ಬ್ರೇಕಿಂಗ್ ನ್ಯೂಸ್
28-03-21 05:11 pm Headline Karnataka News Network ಕರ್ನಾಟಕ
ಬೆಳಗಾವಿ,ಮಾ.28: ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಕೇಸ್ನಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಬಹಿರಂಗ ವಿಚಾರವಾಗಿ ಬೆಳಗಾವಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.
ಎಸ್ಐಟಿ ತನಿಖೆಯ ಬಳಿಕ ಪ್ರಕರಣದ ಸತ್ಯಾಂಶ ಗೊತ್ತಾಗಲಿದೆ. ನಾವು, ನೀವು ಏನೂ ಮಾಡಲು ಆಗುವುದಿಲ್ಲ. ಯುವತಿ ಬರಬೇಕು, ಬಂದ್ರೆ ಸತ್ಯಾಸತ್ಯತೆ ಗೊತ್ತಾಗಲಿದೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
20 ದಿನದಿಂದ ನೋಡ್ತಿರುವೆ, ದಿನಕ್ಕೊಂದು ಹೇಳಿಕೆ ಬರ್ತಿವೆ. ಎಸ್ಐಟಿಯವರೇ ಬೇಗ ಯುವತಿಯನ್ನ ಪತ್ತೆ ಹಚ್ಚಬೇಕು. ಸಿಡಿ ಕೇಸ್ನ ಸತ್ಯಾಂಶ ಬಂದ ಮೇಲೆ ಎಲ್ಲವೂ ಗೊತ್ತಾಗಲಿದೆ. ಪೊಲೀಸರು ಆದಷ್ಟುಬೇಗ ಸತ್ಯಾಂಶ ರಾಜ್ಯದ ಜನತೆಗೆ ತಿಳಿಸಲಿ. ಯುವತಿ ಬಂದು ಹೇಳಿಕೆ ಕೊಟ್ಟ ಬಳಿಕ ಕ್ರಮ ಕೈಗೊಳ್ಳಬೇಕು. ಸಿಡಿ ಕೇಸ್ ಬಿಜೆಪಿ, ಕಾಂಗ್ರೆಸ್ಗೆ ಪ್ಲಸ್, ಮೈನಸ್ ಆಗಲ್ಲ ಎಂದು ಬೆಳಗಾವಿ ‘ಕೈ’ ಅಭ್ಯರ್ಥಿ ಹಾಗೂ ರಮೇಶ್ ಸಹೋದರ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.
ಡಿ.ಕೆ. ಶಿವಕುಮಾರ್ ಬೆಳಗಾವಿಗೆ ಬರಲು ಕೆಲ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗಿದೆ. ಅಶ್ಲೀಲ ಸಿಡಿ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷರ ಹೆಸರು ಕೇಳಿಬಂದ ಹಿನ್ನೆಲೆ ಕೆಲ ಕಾರ್ಯಕರ್ತರು ಶಿವಕುಮಾರ್ ಭೇಟಿ ವಿರೋಧಿಸಿದ್ದಾರೆ. ಈ ಬಗ್ಗೆಯೂ ಸತೀಶ್ ಜಾರಕಿಹೊಳಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.
ಕಾಂಗ್ರೆಸ್ನ ಕೆಲ ಕಾರ್ಯಕರ್ತರ ಹೇಳಿಕೆ ಅವರ ವೈಯಕ್ತಿಕ ವಿಚಾರ. ರಮೇಶ್ ಬೆಂಬಲಿಗರ ಪ್ರತಿಭಟನೆಗೂ, ನಮಗೂ ಸಂಬಂಧವಿಲ್ಲ. ಬೆಳಗಾವಿ ಜಿಲ್ಲೆಯ ಗೋಕಾಕ್ನಲ್ಲಿ ರಮೇಶ್ ಬೆಂಬಲಿಗರು, ಬೆಂಗಳೂರಲ್ಲಿ ಡಿಕೆಶಿ ಬೆಂಬಲಿಗರು ಪ್ರತಿಭಟನೆ ಮಾಡ್ತಿದ್ದಾರೆ. ನಾವು ಇಂದು ಸಂಜೆ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಸಭೆ ನಡೆಸುತ್ತೇವೆ. ನಾಳೆ ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸುತ್ತೇವೆ ಎಂದು ಸತೀಶ್ ಹೇಳಿದ್ದಾರೆ.
ಬೆಳಗಾವಿಯಲ್ಲಿ ಡಿ.ಕೆ. ಶಿವಕುಮಾರ್ ವಿರುದ್ಧ ರಮೇಶ್ ಬೆಂಬಲಿಗರ ಪ್ರತಿಭಟನೆ
ಬೆಳಗಾವಿಗೆ ಡಿ.ಕೆ.ಶಿವಕುಮಾರ್ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾಕಾರ ರಮೇಶ್ ಬೆಂಬಲಿಗರು ಸಾಂಬ್ರಾ ಏರ್ಪೋರ್ಟ್ ತಲುಪಿದ್ದಾರೆ. ಡಿ.ಕೆ. ಶಿವಕುಮಾರ್ ವಿರುದ್ಧ ಪ್ರತಿಭಟನೆ ನಡೆಸಲು ಆಗಮಿಸಿದ ಬೆಂಬಲಿಗರನ್ನು ಪೊಲೀಸರು ವಿಮಾನ ನಿಲ್ದಾಣದ ಮುಂಭಾಗದಲ್ಲೇ ತಡೆದಿದ್ದಾರೆ. ಗೋಕಾಕ್ ಸೇರಿ ವಿವಿಧ ಕಡೆಗಳಿಂದ ಆಗಮಿಸಿದ ಬೆಂಬಲಿಗರು, ವಿಮಾನ ನಿಲ್ದಾಣದ ಸಮೀಪವಿರುವ ಮೈದಾನದಲ್ಲಿ ಜಮಾವಣೆಗೊಂಡಿದ್ದಾರೆ.
ಡಿ.ಕೆ. ಶಿವಕುಮಾರ್ ಬಂಧಿಸುವಂತೆ ಬೆಂಬಲಿಗರ ಘೋಷಣೆ
ಸಾಂಬ್ರಾ ಏರ್ಪೋರ್ಟ್ ಬಳಿ ಧರಣಿ ನಡೆಸುತ್ತಿರುವ ರಮೇಶ್ ಬೆಂಬಲಿಗರು ಕಪ್ಪುಬಾವುಟ ಹಿಡಿದು ‘ಗೋ ಬ್ಯಾಕ್ ಡಿಕೆಶಿ’ ಎಂದು ಘೋಷಣೆ ಕೂಗಿ ಆಕ್ರೋಶ ಹೊರಹಾಕುತ್ತಿದ್ದಾರೆ. ಏರ್ಪೋರ್ಟ್ ಸಮೀಪವಿರುವ ಮೈದಾನದಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ.
06-05-25 11:23 pm
Bangalore Correspondent
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣ ; ಮಾಜಿ ಸಚಿವ ಗಾಲ...
06-05-25 08:18 pm
Hubballi Accident, Sagara, Five Killed: ಹುಬ್ಬ...
06-05-25 01:35 pm
Hassan Suicide, Police Constable Harrasment:...
05-05-25 01:30 pm
07-05-25 12:20 pm
HK News Desk
India strikes terror camps in Pak; ಪಾಕಿಸ್ತಾನದ...
07-05-25 09:54 am
ವಿಶ್ವಸಂಸ್ಥೆಯಲ್ಲಿ ಬೆತ್ತಲಾದ ಪಾಕ್ ; ಚೀನಾ ಬಿಟ್ಟು...
06-05-25 02:45 pm
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
07-05-25 03:36 pm
Mangalore Correspondent
Hindu Maha Sabha, Mangalore, Rajesh Pavitran:...
07-05-25 02:36 pm
Mangalore, Satish Kumapla, U T Khader: ಚಿಕ್ಕಮ...
06-05-25 06:36 pm
Suhas Shetty Murder, Bommai, Dinesh Gundurao:...
06-05-25 06:17 pm
Mangalore, Kodikere Loki Arrest: ಕಮ್ಯುನಲ್ ಕೇಸ...
06-05-25 04:02 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm