ಬ್ರೇಕಿಂಗ್ ನ್ಯೂಸ್
29-03-21 05:15 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.29: ಶಿವಮೊಗ್ಗದ ಸ್ಫೋಟ ಪ್ರಕರಣದ ಬಳಿಕ ನಿಂತು ಹೋಗಿರುವ ಗಣಿಗಳನ್ನು ಮತ್ತೆ ಪುನರಾರಂಭಿಸಲು ಷರತ್ತುಬದ್ಧ ಅನುಮತಿ ನೀಡಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಗಣಿಗಳನ್ನು ಪುನರ್ ಆರಂಭಿಸುವವರು 90 ದಿನಗಳ ಒಳಗೆ ಗಣಿ ಮತ್ತು ಸುರಕ್ಷತಾ ವಿಭಾಗದ ಮಹಾನಿರ್ದೇಶಕರಿಂದ (ಡಿಜಿಎಂಎಸ್) ಅನುಮತಿ ಪಡೆಯುವುದು ಕಡ್ಡಾಯ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಡಿಜಿಎಂಎಸ್ ಪರವಾನಗಿ ಪಡೆದು ನಡೆಯುವ ಗಣಿಗಳು ಕೇವಲ ಹತ್ತು ಶೇಕಡಾ ಅಷ್ಟೇ. ಉಳಿದ 90 ಶೇಕಡಾ ಗಣಿಗಳು ಈ ಅನುಮತಿಯನ್ನು ಹೊಂದಿಲ್ಲ. ಈ ರೀತಿ ಅನುಮತಿ ಪಡೆಯದ ಕಲ್ಲಿನ ಕೋರೆಗಳೇ ರಾಜ್ಯದಲ್ಲಿ 2500ಕ್ಕೂ ಹೆಚ್ಚು ಇದೆ. ಡಿಜಿಎಂಎಸ್ ಅನುಮತಿ ಪಡೆಯದ ಹೊರತು ಕಲ್ಲಿನ ಕೋರೆ ಪುನರಾರಂಭ ಸಾಧ್ಯವಿಲ್ಲ ಎಂದು ನಿರಾಣಿ ತಿಳಿಸಿದ್ದಾರೆ.

ಗಣಿಗಳ ಚಟುವಟಿಕೆ ನಿಂತು ಹೋದ ಕಾರಣ 300 ಕೋಟಿಯಷ್ಟು ನಷ್ಟವಾಗಿದೆ. ಹಲವಾರು ಗಣಿಗಳಲ್ಲಿ ಕಾರ್ಮಿಕರನ್ನು ತೆಗೆದು ಹಾಕಿದ್ದು, ಉದ್ಯೋಗ ನಷ್ಟವಾಗಿದೆ. ಗಣಿ ಸ್ಥಗಿತಗೊಂಡ ಕಾರಣ ಕಟ್ಟಡಗಳ ನಿರ್ಮಾಣ ಕಾರ್ಯ ನಿಂತು ಹೋಗಿದ್ದು ಭಾರೀ ನಷ್ಟ ಅನುಭವಿಸುತ್ತಿದ್ದಾರೆ. ಹೀಗಾಗಿ ಒಂದೆಡೆ ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ನಷ್ಟವಾಗಿದೆ. ಇದರಿಂದಾಗಿ ಗಣಿ ಚಟುವಟಿಕೆಯಲ್ಲಿ ತೊಡಗಿರುವ ಮಂದಿ ಗಣಿಗಾರಿಕೆ ಪುನರಾರಂಭಿಸಲು ಕೋರಿದ್ದಾರೆ. ಈ ಬಗ್ಗೆ ಸಿಎಂ ಜೊತೆ ಸಭೆ ನಡೆಸಿದ್ದು, ಯಾವುದೇ ಕಾರಣಕ್ಕೂ ಡಿಜಿಎಂಎಸ್ ಅನುಮತಿ ಇಲ್ಲದೆ ಗಣಿಗಾರಿಕೆ ನಡೆಸಲು ಅವಕಾಶ ನೀಡಿಲ್ಲ.
ಡಿಜಿಎಂಎಸ್ ಅನುಮತಿಯಿಲ್ಲದೆ ಸ್ಫೋಟಕಗಳನ್ನು ಖರೀದಿಸಲು ಮತ್ತು ಇರಿಸಿಕೊಳ್ಳಲು ಗಣಿಗಳಿಗೆ ಅವಕಾಶ ಇಲ್ಲ. ಎರಡು ಕೆಜಿಯಷ್ಟು ಸ್ಫೋಟಕ ಗಣಿಗಳಲ್ಲಿ ಬಳಸಲು ಡಿಜಿಎಂಎಸ್ ಅನುಮತಿ ಬೇಕಿಲ್ಲ ಎಂದರು.
quarries that were inactive after quarry blast will now go active in Karnataka minister Murugesh Nirani
31-01-26 10:24 pm
HK News Desk
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm