ಬ್ರೇಕಿಂಗ್ ನ್ಯೂಸ್
28-03-21 05:11 pm Headline Karnataka News Network ಕರ್ನಾಟಕ
ಬೆಳಗಾವಿ,ಮಾ.28: ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಕೇಸ್ನಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಬಹಿರಂಗ ವಿಚಾರವಾಗಿ ಬೆಳಗಾವಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.
ಎಸ್ಐಟಿ ತನಿಖೆಯ ಬಳಿಕ ಪ್ರಕರಣದ ಸತ್ಯಾಂಶ ಗೊತ್ತಾಗಲಿದೆ. ನಾವು, ನೀವು ಏನೂ ಮಾಡಲು ಆಗುವುದಿಲ್ಲ. ಯುವತಿ ಬರಬೇಕು, ಬಂದ್ರೆ ಸತ್ಯಾಸತ್ಯತೆ ಗೊತ್ತಾಗಲಿದೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

20 ದಿನದಿಂದ ನೋಡ್ತಿರುವೆ, ದಿನಕ್ಕೊಂದು ಹೇಳಿಕೆ ಬರ್ತಿವೆ. ಎಸ್ಐಟಿಯವರೇ ಬೇಗ ಯುವತಿಯನ್ನ ಪತ್ತೆ ಹಚ್ಚಬೇಕು. ಸಿಡಿ ಕೇಸ್ನ ಸತ್ಯಾಂಶ ಬಂದ ಮೇಲೆ ಎಲ್ಲವೂ ಗೊತ್ತಾಗಲಿದೆ. ಪೊಲೀಸರು ಆದಷ್ಟುಬೇಗ ಸತ್ಯಾಂಶ ರಾಜ್ಯದ ಜನತೆಗೆ ತಿಳಿಸಲಿ. ಯುವತಿ ಬಂದು ಹೇಳಿಕೆ ಕೊಟ್ಟ ಬಳಿಕ ಕ್ರಮ ಕೈಗೊಳ್ಳಬೇಕು. ಸಿಡಿ ಕೇಸ್ ಬಿಜೆಪಿ, ಕಾಂಗ್ರೆಸ್ಗೆ ಪ್ಲಸ್, ಮೈನಸ್ ಆಗಲ್ಲ ಎಂದು ಬೆಳಗಾವಿ ‘ಕೈ’ ಅಭ್ಯರ್ಥಿ ಹಾಗೂ ರಮೇಶ್ ಸಹೋದರ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.
ಡಿ.ಕೆ. ಶಿವಕುಮಾರ್ ಬೆಳಗಾವಿಗೆ ಬರಲು ಕೆಲ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗಿದೆ. ಅಶ್ಲೀಲ ಸಿಡಿ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷರ ಹೆಸರು ಕೇಳಿಬಂದ ಹಿನ್ನೆಲೆ ಕೆಲ ಕಾರ್ಯಕರ್ತರು ಶಿವಕುಮಾರ್ ಭೇಟಿ ವಿರೋಧಿಸಿದ್ದಾರೆ. ಈ ಬಗ್ಗೆಯೂ ಸತೀಶ್ ಜಾರಕಿಹೊಳಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.
ಕಾಂಗ್ರೆಸ್ನ ಕೆಲ ಕಾರ್ಯಕರ್ತರ ಹೇಳಿಕೆ ಅವರ ವೈಯಕ್ತಿಕ ವಿಚಾರ. ರಮೇಶ್ ಬೆಂಬಲಿಗರ ಪ್ರತಿಭಟನೆಗೂ, ನಮಗೂ ಸಂಬಂಧವಿಲ್ಲ. ಬೆಳಗಾವಿ ಜಿಲ್ಲೆಯ ಗೋಕಾಕ್ನಲ್ಲಿ ರಮೇಶ್ ಬೆಂಬಲಿಗರು, ಬೆಂಗಳೂರಲ್ಲಿ ಡಿಕೆಶಿ ಬೆಂಬಲಿಗರು ಪ್ರತಿಭಟನೆ ಮಾಡ್ತಿದ್ದಾರೆ. ನಾವು ಇಂದು ಸಂಜೆ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಸಭೆ ನಡೆಸುತ್ತೇವೆ. ನಾಳೆ ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸುತ್ತೇವೆ ಎಂದು ಸತೀಶ್ ಹೇಳಿದ್ದಾರೆ.



ಬೆಳಗಾವಿಯಲ್ಲಿ ಡಿ.ಕೆ. ಶಿವಕುಮಾರ್ ವಿರುದ್ಧ ರಮೇಶ್ ಬೆಂಬಲಿಗರ ಪ್ರತಿಭಟನೆ
ಬೆಳಗಾವಿಗೆ ಡಿ.ಕೆ.ಶಿವಕುಮಾರ್ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾಕಾರ ರಮೇಶ್ ಬೆಂಬಲಿಗರು ಸಾಂಬ್ರಾ ಏರ್ಪೋರ್ಟ್ ತಲುಪಿದ್ದಾರೆ. ಡಿ.ಕೆ. ಶಿವಕುಮಾರ್ ವಿರುದ್ಧ ಪ್ರತಿಭಟನೆ ನಡೆಸಲು ಆಗಮಿಸಿದ ಬೆಂಬಲಿಗರನ್ನು ಪೊಲೀಸರು ವಿಮಾನ ನಿಲ್ದಾಣದ ಮುಂಭಾಗದಲ್ಲೇ ತಡೆದಿದ್ದಾರೆ. ಗೋಕಾಕ್ ಸೇರಿ ವಿವಿಧ ಕಡೆಗಳಿಂದ ಆಗಮಿಸಿದ ಬೆಂಬಲಿಗರು, ವಿಮಾನ ನಿಲ್ದಾಣದ ಸಮೀಪವಿರುವ ಮೈದಾನದಲ್ಲಿ ಜಮಾವಣೆಗೊಂಡಿದ್ದಾರೆ.



ಡಿ.ಕೆ. ಶಿವಕುಮಾರ್ ಬಂಧಿಸುವಂತೆ ಬೆಂಬಲಿಗರ ಘೋಷಣೆ
ಸಾಂಬ್ರಾ ಏರ್ಪೋರ್ಟ್ ಬಳಿ ಧರಣಿ ನಡೆಸುತ್ತಿರುವ ರಮೇಶ್ ಬೆಂಬಲಿಗರು ಕಪ್ಪುಬಾವುಟ ಹಿಡಿದು ‘ಗೋ ಬ್ಯಾಕ್ ಡಿಕೆಶಿ’ ಎಂದು ಘೋಷಣೆ ಕೂಗಿ ಆಕ್ರೋಶ ಹೊರಹಾಕುತ್ತಿದ್ದಾರೆ. ಏರ್ಪೋರ್ಟ್ ಸಮೀಪವಿರುವ ಮೈದಾನದಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm