ಬ್ರೇಕಿಂಗ್ ನ್ಯೂಸ್
22-08-20 01:05 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 22: ಕರ್ತವ್ಯ ನಿರ್ವಹಿಸುವ ವೇಳೆ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಪಾಲನೆ ಮಾಡದೆ ಪಾರ್ಕ್ನಲ್ಲಿ ಗುಂಪು ಸೇರಿದ್ದ 6 ಮಂದಿ ಪೊಲೀಸರನ್ನು ಅಮಾನತುಗೊಳಿಸಿ ಸಂಚಾರ ವಿಭಾಗದ ಡಿಸಿಪಿ ಸೌಮ್ಯಲತಾ ಆದೇಶ ಹೊರಡಿಸಿದ್ದಾರೆ.
ಜಾಲಹಳ್ಳಿ ಸಂಚಾರ ಠಾಣೆಯ ಎಎಸ್ಐ ಮಂಜುನಾಥಯ್ಯ, ಹೆಡ್ ಕಾನ್ಸ್ಟೇಬಲ್ ನಾಗರಾಜು, ಕಾನ್ಸ್ ಟೇಬಲ್ಗಳಾದ ಪದ್ಮನಾಭ್, ಮಧುಸೂಧನ್, ವಿಶ್ವನಾಥ್ ಹಾಗೂ ಮಹಿಳಾ ಕಾನ್ಸ್ಟೇಬಲ್ ಸುಜನಾ ಅಮಾನತುಗೊಂಡವರು
ಜಾಲಹಳ್ಳಿ ಸಂಚಾರ ಠಾಣೆಯ ಇನ್ಸ್ಪೆಕ್ಟರ್ ಆಗಸ್ಟ್ 11ರಂದು ಈ ಆರು ಸಿಬ್ಬಂದಿಯನ್ನು ಗಂಗಮ್ಮನಗುಡಿ ಠಾಣೆ ವ್ಯಾಪ್ತಿಯಲ್ಲಿ ಕರ್ತವ್ಯಕ್ಕೆ ನಿಯೋಜಿಸಿದ್ದರು. ಕೋಬ್ರಾ ಡ್ಯೂಟಿಗೆ, ಜಾಲಹಳ್ಳಿ ಜಂಕ್ಷನ್, ಗಂಗಮ್ಮನ ವೃತ್ತ, ಸಾಹಿತ್ಯ ಕೂಟ ಜಂಕ್ಷನ್ ಸೇರಿ ಹಲವೆಡೆ ಸಂಚಾರ ನಿರ್ವಹಣೆಯ ಕರ್ತವ್ಯಕ್ಕೆ ಇವರನ್ನು ನಿಯೋಜಿಸಲಾಗಿತ್ತು. ಆ ವೇಳೆ ಹಿರಿಯ ಅಧಿಕಾರಿಗಳು ಕೊರೊನಾ ಸಂಬಂಧ ಅಗತ್ಯ ಮುಂಜಾಗ್ರತಾ ಕ್ರಮ ವಹಿಸುವಂತೆ ಸೂಚಿಸಿದ್ದು, ಅವರ ಸಲಹೆಯನ್ನು ಲೆಕ್ಕಿಸದೇ ನಿರ್ಲಕ್ಷ್ಯ ಮಾಡಿ, ಈ 6 ಮಂದಿ ಸಾಹಿತ್ಯ ಕೂಟ ಬಳಿಯ ಪಾರ್ಕ್ನಲ್ಲಿ ಗುಂಪು ಸೇರಿದ್ದರು ಎನ್ನಲಾಗಿದೆ.
ಈ ವೇಳೆ ಮಾಸ್ಕ್ ಧರಿಸಿಲ್ಲ ಹಾಗೂ ವ್ಯಕ್ತಿಗತ ಅಂತರ ಕಾಯ್ದುಕೊಂಡಿರಲಿಲ್ಲ ಎಂಬ ಮಾಹಿತಿ ಪಡೆದ ಡಿಸಿಪಿ ಸೌಮ್ಯಲತಾ, ಕರ್ತವ್ಯದ ವೇಳೆ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನ ತೋರಿದ ಆರೋಪದ ಮೇಲೆ ಸಿಬ್ಬಂದಿಯನ್ನ ಅಮಾನತು ಮಾಡಿದ್ದಾರೆ. ಹಾಗೂ ಅಮಾನತು ಅವಧಿಯಲ್ಲಿ ಖಾಸಗಿ ನೌಕರಿ ಭತ್ಯೆ ಹಾಗೂ ವ್ಯವಹಾರ ಮಾಡಿದರೆ ಜೀವನ ಭತ್ಯೆ ಮುಟ್ಟುಗೋಲು ಹಾಕಿಕೊಳ್ಳುವುದಾಗಿ ಖಡಕ್ ಎಚ್ಚರಿಕೆಯನ್ನು ಸಹ ನೀಡಿದ್ದಾರೆ.
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm