ಬ್ರೇಕಿಂಗ್ ನ್ಯೂಸ್
26-03-21 12:46 pm Headline Karnataka News Network ಕರ್ನಾಟಕ
ಮಂಗಳೂರು, ಮಾ.26: ದಕ್ಷಿಣ ಕನ್ನಡ - ಕಾಸರಗೋಡು ಗಡಿಭಾಗ ವಿಟ್ಲ ಬಳಿಯ ಸಾಲೆತ್ತೂರಿನಲ್ಲಿ ನಿನ್ನೆ ತಡರಾತ್ರಿ ಪೊಲೀಸರು ಮತ್ತು ರೌಡಿಗಳ ಮಧ್ಯೆ ಜಟಾಪಟಿ ನಡೆದಿದೆ. ಮಂಜೇಶ್ವರ ಪೊಲೀಸರಿಂದ ತಪ್ಪಿಸಿಕೊಂಡು ಹೊರರಾಜ್ಯಕ್ಕೆ ಎಸ್ಕೇಪ್ ಆಗುತ್ತಿದ್ದ ರೌಡಿಗಳು ಪೊಲೀಸರ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾರೆ.

ಮಂಜೇಶ್ವರದ ಮೀಯಪದವಿನಲ್ಲಿ ನಿನ್ನೆ ಒಬ್ಬರಿಗೆ ಗನ್ ತೋರಿಸಿ ಬೆದರಿಸಿದ ಪ್ರಕರಣ ನಡೆದಿತ್ತು. ಈ ಬಗ್ಗೆ ದೂರು ಬಂದಿದ್ದ ಹಿನ್ನೆಲೆಯಲ್ಲಿ ಪೊಲೀಸರು ಮುರತ್ತಣೆ ಮತ್ತು ಮೀಯಪದವಿನ ನಡುವಿನ ರಸ್ತೆಯಲ್ಲಿ ಕಾರ್ಯಾಚರಣೆ ನಡೆಸಿದ್ದರು. ಆರೋಪಿಗಳು ಮುರತ್ತಣೆ ಭಾಗದಲ್ಲಿ ರೌಡಿಗಳಾಗಿದ್ದು ಪೊಲೀಸರು ಅವರ ಬಂಧನಕ್ಕೆ ಬಲೆ ಬೀಸಿದ್ದರು. ಆದರೆ, ಆರೋಪಿಗಳು ಮೀಯಪದವಿನತ್ತ ಪರಾರಿಯಾಗಿದ್ದು ಅಲ್ಲಿ ಅಡ್ಡಹಾಕಿದಾಗ ಪೊಲೀಸರ ಮೇಲೆ ಫೈರ್ ಮಾಡಲು ಯತ್ನಿಸಿದ್ದಾರೆ. ಪೊಲೀಸರು ಪ್ರತಿದಾಳಿ ನಡೆಸಿದ್ದು ಕಾರು ಬಿಟ್ಟು ನಾಲ್ವರು ಪರಾರಿಯಾಗಿದ್ದರು. ಬಳಿಕ ಕೆಲವು ಗೂಂಡಾಗಳು ಸೇರಿಕೊಂಡು ಕಾರನ್ನು ಮರಳಿ ವಶಕ್ಕೆ ಪಡೆಯಲು ಯತ್ನಿಸಿದ್ದು ಪೊಲೀಸರು ಅದಕ್ಕೆ ಅವಕಾಶ ಕೊಡಲಿಲ್ಲ. ಕಾರನ್ನು ವಶಕ್ಕೆ ಪಡೆದು ಠಾಣೆಗೆ ಒಯ್ದಿದ್ದರೆ, ಹೆಚ್ಚುವರಿ ಪೊಲೀಸರನ್ನು ಕರೆಸಿ ಕಾರ್ಯಾಚರಣೆಗೆ ಮುಂದಾಗಿದ್ದರು.

ಬಳಿಕ ಕಾಸರಗೋಡು ಜಿಲ್ಲೆಯಿಂದ ಆರೋಪಿಗಳು ಪರಾರಿಯಾಗುತ್ತಾರೆಂಬ ಮಾಹಿತಿ ಹಿನ್ನೆಲೆಯಲ್ಲಿ ಗಡಿಭಾಗದಲ್ಲಿ ಚೆಕ್ ಪೋಸ್ಟ್ ಹಾಕಲು ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರಿಗೆ ಮನವಿ ಮಾಡಿದ್ದರು. ಅದರಂತೆ, ವಿಟ್ಲ ಪೊಲೀಸರು ನಿನ್ನೆ ರಾತ್ರಿ ಸಾಲೆತ್ತೂರು ಬಳಿ ಬ್ಯಾರಿಕೇಡ್ ಇಟ್ಟು ರಸ್ತೆಗೆ ಅಡ್ಡ ಹಾಕಿದ್ದರು.
ಆರೋಪಿಗಳು ಹುಂಡೈ ಕಾರಿನಲ್ಲಿ ಆಗಮಿಸಿದ್ದು ನಿಲ್ಲಿಸಲು ಸೂಚಿಸಿದಾಗ ಲೆಕ್ಕಿಸದೆ ಬ್ಯಾರಿಕೇಡ್ ಗೆ ಡಿಕ್ಕಿಯಾಗಿಸಿದ್ದಾರೆ. ಈ ವೇಳೆ, ಬಂಧಿಸಲು ಯತ್ನಿಸಿದ ಎಸ್ಐ ವಿನೋದ್ ರೆಡ್ಡಿ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ ಎನ್ನಲಾಗುತ್ತಿದೆ.

ಆದರೆ, ಆರೋಪಿಗಳು ಕಾರನ್ನು ಬ್ಯಾರಿಕೇಡ್ ಗೆ ಡಿಕ್ಕಿಯಾಗಿಸಿದ್ದರಿಂದ ಕಾರಿನಲ್ಲಿದ್ದವರು ಗಾಯಗೊಂಡಿದ್ದಾರೆಂದು ದ.ಕ. ಎಸ್ಪಿ ಲಕ್ಷ್ಮೀಪ್ರಸಾದ್ ತಿಳಿಸಿದ್ದಾರೆ. ಅಲ್ಲದೆ ಘಟನೆ ವೇಳೆ ಎಸ್ಐ ವಿನೋದ್ ರೆಡ್ಡಿ ಮೇಲೆ ಫೈರ್ ಆಗಿಲ್ಲ ಎಂದು ಖಚಿತ ಪಡಿಸಿದ್ದಾರೆ.
ವಾರದ ಹಿಂದೆ, ಮಂಜೇಶ್ವರ ಠಾಣೆ ಪೊಲೀಸರು ರೌಡಿಸಂ ತೋರಿದ್ದ ನಾಲ್ವರನ್ನು ಬಂಧಿಸಿದ್ದರು. ಗನ್ ಹಿಡಿದು ಸ್ಟೇಟಸ್ ಹಾಕಿದ್ದಕ್ಕಾಗಿ ಬಂಧನ ನಡೆದಿತ್ತು. ಇದರ ಮುಂದುವರಿದ ಭಾಗ ಎನ್ನುವಂತೆ, ಅದೇ ತಂಡದ ಒಬ್ಬಾತ ಸ್ಥಳೀಯ ಒಬ್ಬರಿಗೆ ಗನ್ ತೋರಿಸಿ ಬೆದರಿಕೆ ಹಾಕಿದ್ದ. ಈ ಪ್ರಕರಣಕ್ಕೂ ಚುನಾವಣಾ ರಾಜಕೀಯಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಮಂಜೇಶ್ವರ ಪೊಲೀಸರು ತಿಳಿಸಿದ್ದಾರೆ.
In a shocking incident miscreants opened fire on Vittal sub-inspector (SI) Vinod Reddy. Four from Manjeshwar, Kasargod arrested regarding the incident.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm