ಬ್ರೇಕಿಂಗ್ ನ್ಯೂಸ್
25-03-21 10:22 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.25: ಬೆಳಗಾವಿ ಲೋಕಸಭೆ ಕ್ಷೇತ್ರ ಮತ್ತು ಬಸವಕಲ್ಯಾಣ ಹಾಗೂ ಮಸ್ಕಿ ಕ್ಷೇತ್ರದ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿ ಬಿಜೆಪಿ ಹೈಕಮಾಂಡ್ ಆದೇಶ ಮಾಡಿದೆ. ಬೆಳಗಾವಿಗೆ ಎಲ್ಲರ ನಿರೀಕ್ಷೆ ತಲೆಕೆಳಗು ಮಾಡಿ ಮಾಜಿ ಸಚಿವ ಸುರೇಶ್ ಅಂಗಡಿಯವರ ಪತ್ನಿ ಮಂಗಳಾ ಸುರೇಶ್ ಅಂಗಡಿಗೆ ಬಿಜೆಪಿ ಟಿಕೆಟ್ ನೀಡಿದೆ.
ಲೋಕಸಭೆಗೆ ಬಿಜೆಪಿ ಟಿಕೆಟ್ ನೀಡುವಂತೆ ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕರಿಂದ ಹಿಡಿದು ರಮೇಶ್ ಕತ್ತಿ ಸೇರಿದಂತೆ ಹಲವರು ಲಾಬಿ ನಡೆಸಿದ್ದರು. ಕೆಲವರಂತೂ ದೆಹಲಿಗೂ ಹೋಗಿ ಲಾಬಿ ನಡೆಸಿದ್ದರು. ವೆಂಕಟೇಶ್ವರ ಸ್ವಾಮೀಜಿ ಎಂಬವರು ತಾನೇ ಬಿಜೆಪಿ ಅಭ್ಯರ್ಥಿ ಎಂದು ಹೇಳಿ ನಾಮಪತ್ರವನ್ನೂ ಸಲ್ಲಿಸಿದ್ದರು. ಇದೇ ವೇಳೆ, ಸುರೇಶ್ ಅಂಗಡಿಯವರ ಪುತ್ರಿ ಶ್ರದ್ಧಾ ಹೆಸರು ಕೂಡ ಕೇಳಿಬಂದಿತ್ತು. ಆದರೆ, ಬಿಜೆಪಿ ಹೈಕಮಾಂಡ್ ಮಂಗಳಾ ಅಂಗಡಿಗೆ ಟಿಕೆಟ್ ಘೋಷಣೆ ಮಾಡಿ ಅಚ್ಚರಿ ಮೂಡಿಸಿದೆ.
ಇನ್ನು ಬಸವಕಲ್ಯಾಣ ಕ್ಷೇತ್ರದಲ್ಲಿ ಟಿಕೆಟ್ ನಿರೀಕ್ಷೆ ಮಾಡಿದ್ದ ಭಗವಂತ ಖೂಬಾಗೆ ನಿರಾಸೆಯಾಗಿದ್ದು ಶರಣು ಹೂಗಾರಗೆ ಟಿಕೆಟ್ ನೀಡಿದೆ. ಮಸ್ಕಿ ಕ್ಷೇತ್ರದಲ್ಲಿ ಪ್ರತಾಪಗೌಡ ಪಾಟೀಲ್ ಈಗಾಗಲೇ ನಾಮಪತ್ರ ಸಲ್ಲಿಸಿದ್ದು ಅವರನ್ನೇ ಬಿಜೆಪಿ ಅಭ್ಯರ್ಥಿಯಾಗಿಸಿದೆ.
ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಲ್ಲಿನ ಪ್ರಭಾವಿ ಮುಖಂಡ ಸತೀಶ್ ಜಾರಕಿಹೊಳಿಗೆ ಟಿಕೆಟ್ ನೀಡಿದ್ದು ಸಾಂಪ್ರದಾಯಿಕವಾಗಿ ಬಿಜೆಪಿಯ ಕ್ಷೇತ್ರ ಆಗಿದ್ದರೂ, ಪೈಪೋಟಿಗೆ ಕಾರಣವಾಗಲಿದೆ. ಎಪ್ರಿಲ್ 17 ರಂದು ಅಲ್ಲಿ ಚುನಾವಣೆ ನಡೆಯಲಿದೆ. ಬಿಜೆಪಿ ಸಚಿವರಾಗಿದ್ದ ಸುರೇಶ್ ಅಂಗಡಿ ನಿಧನದಿಂದ ತೆರವಾದ ಸ್ಥಾನಕ್ಕೆ ಬೆಳಗಾವಿ ಉಪ ಚುನಾವಣೆ ನಡೆಯುತ್ತಿದೆ.
Belagavi bypoll elections 2021 BJP ticket go to Angadi family.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 04:56 pm
HK News Desk
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm