ಬ್ರೇಕಿಂಗ್ ನ್ಯೂಸ್
24-03-21 05:18 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.24: ಸಿಂಗಲ್ ಹೆಂಡ್ತಿ ಹೇಳಿಕೆಗೆ ಬಿಜೆಪಿ, ಕಾಂಗ್ರೆಸ್ ಪಕ್ಷದ ನಾಯಕರಿಂದ ಭಾರೀ ವಿರೋಧ ಕೇಳಿಬರುತ್ತಲೇ ಆರೋಗ್ಯ ಸಚಿವ ಸುಧಾಕರ್ ತನ್ನ ಹೇಳಿಕೆ ಬಗ್ಗೆ ಕ್ಷಮೆ ಯಾಚಿಸಿದ್ದಾರೆ.
ಇಲ್ಲಿ ಯಾರೂ ಸತ್ಯ ಹರಿಶ್ಚಂದ್ರರು ಅಲ್ಲ. ಪತ್ನಿಯ ಹೊರತಾದ ಸಂಬಂಧ ಎಷ್ಟು ಮಂದಿ ಇಟ್ಟುಕೊಂಡಿಲ್ಲ. ತನಿಖೆ ನಡೆದರೆ ಎಲ್ಲ 224 ಶಾಸಕರ ನೈತಿಕತೆಯ ಬಗ್ಗೆಯೂ ತನಿಖೆಯಾಗಲಿ. ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ, ರಮೇಶ್ ಕುಮಾರ್ ಎಲ್ಲ ಏಕಪತ್ನಿ ವೃತ ಮಾಡುತ್ತಿದ್ದಾರೆಯೇ ಎಂದು ಸುಧಾಕರ್ ಪ್ರಶ್ನೆ ಮಾಡಿದ್ದರು. ಬಿಜೆಪಿ ನಾಯಕರ ವಿರುದ್ಧ ಹೇಳಿಕೆ ನೀಡುತ್ತಿದ್ದ ಕಾಂಗ್ರೆಸಿಗರನ್ನು ಗುರಿಯಾಗಿರಿಸಿ ಸುಧಾಕರ್ ಹೇಳಿಕೆ ನೀಡಿದ್ದು ವಿವಾದದ ರೂಪ ಪಡೆಯುತ್ತಲೇ ಬಿಜೆಪಿಯ ಕೆಲವು ಶಾಸಕರೇ ವಿರೋಧ ವ್ಯಕ್ತಪಡಿಸಿದ್ದರು. ಮಹಿಳಾ ಶಾಸಕಿಯರೂ ಈ ಬಗ್ಗೆ ಕಿಡಿಕಾರಿದ್ದರು.
ಇದಲ್ಲದೆ, ಸಿದ್ದರಾಮಯ್ಯ, ರೇಣುಕಾಚಾರ್ಯ, ದೇಶಪಾಂಡೆ ಮತ್ತಿತರ ಕೆಲವು ಶಾಸಕರು ಸುಧಾಕರ್ ಸದನದಲ್ಲೇ ಕ್ಷಮೆ ಕೇಳಬೇಕೆಂದು ಒತ್ತಾಯಿಸಿದ್ದರು. ವಿರೋಧ ಕೇಳಿಬಂದ ಹಿನ್ನೆಲೆಯಲ್ಲಿ ಸುಧಾಕರ್ ಟ್ವೀಟ್ ಮಾಡಿದ್ದು, ಕೆಲವು ನಾಯಕರ ಏಕಪಕ್ಷೀಯ ಮತ್ತು ಪೂರ್ವಾಗ್ರಹ ಪೀಡಿತ ಹೇಳಿಕೆಗಳಿಂದ ಬೇಸತ್ತು ಅವರ ನೈತಿಕತೆಯನ್ನು ಪ್ರಶ್ನಿಸಿ ಬೆಳಗ್ಗೆ ನಾನು ನೀಡಿದ್ದ ಹೇಳಿಕೆ ಬೇರೆ ಬೇರೆ ಆಯಾಮಗಳನ್ನು ಪಡೆದುಕೊಂಡಿದೆ. ಎಲ್ಲ 224 ಶಾಸಕರ ಬಗ್ಗೆ ಗೌರವ ಇಟ್ಟುಕೊಂಡಿದ್ದೇನೆ. ಇದರಿಂದ ಯಾರಿಗಾದರೂ ನೋವಾಗಿದ್ದಲ್ಲಿ ನಾನು ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
6 ಜನ ಮಂತ್ರಿಗಳ ವಿರುದ್ಧ ನಿರಂತರ ಶಂಕೆ, ಆರೋಪ ಮಾಡುತ್ತಿರುವಾಗ ಅವರಿಗಾಗಿರಬಹುದಾದ ಅವಮಾನ, ಮಾನಸಿಕ, ಭಾವನಾತ್ಮಕ ನೋವು ಅರಿವಾಗಲಿಲ್ಲ. ಆದರೆ ಎಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕು ಎನ್ನುವ ನನ್ನ ಹೇಳಿಕೆ ಕೆಲವರಿಗೆ ಬಹಳ ತಪ್ಪಾಗಿ ಕಾಣುತ್ತಿದೆ.
— Dr Sudhakar K (@mla_sudhakar) March 24, 2021
2/3
ನನ್ನ ಹೇಳಿಕೆಯನ್ನು ಶಬ್ದಶಃ ಅರ್ಥೈಸದೆ, ನಮ್ಮ ಸ್ಥಾನದಲ್ಲಿ ನಿಂತು, ಅದರ ಹಿಂದಿರುವ ಆಘಾತ, ವೇದನೆ, ಭಾವನೆಗಳನ್ನು ಅವಲೋಕಿಸಿ, ಅರ್ಥ ಮಾಡಿಕೊಳ್ಳಬೇಕೆಂದು ನಿವೇದನೆ ಮಾಡಿಕೊಳ್ಳುತ್ತೇನೆ.
— Dr Sudhakar K (@mla_sudhakar) March 24, 2021
3/3
05-05-25 01:30 pm
HK News Desk
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
05-05-25 11:10 pm
HK News Desk
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
05-05-25 10:59 pm
Mangalore Correspondent
Suhas Shetty murder, MP Brijesh Chowta, Param...
05-05-25 10:43 pm
Mangalore Suhas Shetty murder, BJP Umanath Ko...
05-05-25 07:15 pm
MLA Harish Poonja, Dinesh Gundurao: ಬುರ್ಖಾಧಾರ...
05-05-25 05:10 pm
Suhas Shetty Murder, VHP, Bajpe Police: ಸುಹಾಸ...
05-05-25 03:24 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm