ಬ್ರೇಕಿಂಗ್ ನ್ಯೂಸ್
29-03-21 05:15 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.29: ಶಿವಮೊಗ್ಗದ ಸ್ಫೋಟ ಪ್ರಕರಣದ ಬಳಿಕ ನಿಂತು ಹೋಗಿರುವ ಗಣಿಗಳನ್ನು ಮತ್ತೆ ಪುನರಾರಂಭಿಸಲು ಷರತ್ತುಬದ್ಧ ಅನುಮತಿ ನೀಡಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಗಣಿಗಳನ್ನು ಪುನರ್ ಆರಂಭಿಸುವವರು 90 ದಿನಗಳ ಒಳಗೆ ಗಣಿ ಮತ್ತು ಸುರಕ್ಷತಾ ವಿಭಾಗದ ಮಹಾನಿರ್ದೇಶಕರಿಂದ (ಡಿಜಿಎಂಎಸ್) ಅನುಮತಿ ಪಡೆಯುವುದು ಕಡ್ಡಾಯ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಡಿಜಿಎಂಎಸ್ ಪರವಾನಗಿ ಪಡೆದು ನಡೆಯುವ ಗಣಿಗಳು ಕೇವಲ ಹತ್ತು ಶೇಕಡಾ ಅಷ್ಟೇ. ಉಳಿದ 90 ಶೇಕಡಾ ಗಣಿಗಳು ಈ ಅನುಮತಿಯನ್ನು ಹೊಂದಿಲ್ಲ. ಈ ರೀತಿ ಅನುಮತಿ ಪಡೆಯದ ಕಲ್ಲಿನ ಕೋರೆಗಳೇ ರಾಜ್ಯದಲ್ಲಿ 2500ಕ್ಕೂ ಹೆಚ್ಚು ಇದೆ. ಡಿಜಿಎಂಎಸ್ ಅನುಮತಿ ಪಡೆಯದ ಹೊರತು ಕಲ್ಲಿನ ಕೋರೆ ಪುನರಾರಂಭ ಸಾಧ್ಯವಿಲ್ಲ ಎಂದು ನಿರಾಣಿ ತಿಳಿಸಿದ್ದಾರೆ.

ಗಣಿಗಳ ಚಟುವಟಿಕೆ ನಿಂತು ಹೋದ ಕಾರಣ 300 ಕೋಟಿಯಷ್ಟು ನಷ್ಟವಾಗಿದೆ. ಹಲವಾರು ಗಣಿಗಳಲ್ಲಿ ಕಾರ್ಮಿಕರನ್ನು ತೆಗೆದು ಹಾಕಿದ್ದು, ಉದ್ಯೋಗ ನಷ್ಟವಾಗಿದೆ. ಗಣಿ ಸ್ಥಗಿತಗೊಂಡ ಕಾರಣ ಕಟ್ಟಡಗಳ ನಿರ್ಮಾಣ ಕಾರ್ಯ ನಿಂತು ಹೋಗಿದ್ದು ಭಾರೀ ನಷ್ಟ ಅನುಭವಿಸುತ್ತಿದ್ದಾರೆ. ಹೀಗಾಗಿ ಒಂದೆಡೆ ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ನಷ್ಟವಾಗಿದೆ. ಇದರಿಂದಾಗಿ ಗಣಿ ಚಟುವಟಿಕೆಯಲ್ಲಿ ತೊಡಗಿರುವ ಮಂದಿ ಗಣಿಗಾರಿಕೆ ಪುನರಾರಂಭಿಸಲು ಕೋರಿದ್ದಾರೆ. ಈ ಬಗ್ಗೆ ಸಿಎಂ ಜೊತೆ ಸಭೆ ನಡೆಸಿದ್ದು, ಯಾವುದೇ ಕಾರಣಕ್ಕೂ ಡಿಜಿಎಂಎಸ್ ಅನುಮತಿ ಇಲ್ಲದೆ ಗಣಿಗಾರಿಕೆ ನಡೆಸಲು ಅವಕಾಶ ನೀಡಿಲ್ಲ.
ಡಿಜಿಎಂಎಸ್ ಅನುಮತಿಯಿಲ್ಲದೆ ಸ್ಫೋಟಕಗಳನ್ನು ಖರೀದಿಸಲು ಮತ್ತು ಇರಿಸಿಕೊಳ್ಳಲು ಗಣಿಗಳಿಗೆ ಅವಕಾಶ ಇಲ್ಲ. ಎರಡು ಕೆಜಿಯಷ್ಟು ಸ್ಫೋಟಕ ಗಣಿಗಳಲ್ಲಿ ಬಳಸಲು ಡಿಜಿಎಂಎಸ್ ಅನುಮತಿ ಬೇಕಿಲ್ಲ ಎಂದರು.
quarries that were inactive after quarry blast will now go active in Karnataka minister Murugesh Nirani
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm