ಬ್ರೇಕಿಂಗ್ ನ್ಯೂಸ್
25-03-21 10:22 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.25: ಬೆಳಗಾವಿ ಲೋಕಸಭೆ ಕ್ಷೇತ್ರ ಮತ್ತು ಬಸವಕಲ್ಯಾಣ ಹಾಗೂ ಮಸ್ಕಿ ಕ್ಷೇತ್ರದ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿ ಬಿಜೆಪಿ ಹೈಕಮಾಂಡ್ ಆದೇಶ ಮಾಡಿದೆ. ಬೆಳಗಾವಿಗೆ ಎಲ್ಲರ ನಿರೀಕ್ಷೆ ತಲೆಕೆಳಗು ಮಾಡಿ ಮಾಜಿ ಸಚಿವ ಸುರೇಶ್ ಅಂಗಡಿಯವರ ಪತ್ನಿ ಮಂಗಳಾ ಸುರೇಶ್ ಅಂಗಡಿಗೆ ಬಿಜೆಪಿ ಟಿಕೆಟ್ ನೀಡಿದೆ.
ಲೋಕಸಭೆಗೆ ಬಿಜೆಪಿ ಟಿಕೆಟ್ ನೀಡುವಂತೆ ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕರಿಂದ ಹಿಡಿದು ರಮೇಶ್ ಕತ್ತಿ ಸೇರಿದಂತೆ ಹಲವರು ಲಾಬಿ ನಡೆಸಿದ್ದರು. ಕೆಲವರಂತೂ ದೆಹಲಿಗೂ ಹೋಗಿ ಲಾಬಿ ನಡೆಸಿದ್ದರು. ವೆಂಕಟೇಶ್ವರ ಸ್ವಾಮೀಜಿ ಎಂಬವರು ತಾನೇ ಬಿಜೆಪಿ ಅಭ್ಯರ್ಥಿ ಎಂದು ಹೇಳಿ ನಾಮಪತ್ರವನ್ನೂ ಸಲ್ಲಿಸಿದ್ದರು. ಇದೇ ವೇಳೆ, ಸುರೇಶ್ ಅಂಗಡಿಯವರ ಪುತ್ರಿ ಶ್ರದ್ಧಾ ಹೆಸರು ಕೂಡ ಕೇಳಿಬಂದಿತ್ತು. ಆದರೆ, ಬಿಜೆಪಿ ಹೈಕಮಾಂಡ್ ಮಂಗಳಾ ಅಂಗಡಿಗೆ ಟಿಕೆಟ್ ಘೋಷಣೆ ಮಾಡಿ ಅಚ್ಚರಿ ಮೂಡಿಸಿದೆ.
ಇನ್ನು ಬಸವಕಲ್ಯಾಣ ಕ್ಷೇತ್ರದಲ್ಲಿ ಟಿಕೆಟ್ ನಿರೀಕ್ಷೆ ಮಾಡಿದ್ದ ಭಗವಂತ ಖೂಬಾಗೆ ನಿರಾಸೆಯಾಗಿದ್ದು ಶರಣು ಹೂಗಾರಗೆ ಟಿಕೆಟ್ ನೀಡಿದೆ. ಮಸ್ಕಿ ಕ್ಷೇತ್ರದಲ್ಲಿ ಪ್ರತಾಪಗೌಡ ಪಾಟೀಲ್ ಈಗಾಗಲೇ ನಾಮಪತ್ರ ಸಲ್ಲಿಸಿದ್ದು ಅವರನ್ನೇ ಬಿಜೆಪಿ ಅಭ್ಯರ್ಥಿಯಾಗಿಸಿದೆ.
ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಲ್ಲಿನ ಪ್ರಭಾವಿ ಮುಖಂಡ ಸತೀಶ್ ಜಾರಕಿಹೊಳಿಗೆ ಟಿಕೆಟ್ ನೀಡಿದ್ದು ಸಾಂಪ್ರದಾಯಿಕವಾಗಿ ಬಿಜೆಪಿಯ ಕ್ಷೇತ್ರ ಆಗಿದ್ದರೂ, ಪೈಪೋಟಿಗೆ ಕಾರಣವಾಗಲಿದೆ. ಎಪ್ರಿಲ್ 17 ರಂದು ಅಲ್ಲಿ ಚುನಾವಣೆ ನಡೆಯಲಿದೆ. ಬಿಜೆಪಿ ಸಚಿವರಾಗಿದ್ದ ಸುರೇಶ್ ಅಂಗಡಿ ನಿಧನದಿಂದ ತೆರವಾದ ಸ್ಥಾನಕ್ಕೆ ಬೆಳಗಾವಿ ಉಪ ಚುನಾವಣೆ ನಡೆಯುತ್ತಿದೆ.
Belagavi bypoll elections 2021 BJP ticket go to Angadi family.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm