ಬ್ರೇಕಿಂಗ್ ನ್ಯೂಸ್
31-03-21 06:02 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.31: ಕರ್ನಾಟಕದ ಮಲೆನಾಡು, ಕರಾವಳಿ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇನ್ನು ಎರಡು ದಿನ ಮಳೆಯಾಗಲಿದೆ. ಉತ್ತರ ಒಳನಾಡು ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಒಣಹವೆ ಮುಂದುವರೆಯಲಿದ್ದು, ಕೆಲವೊಮ್ಮೆ ಅಕಾಲಿಕ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಹೇಳಿದ್ದಾರೆ.
ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆ, ಮಂಗಳೂರಿನ ಕೆಲವಡೆ ಮಳೆಯಾಗಿದೆ.ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಕೊಡಗು, ಮಂಡ್ಯ ಹಾಗೂ ಮೈಸೂರಿನಲ್ಲಿ ಮುಂದಿನ 48 ಗಂಟೆಗಳ ಕಾಲ ಮಳೆಯಾಗಲಿದೆ.
ಬೆಂಗಳೂರಿನ ನಗರ ಪ್ರದೇಶದಲ್ಲಿ ಒಣಹವೆ ಮುಂದುವರೆಯಲಿದೆ, ಕೆಲವೆಡೆ ಬೆಳಗ್ಗೆ ಹೊತ್ತು ಮೋಡ ಕವಿದ ವಾತಾವರಣ ಇರಲಿದೆ ಹವಾಮಾನ ಇಲಾಖೆ ಉಸ್ತುವಾರಿ ನಿರ್ದೇಶಕ ಸುಂದರ್ ಮೇತ್ರಿ ಹೇಳಿದ್ದಾರೆ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ
ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದ್ದು, ಏಪ್ರಿಲ್ 1ರ ತನಕ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಹೇಳಿದೆ.

ಗರಿಷ್ಠ ಹಾಗೂ ಕನಿಷ್ಠ ತಾಪಮಾನ
ಕಲಬುರಗಿಯಲ್ಲಿ 41.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 18.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕಳೆದ 24 ಗಂಟೆಗಳಲ್ಲಿ ಎಲ್ಲಿ ಹೆಚ್ಚು ಮಳೆ:
ಕಳೆದ 24 ಗಂಟೆಗಳ ಮಳೆ ನಕ್ಷೆಯನ್ನು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಪ್ರಕಟಿಸಿದೆ. ಇದರಂತೆ, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಜತ್ತೂರು ಎಂಬಲ್ಲಿ ಅತ್ಯಧಿಕ 49 ಮಿ. ಮೀ ಮಳೆಯಾಗಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm