ಬ್ರೇಕಿಂಗ್ ನ್ಯೂಸ್
29-03-21 05:15 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.29: ಶಿವಮೊಗ್ಗದ ಸ್ಫೋಟ ಪ್ರಕರಣದ ಬಳಿಕ ನಿಂತು ಹೋಗಿರುವ ಗಣಿಗಳನ್ನು ಮತ್ತೆ ಪುನರಾರಂಭಿಸಲು ಷರತ್ತುಬದ್ಧ ಅನುಮತಿ ನೀಡಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಗಣಿಗಳನ್ನು ಪುನರ್ ಆರಂಭಿಸುವವರು 90 ದಿನಗಳ ಒಳಗೆ ಗಣಿ ಮತ್ತು ಸುರಕ್ಷತಾ ವಿಭಾಗದ ಮಹಾನಿರ್ದೇಶಕರಿಂದ (ಡಿಜಿಎಂಎಸ್) ಅನುಮತಿ ಪಡೆಯುವುದು ಕಡ್ಡಾಯ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಡಿಜಿಎಂಎಸ್ ಪರವಾನಗಿ ಪಡೆದು ನಡೆಯುವ ಗಣಿಗಳು ಕೇವಲ ಹತ್ತು ಶೇಕಡಾ ಅಷ್ಟೇ. ಉಳಿದ 90 ಶೇಕಡಾ ಗಣಿಗಳು ಈ ಅನುಮತಿಯನ್ನು ಹೊಂದಿಲ್ಲ. ಈ ರೀತಿ ಅನುಮತಿ ಪಡೆಯದ ಕಲ್ಲಿನ ಕೋರೆಗಳೇ ರಾಜ್ಯದಲ್ಲಿ 2500ಕ್ಕೂ ಹೆಚ್ಚು ಇದೆ. ಡಿಜಿಎಂಎಸ್ ಅನುಮತಿ ಪಡೆಯದ ಹೊರತು ಕಲ್ಲಿನ ಕೋರೆ ಪುನರಾರಂಭ ಸಾಧ್ಯವಿಲ್ಲ ಎಂದು ನಿರಾಣಿ ತಿಳಿಸಿದ್ದಾರೆ.

ಗಣಿಗಳ ಚಟುವಟಿಕೆ ನಿಂತು ಹೋದ ಕಾರಣ 300 ಕೋಟಿಯಷ್ಟು ನಷ್ಟವಾಗಿದೆ. ಹಲವಾರು ಗಣಿಗಳಲ್ಲಿ ಕಾರ್ಮಿಕರನ್ನು ತೆಗೆದು ಹಾಕಿದ್ದು, ಉದ್ಯೋಗ ನಷ್ಟವಾಗಿದೆ. ಗಣಿ ಸ್ಥಗಿತಗೊಂಡ ಕಾರಣ ಕಟ್ಟಡಗಳ ನಿರ್ಮಾಣ ಕಾರ್ಯ ನಿಂತು ಹೋಗಿದ್ದು ಭಾರೀ ನಷ್ಟ ಅನುಭವಿಸುತ್ತಿದ್ದಾರೆ. ಹೀಗಾಗಿ ಒಂದೆಡೆ ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ನಷ್ಟವಾಗಿದೆ. ಇದರಿಂದಾಗಿ ಗಣಿ ಚಟುವಟಿಕೆಯಲ್ಲಿ ತೊಡಗಿರುವ ಮಂದಿ ಗಣಿಗಾರಿಕೆ ಪುನರಾರಂಭಿಸಲು ಕೋರಿದ್ದಾರೆ. ಈ ಬಗ್ಗೆ ಸಿಎಂ ಜೊತೆ ಸಭೆ ನಡೆಸಿದ್ದು, ಯಾವುದೇ ಕಾರಣಕ್ಕೂ ಡಿಜಿಎಂಎಸ್ ಅನುಮತಿ ಇಲ್ಲದೆ ಗಣಿಗಾರಿಕೆ ನಡೆಸಲು ಅವಕಾಶ ನೀಡಿಲ್ಲ.
ಡಿಜಿಎಂಎಸ್ ಅನುಮತಿಯಿಲ್ಲದೆ ಸ್ಫೋಟಕಗಳನ್ನು ಖರೀದಿಸಲು ಮತ್ತು ಇರಿಸಿಕೊಳ್ಳಲು ಗಣಿಗಳಿಗೆ ಅವಕಾಶ ಇಲ್ಲ. ಎರಡು ಕೆಜಿಯಷ್ಟು ಸ್ಫೋಟಕ ಗಣಿಗಳಲ್ಲಿ ಬಳಸಲು ಡಿಜಿಎಂಎಸ್ ಅನುಮತಿ ಬೇಕಿಲ್ಲ ಎಂದರು.
quarries that were inactive after quarry blast will now go active in Karnataka minister Murugesh Nirani
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm