ಬ್ರೇಕಿಂಗ್ ನ್ಯೂಸ್
25-03-21 07:45 pm Headline Karnataka News Network ಕರ್ನಾಟಕ
ಕೊಲ್ಕತ್ತಾ, ಮಾ.25: ದೇಶದಲ್ಲಿ 30 ಶೇಕಡಾ ಇರುವ ಮುಸ್ಲಿಮರು ಒಂದಾದರೆ, ನಾಲ್ಕು ಪಾಕಿಸ್ಥಾನವನ್ನು ಮಾಡಿಯೇವು. ನಾವು ಒಟ್ಟಾಗಿ ನಾಲ್ಕು ಪಾಕಿಸ್ಥಾನಗಳನ್ನು ಸೃಷ್ಟಿಸಿದರೆ, ಇಲ್ಲಿರುವ 70 ಶೇಕಡಾ ಇತರರು ಎಲ್ಲಿ ಹೋಗಬೇಕು ಎಂದು ಪಶ್ಚಿಮ ಬಂಗಾಳದ ಟಿಎಂಸಿ ನಾಯಕನೊಬ್ಬ ನೀಡಿರುವ ಹೇಳಿಕೆ ಚುನಾವಣೆ ಹೊತ್ತಲ್ಲಿ ವಿವಾದದ ಕಿಡಿ ಎಬ್ಬಿಸಿದೆ.
ಪಶ್ಚಿಮ ಬಂಗಾಳದ ಬೀರ್ ಭೂಮ್ ವಿಧಾನಸಭಾ ಕ್ಷೇತ್ರದಲ್ಲಿ ಟಿಎಂಸಿ ನಾಯಕ ಶೇಖ್ ಆಲಂ ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ ಈ ಹೇಳಿಕೆಯನ್ನು ನೀಡಿದ್ದು, ಹೇಳಿಕೆಯ ವಿಡಿಯೋವನ್ನು ಪಶ್ಚಿಮ ಬಂಗಾಳ ಬಿಜೆಪಿ ಸಹ ಪ್ರಭಾರಿ ಅಮಿತ್ ಮಾಳವೀಯ ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ. ಅಲ್ಲದೆ, ಈ ಮಾತನ್ನು ಅಲ್ಲಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪರವಾಗಿ ಪಕ್ಷದ ನಾಯಕ ಕೊಟ್ಟಿದ್ದಾರೆ. ಮಮತಾ ಈ ಮಾತನ್ನು ಒಪ್ಪಿಕೊಳ್ಳುತ್ತಾರೆಯೇ ಎಂದು ಪ್ರಶ್ನಿಸಿದ್ದಾರೆ.
ಮಮತಾ ಬ್ಯಾನರ್ಜಿ ಕಳೆದ ಹತ್ತು ವರ್ಷಗಳಿಂದ ನಡೆಸಿರುವ ಮುಸ್ಲಿಂ ತುಷ್ಟೀಕರಣದ ನೀತಿಯಿಂದಾಗಿ ಶೇಖ್ ಆಲಂ ದೇಶದಲ್ಲಿ ನಾಲ್ಕು ಪಾಕಿಸ್ಥಾನಗಳನ್ನು ಸೃಷ್ಟಿ ಮಾಡುವ ಹೇಳಿಕೆ ನೀಡಲು ಧೈರ್ಯ ತೋರಿದ್ದಾನೆ. ಇವರು ತಮ್ಮ ಆಡಳಿತದಲ್ಲಿ ಪಶ್ಚಿಮ ಬಂಗಾಳದ ಬಹುಸಂಖ್ಯಾತ ನಾಗರಿಕರನ್ನು ದ್ವಿತೀಯ ದರ್ಜೆ ನಾಗರಿಕರನ್ನಾಗಿ ಮಾಡಿದ್ದಾರೆ. ದುರ್ಗಾ ವಿಸರ್ಜನೆ ಮಾಡುವುದಕ್ಕೂ ಬಹುಸಂಖ್ಯಾತರು ಕೋರ್ಟ್ ಪರ್ಮಿಷನ್ ಪಡೆಯಬೇಕಾದ ಸ್ಥಿತಿಯಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಲಂ ನೀಡಿರುವ ಹೇಳಿಕೆಯ ವಿಡಿಯೋದಲ್ಲಿ ಆತನ ಎಚ್ಚರಿಕೆಯ ಮಾತುಗಳು ಹೀಗಿವೆ. ‘’ದೇಶದಲ್ಲಿ 30 ಶೇಕಡಾ ಇದ್ದೇವೆ. ಉಳಿದವರು 70 ಶೇಕಡಾ ಇದ್ದಾರೆ. ಅವರು (ಬಿಜೆಪಿ) ಈ 70 ಶೇಕಡಾ ಮಂದಿಯನ್ನು ಮುಂದಿಟ್ಟುಕೊಂಡು ಪಶ್ಚಿಮ ಬಂಗಾಳದಲ್ಲಿ ಅಧಿಕಾರಕ್ಕೇರುತ್ತೇವೆಂದು ಕೊಂಡರೆ ಅದು ಭ್ರಮೆಯಷ್ಟೇ. ನಾವೊಂದು ವೇಳೆ ಎಲ್ಲ ಸೇರ್ಕೊಂಡು ಒಟ್ಟುಗೂಡಿದರೆ, ದೇಶದ ಮುಸ್ಲಿಮರೆಲ್ಲಾ ಒಗ್ಗಟ್ಟಾದರೆ, ನಾಲ್ಕು ಪಾಕಿಸ್ಥಾನಗಳನ್ನು ಸೃಷ್ಟಿಸಬಹುದು. ಹಾಗಾದರೆ, ದೇಶದ ಇತರೇ 70 ಶೇಕಡಾ ಜನ ಎಲ್ಲಿ ಹೋಗುತ್ತಾರೆ, ಹೇಳಿ...’’ ಎಂದು ಪ್ರಶ್ನೆ ಮಾಡಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ 27 ಶೇ. ಮುಸ್ಲಿಮ್ ಮತದಾರರಿದ್ದಾರೆ. ಅವರ ಮತಗಳೇ ಅಲ್ಲೀಗ ನಿರ್ಣಾಯಕ. ಇದೇ ಕಾರಣಕ್ಕೆ ಟಿಎಂಸಿ ನಾಯಕರು ಈ ರೀತಿಯ ಮಾತುಗಳನ್ನಾಡುತ್ತಿದ್ದಾರೆ ಎನ್ನುವ ಟೀಕೆ ಕೇಳಿಬರುತ್ತಿದೆ. ತನ್ನ ಹೇಳಿಕೆ ಬಗ್ಗೆ ನ್ಯೂಸ್ 18 ವಾಹಿನಿಗೆ ಪ್ರತಿಕ್ರಿಯೆ ನೀಡಿರುವ ಶೇಖ್ ಆಲಂ, ನಾಲ್ಕು ಪಾಕಿಸ್ಥಾನಗಳನ್ನು ಸೃಷ್ಟಿಸಬೇಕು ಎನ್ನುವುದು ನನ್ನ ಹೇಳಿಕೆಯ ಅರ್ಥವಲ್ಲ. ಎಲ್ಲರಿಗೂ ನಾನು ಹೇಳೋದು ಏನಂದ್ರೆ, ಮುಸ್ಲಿಮರನ್ನು ಬೆದರಿಸಲು ಬಂದ್ರೆ ನಾವು ಕೂಡ ಬಲವಾಗಿದ್ದೇವೆ ಎನ್ನುವುದನ್ನು ಹೇಳಿದ್ದೇನೆ ಅಷ್ಟೇ ಎಂದಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದ ಮತದಾನಕ್ಕೆ (ಮಾ.27) ಎರಡು ದಿನ ಇರುವಾಗ ಈ ರೀತಿಯ ಹೇಳಿಕೆ ನೀಡಿರುವುದು ರಾಜಕೀಯ ವಲಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಇದೇ ವೇಳೆ, ಈ ಹೇಳಿಕೆ ಬಿಜೆಪಿ ನಾಯಕರ ಪಾಲಿಗೆ ಆಹಾರವಾಗಿ ಪರಿಣಮಿಸಿದೆ.
Trinamool Congress (TMC) leader Sheikh Alam’s purported remarks that “four Pakistan” can be created if India’s “30% Muslims come together” drew flak from the Bharatiya Janata Party (BJP) on Thursday.
20-06-26 01:33 pm
HK News Staffer
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 04:21 pm
HK News Staffer
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm