ಬ್ರೇಕಿಂಗ್ ನ್ಯೂಸ್
25-03-21 07:45 pm Headline Karnataka News Network ಕರ್ನಾಟಕ
ಕೊಲ್ಕತ್ತಾ, ಮಾ.25: ದೇಶದಲ್ಲಿ 30 ಶೇಕಡಾ ಇರುವ ಮುಸ್ಲಿಮರು ಒಂದಾದರೆ, ನಾಲ್ಕು ಪಾಕಿಸ್ಥಾನವನ್ನು ಮಾಡಿಯೇವು. ನಾವು ಒಟ್ಟಾಗಿ ನಾಲ್ಕು ಪಾಕಿಸ್ಥಾನಗಳನ್ನು ಸೃಷ್ಟಿಸಿದರೆ, ಇಲ್ಲಿರುವ 70 ಶೇಕಡಾ ಇತರರು ಎಲ್ಲಿ ಹೋಗಬೇಕು ಎಂದು ಪಶ್ಚಿಮ ಬಂಗಾಳದ ಟಿಎಂಸಿ ನಾಯಕನೊಬ್ಬ ನೀಡಿರುವ ಹೇಳಿಕೆ ಚುನಾವಣೆ ಹೊತ್ತಲ್ಲಿ ವಿವಾದದ ಕಿಡಿ ಎಬ್ಬಿಸಿದೆ.
ಪಶ್ಚಿಮ ಬಂಗಾಳದ ಬೀರ್ ಭೂಮ್ ವಿಧಾನಸಭಾ ಕ್ಷೇತ್ರದಲ್ಲಿ ಟಿಎಂಸಿ ನಾಯಕ ಶೇಖ್ ಆಲಂ ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ ಈ ಹೇಳಿಕೆಯನ್ನು ನೀಡಿದ್ದು, ಹೇಳಿಕೆಯ ವಿಡಿಯೋವನ್ನು ಪಶ್ಚಿಮ ಬಂಗಾಳ ಬಿಜೆಪಿ ಸಹ ಪ್ರಭಾರಿ ಅಮಿತ್ ಮಾಳವೀಯ ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ. ಅಲ್ಲದೆ, ಈ ಮಾತನ್ನು ಅಲ್ಲಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪರವಾಗಿ ಪಕ್ಷದ ನಾಯಕ ಕೊಟ್ಟಿದ್ದಾರೆ. ಮಮತಾ ಈ ಮಾತನ್ನು ಒಪ್ಪಿಕೊಳ್ಳುತ್ತಾರೆಯೇ ಎಂದು ಪ್ರಶ್ನಿಸಿದ್ದಾರೆ.
ಮಮತಾ ಬ್ಯಾನರ್ಜಿ ಕಳೆದ ಹತ್ತು ವರ್ಷಗಳಿಂದ ನಡೆಸಿರುವ ಮುಸ್ಲಿಂ ತುಷ್ಟೀಕರಣದ ನೀತಿಯಿಂದಾಗಿ ಶೇಖ್ ಆಲಂ ದೇಶದಲ್ಲಿ ನಾಲ್ಕು ಪಾಕಿಸ್ಥಾನಗಳನ್ನು ಸೃಷ್ಟಿ ಮಾಡುವ ಹೇಳಿಕೆ ನೀಡಲು ಧೈರ್ಯ ತೋರಿದ್ದಾನೆ. ಇವರು ತಮ್ಮ ಆಡಳಿತದಲ್ಲಿ ಪಶ್ಚಿಮ ಬಂಗಾಳದ ಬಹುಸಂಖ್ಯಾತ ನಾಗರಿಕರನ್ನು ದ್ವಿತೀಯ ದರ್ಜೆ ನಾಗರಿಕರನ್ನಾಗಿ ಮಾಡಿದ್ದಾರೆ. ದುರ್ಗಾ ವಿಸರ್ಜನೆ ಮಾಡುವುದಕ್ಕೂ ಬಹುಸಂಖ್ಯಾತರು ಕೋರ್ಟ್ ಪರ್ಮಿಷನ್ ಪಡೆಯಬೇಕಾದ ಸ್ಥಿತಿಯಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಲಂ ನೀಡಿರುವ ಹೇಳಿಕೆಯ ವಿಡಿಯೋದಲ್ಲಿ ಆತನ ಎಚ್ಚರಿಕೆಯ ಮಾತುಗಳು ಹೀಗಿವೆ. ‘’ದೇಶದಲ್ಲಿ 30 ಶೇಕಡಾ ಇದ್ದೇವೆ. ಉಳಿದವರು 70 ಶೇಕಡಾ ಇದ್ದಾರೆ. ಅವರು (ಬಿಜೆಪಿ) ಈ 70 ಶೇಕಡಾ ಮಂದಿಯನ್ನು ಮುಂದಿಟ್ಟುಕೊಂಡು ಪಶ್ಚಿಮ ಬಂಗಾಳದಲ್ಲಿ ಅಧಿಕಾರಕ್ಕೇರುತ್ತೇವೆಂದು ಕೊಂಡರೆ ಅದು ಭ್ರಮೆಯಷ್ಟೇ. ನಾವೊಂದು ವೇಳೆ ಎಲ್ಲ ಸೇರ್ಕೊಂಡು ಒಟ್ಟುಗೂಡಿದರೆ, ದೇಶದ ಮುಸ್ಲಿಮರೆಲ್ಲಾ ಒಗ್ಗಟ್ಟಾದರೆ, ನಾಲ್ಕು ಪಾಕಿಸ್ಥಾನಗಳನ್ನು ಸೃಷ್ಟಿಸಬಹುದು. ಹಾಗಾದರೆ, ದೇಶದ ಇತರೇ 70 ಶೇಕಡಾ ಜನ ಎಲ್ಲಿ ಹೋಗುತ್ತಾರೆ, ಹೇಳಿ...’’ ಎಂದು ಪ್ರಶ್ನೆ ಮಾಡಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ 27 ಶೇ. ಮುಸ್ಲಿಮ್ ಮತದಾರರಿದ್ದಾರೆ. ಅವರ ಮತಗಳೇ ಅಲ್ಲೀಗ ನಿರ್ಣಾಯಕ. ಇದೇ ಕಾರಣಕ್ಕೆ ಟಿಎಂಸಿ ನಾಯಕರು ಈ ರೀತಿಯ ಮಾತುಗಳನ್ನಾಡುತ್ತಿದ್ದಾರೆ ಎನ್ನುವ ಟೀಕೆ ಕೇಳಿಬರುತ್ತಿದೆ. ತನ್ನ ಹೇಳಿಕೆ ಬಗ್ಗೆ ನ್ಯೂಸ್ 18 ವಾಹಿನಿಗೆ ಪ್ರತಿಕ್ರಿಯೆ ನೀಡಿರುವ ಶೇಖ್ ಆಲಂ, ನಾಲ್ಕು ಪಾಕಿಸ್ಥಾನಗಳನ್ನು ಸೃಷ್ಟಿಸಬೇಕು ಎನ್ನುವುದು ನನ್ನ ಹೇಳಿಕೆಯ ಅರ್ಥವಲ್ಲ. ಎಲ್ಲರಿಗೂ ನಾನು ಹೇಳೋದು ಏನಂದ್ರೆ, ಮುಸ್ಲಿಮರನ್ನು ಬೆದರಿಸಲು ಬಂದ್ರೆ ನಾವು ಕೂಡ ಬಲವಾಗಿದ್ದೇವೆ ಎನ್ನುವುದನ್ನು ಹೇಳಿದ್ದೇನೆ ಅಷ್ಟೇ ಎಂದಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದ ಮತದಾನಕ್ಕೆ (ಮಾ.27) ಎರಡು ದಿನ ಇರುವಾಗ ಈ ರೀತಿಯ ಹೇಳಿಕೆ ನೀಡಿರುವುದು ರಾಜಕೀಯ ವಲಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಇದೇ ವೇಳೆ, ಈ ಹೇಳಿಕೆ ಬಿಜೆಪಿ ನಾಯಕರ ಪಾಲಿಗೆ ಆಹಾರವಾಗಿ ಪರಿಣಮಿಸಿದೆ.
Trinamool Congress (TMC) leader Sheikh Alam’s purported remarks that “four Pakistan” can be created if India’s “30% Muslims come together” drew flak from the Bharatiya Janata Party (BJP) on Thursday.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm