ಬ್ರೇಕಿಂಗ್ ನ್ಯೂಸ್
25-03-21 10:22 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.25: ಬೆಳಗಾವಿ ಲೋಕಸಭೆ ಕ್ಷೇತ್ರ ಮತ್ತು ಬಸವಕಲ್ಯಾಣ ಹಾಗೂ ಮಸ್ಕಿ ಕ್ಷೇತ್ರದ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿ ಬಿಜೆಪಿ ಹೈಕಮಾಂಡ್ ಆದೇಶ ಮಾಡಿದೆ. ಬೆಳಗಾವಿಗೆ ಎಲ್ಲರ ನಿರೀಕ್ಷೆ ತಲೆಕೆಳಗು ಮಾಡಿ ಮಾಜಿ ಸಚಿವ ಸುರೇಶ್ ಅಂಗಡಿಯವರ ಪತ್ನಿ ಮಂಗಳಾ ಸುರೇಶ್ ಅಂಗಡಿಗೆ ಬಿಜೆಪಿ ಟಿಕೆಟ್ ನೀಡಿದೆ.
ಲೋಕಸಭೆಗೆ ಬಿಜೆಪಿ ಟಿಕೆಟ್ ನೀಡುವಂತೆ ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕರಿಂದ ಹಿಡಿದು ರಮೇಶ್ ಕತ್ತಿ ಸೇರಿದಂತೆ ಹಲವರು ಲಾಬಿ ನಡೆಸಿದ್ದರು. ಕೆಲವರಂತೂ ದೆಹಲಿಗೂ ಹೋಗಿ ಲಾಬಿ ನಡೆಸಿದ್ದರು. ವೆಂಕಟೇಶ್ವರ ಸ್ವಾಮೀಜಿ ಎಂಬವರು ತಾನೇ ಬಿಜೆಪಿ ಅಭ್ಯರ್ಥಿ ಎಂದು ಹೇಳಿ ನಾಮಪತ್ರವನ್ನೂ ಸಲ್ಲಿಸಿದ್ದರು. ಇದೇ ವೇಳೆ, ಸುರೇಶ್ ಅಂಗಡಿಯವರ ಪುತ್ರಿ ಶ್ರದ್ಧಾ ಹೆಸರು ಕೂಡ ಕೇಳಿಬಂದಿತ್ತು. ಆದರೆ, ಬಿಜೆಪಿ ಹೈಕಮಾಂಡ್ ಮಂಗಳಾ ಅಂಗಡಿಗೆ ಟಿಕೆಟ್ ಘೋಷಣೆ ಮಾಡಿ ಅಚ್ಚರಿ ಮೂಡಿಸಿದೆ.
ಇನ್ನು ಬಸವಕಲ್ಯಾಣ ಕ್ಷೇತ್ರದಲ್ಲಿ ಟಿಕೆಟ್ ನಿರೀಕ್ಷೆ ಮಾಡಿದ್ದ ಭಗವಂತ ಖೂಬಾಗೆ ನಿರಾಸೆಯಾಗಿದ್ದು ಶರಣು ಹೂಗಾರಗೆ ಟಿಕೆಟ್ ನೀಡಿದೆ. ಮಸ್ಕಿ ಕ್ಷೇತ್ರದಲ್ಲಿ ಪ್ರತಾಪಗೌಡ ಪಾಟೀಲ್ ಈಗಾಗಲೇ ನಾಮಪತ್ರ ಸಲ್ಲಿಸಿದ್ದು ಅವರನ್ನೇ ಬಿಜೆಪಿ ಅಭ್ಯರ್ಥಿಯಾಗಿಸಿದೆ.
ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಲ್ಲಿನ ಪ್ರಭಾವಿ ಮುಖಂಡ ಸತೀಶ್ ಜಾರಕಿಹೊಳಿಗೆ ಟಿಕೆಟ್ ನೀಡಿದ್ದು ಸಾಂಪ್ರದಾಯಿಕವಾಗಿ ಬಿಜೆಪಿಯ ಕ್ಷೇತ್ರ ಆಗಿದ್ದರೂ, ಪೈಪೋಟಿಗೆ ಕಾರಣವಾಗಲಿದೆ. ಎಪ್ರಿಲ್ 17 ರಂದು ಅಲ್ಲಿ ಚುನಾವಣೆ ನಡೆಯಲಿದೆ. ಬಿಜೆಪಿ ಸಚಿವರಾಗಿದ್ದ ಸುರೇಶ್ ಅಂಗಡಿ ನಿಧನದಿಂದ ತೆರವಾದ ಸ್ಥಾನಕ್ಕೆ ಬೆಳಗಾವಿ ಉಪ ಚುನಾವಣೆ ನಡೆಯುತ್ತಿದೆ.
Belagavi bypoll elections 2021 BJP ticket go to Angadi family.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm