆ.
— Dr Sudhakar K (@mla_sudhakar) March 24, 2021
3/3
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm