ಬ್ರೇಕಿಂಗ್ ನ್ಯೂಸ್
29-03-21 05:15 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.29: ಶಿವಮೊಗ್ಗದ ಸ್ಫೋಟ ಪ್ರಕರಣದ ಬಳಿಕ ನಿಂತು ಹೋಗಿರುವ ಗಣಿಗಳನ್ನು ಮತ್ತೆ ಪುನರಾರಂಭಿಸಲು ಷರತ್ತುಬದ್ಧ ಅನುಮತಿ ನೀಡಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಗಣಿಗಳನ್ನು ಪುನರ್ ಆರಂಭಿಸುವವರು 90 ದಿನಗಳ ಒಳಗೆ ಗಣಿ ಮತ್ತು ಸುರಕ್ಷತಾ ವಿಭಾಗದ ಮಹಾನಿರ್ದೇಶಕರಿಂದ (ಡಿಜಿಎಂಎಸ್) ಅನುಮತಿ ಪಡೆಯುವುದು ಕಡ್ಡಾಯ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಡಿಜಿಎಂಎಸ್ ಪರವಾನಗಿ ಪಡೆದು ನಡೆಯುವ ಗಣಿಗಳು ಕೇವಲ ಹತ್ತು ಶೇಕಡಾ ಅಷ್ಟೇ. ಉಳಿದ 90 ಶೇಕಡಾ ಗಣಿಗಳು ಈ ಅನುಮತಿಯನ್ನು ಹೊಂದಿಲ್ಲ. ಈ ರೀತಿ ಅನುಮತಿ ಪಡೆಯದ ಕಲ್ಲಿನ ಕೋರೆಗಳೇ ರಾಜ್ಯದಲ್ಲಿ 2500ಕ್ಕೂ ಹೆಚ್ಚು ಇದೆ. ಡಿಜಿಎಂಎಸ್ ಅನುಮತಿ ಪಡೆಯದ ಹೊರತು ಕಲ್ಲಿನ ಕೋರೆ ಪುನರಾರಂಭ ಸಾಧ್ಯವಿಲ್ಲ ಎಂದು ನಿರಾಣಿ ತಿಳಿಸಿದ್ದಾರೆ.
ಗಣಿಗಳ ಚಟುವಟಿಕೆ ನಿಂತು ಹೋದ ಕಾರಣ 300 ಕೋಟಿಯಷ್ಟು ನಷ್ಟವಾಗಿದೆ. ಹಲವಾರು ಗಣಿಗಳಲ್ಲಿ ಕಾರ್ಮಿಕರನ್ನು ತೆಗೆದು ಹಾಕಿದ್ದು, ಉದ್ಯೋಗ ನಷ್ಟವಾಗಿದೆ. ಗಣಿ ಸ್ಥಗಿತಗೊಂಡ ಕಾರಣ ಕಟ್ಟಡಗಳ ನಿರ್ಮಾಣ ಕಾರ್ಯ ನಿಂತು ಹೋಗಿದ್ದು ಭಾರೀ ನಷ್ಟ ಅನುಭವಿಸುತ್ತಿದ್ದಾರೆ. ಹೀಗಾಗಿ ಒಂದೆಡೆ ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ನಷ್ಟವಾಗಿದೆ. ಇದರಿಂದಾಗಿ ಗಣಿ ಚಟುವಟಿಕೆಯಲ್ಲಿ ತೊಡಗಿರುವ ಮಂದಿ ಗಣಿಗಾರಿಕೆ ಪುನರಾರಂಭಿಸಲು ಕೋರಿದ್ದಾರೆ. ಈ ಬಗ್ಗೆ ಸಿಎಂ ಜೊತೆ ಸಭೆ ನಡೆಸಿದ್ದು, ಯಾವುದೇ ಕಾರಣಕ್ಕೂ ಡಿಜಿಎಂಎಸ್ ಅನುಮತಿ ಇಲ್ಲದೆ ಗಣಿಗಾರಿಕೆ ನಡೆಸಲು ಅವಕಾಶ ನೀಡಿಲ್ಲ.
ಡಿಜಿಎಂಎಸ್ ಅನುಮತಿಯಿಲ್ಲದೆ ಸ್ಫೋಟಕಗಳನ್ನು ಖರೀದಿಸಲು ಮತ್ತು ಇರಿಸಿಕೊಳ್ಳಲು ಗಣಿಗಳಿಗೆ ಅವಕಾಶ ಇಲ್ಲ. ಎರಡು ಕೆಜಿಯಷ್ಟು ಸ್ಫೋಟಕ ಗಣಿಗಳಲ್ಲಿ ಬಳಸಲು ಡಿಜಿಎಂಎಸ್ ಅನುಮತಿ ಬೇಕಿಲ್ಲ ಎಂದರು.
quarries that were inactive after quarry blast will now go active in Karnataka minister Murugesh Nirani
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm