ಬ್ರೇಕಿಂಗ್ ನ್ಯೂಸ್
02-04-21 03:06 pm Headline Karnataka News Network ಕರ್ನಾಟಕ
ಬೆಂಗಳೂರು, ಎ.2: ಇತ್ತೀಚಿನ ವರ್ಷಗಳಲ್ಲಿ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆಗಾಲದ ಸಂದರ್ಭ ಭೂಕುಸಿತಗಳಾಗುತ್ತಿರುವುದಕ್ಕೆ ಪಶ್ಚಿಮ ಘಟ್ಟಗಳಲ್ಲಿ ಅರಣ್ಯ ನಾಶ ಮತ್ತು ಅರಣ್ಯ ಭಾಗದಲ್ಲಿ ಭೂಮಿಯನ್ನು ಅಗೆದಿರುವುದೇ ಕಾರಣ ಎಂದು ಕರ್ನಾಟಕ ಜೈವವೈವಿಧ್ಯ ಮಂಡಳಿಯ ತಜ್ಞರ ಸಮಿತಿ ರಾಜ್ಯ ಸರಕಾರಕ್ಕೆ ವರದಿ ನೀಡಿದೆ.
ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷ ಅನಂತ ಹೆಗಡೆ ಆಶೀಸರ ನೇತೃತ್ವದ ಸಮಿತಿ, ಮುಖ್ಯಮಂತ್ರಿ ಯಡಿಯೂರಪ್ಪ ಅವರ್ನು ಭೇಟಿಯಾಗಿ ಈ ಬಗ್ಗೆ ವರದಿಯನ್ನು ನೀಡಿದೆ. ಕೇಂದ್ರ ಸರಕಾರ ನೀಡುವ ಮಿಟಿಗೇಶನ್ ಫಂಡ್ ಮೂಲಕ ಭೂಕುಸಿತದ ಪ್ರದೇಶಗಳಲ್ಲಿ ಪುನರ್ ನಿರ್ಮಾಣ ಕಾರ್ಯಗಳಿಗೆ ಅನುದಾನ ಒದಗಿಸುವುದು ಮತ್ತು ವರದಿಯಲ್ಲಿ ಮಾಡಲಾಗಿರುವ ಶಿಫಾರಸುಗಳ ಅನುಷ್ಠಾನಕ್ಕೆ ಸರಕಾರ ಪರಿಶೀಲಿಸಿ ಕ್ರಮ ಕೈಗೊಳ್ಳಲಿದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ವಿಕೋಪ ನಿಯಂತ್ರಣ ಪ್ರಾಧಿಕಾರದ ನೇತೃತ್ವದಲ್ಲಿ ಕಾರ್ಯಕ್ರಮಗಳನ್ನು ರೂಪಿಸಬೇಕು. ಇವುಗಳ ಜಾರಿಗೆ ಅಗತ್ಯವಿರುವ ತಾಂತ್ರಿಕ ಮಾಹಿತಿಗಳನ್ನು ನೀಡುವ ನೋಡಲ್ ಸಂಸ್ಥೆಯಾಗಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವನ್ನು ಗುರುತಿಸಬೇಕು. ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಭೂಕುಸಿತದ ಸಾಧ್ಯತೆ ಇರುವ ಪ್ರದೇಶಗಳನ್ನು ಗುರುತಿಸಿ, ಗ್ರಾಮ ಮಟ್ಟದ ನಕ್ಷೆ ರಚಿಸುವುದು.
ಭೂಕುಸಿತದ ಬಗ್ಗೆ ಮೊದಲೇ ಅಪಾಯದ ಮುನ್ಸೂಚನೆ ನೀಡುವ ತಾಂತ್ರಿಕ ವ್ಯವಸ್ಥೆಯನ್ನು ರೂಪಿಸುವುದು, ಜಿಲ್ಲಾಡಳಿತಗಳು ಸಕಲಾದಲ್ಲಿ ಅವುಗಳ ಸಹಾಯ ಪಡೆಯುವಂಥ ಆಡಳಿತಾತ್ಮಕ ನೀತಿ ರೂಪಿಸುವುದು, ಮಲೆನಾಡು ಮತ್ತು ಕರಾವಳಿ ಭಾಗದ ಭೂಕುಸಿತ ಸಾಧ್ಯತೆ ಇರುವ ಪ್ರದೇಶಗಳಲ್ಲಿ ಸ್ಥಳೀಯರ ಸಹಕಾರ ಪಡೆದು ಮರ, ಗಿಡಗಳನ್ನು ನೆಟ್ಟು ಕಾಡು ಬೆಳೆಸಲು ಒತ್ತು ಕೊಡುವುದು ಇತ್ಯಾದಿ ಶಿಫಾರಸುಗಳನ್ನು ತಜ್ಞರ ಸಮಿತಿ ಮಾಡಿದೆ.

ಆದರೆ, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಮತ್ತು ಕೊಡಗು ಭಾಗದಲ್ಲಿ ಭೂಕುಸಿತ ಆಗಿರುವುದಕ್ಕೆ ನೈಜ ಕಾರಣ ಎನ್ನಲಾಗುತ್ತಿರುವ ಎತ್ತಿನಹೊಳೆ ಯೋಜನಾ ಪ್ರದೇಶದಲ್ಲಿ ಅನಿಯಮಿತವಾಗಿ ಸಹಜ ಅರಣ್ಯವನ್ನು ಅಗೆದು ಹಾಕಿರುವ ವಿಚಾರವನ್ನು ತಜ್ಞರ ತಂಡ ವರದಿಯಲ್ಲಿ ಉಲ್ಲೇಖ ಮಾಡಿಲ್ಲ. ಪರಿಸರ ತಜ್ಞರು, ಅಧ್ಯಯನ ನಡೆಸಿದ ಬೇರೆ ಬೇರೆ ವಿಭಾಗದ ವಿಜ್ಞಾನಿಗಳು ಈ ಭಾಗದಲ್ಲಿ ಪ್ರತಿವರ್ಷ ಬೆಟ್ಟಗಳು ಕುಸಿಯುತ್ತಿರುವುದಕ್ಕೆ ಸಕಲೇಶಪುರ ಭಾಗದಲ್ಲಿ ಎತ್ತಿನಹೊಳೆ ಯೋಜನೆ ಹೆಸರಲ್ಲಿ ಬೆಟ್ಟಗಳ ತುದಿಯನ್ನು ಅಗೆದು ಅಣೆಕಟ್ಟು ಕಟ್ಟಿದ್ದೇ ಕಾರಣ ಎನ್ನುವ ಅಂಶವನ್ನು ಹೇಳಿದ್ದಾರೆ.

ಇದೇ ವಿಚಾರವನ್ನು ಅರಣ್ಯ ನಾಶ, ಬೆಟ್ಟ ಅಗೆದಿದ್ದು ಕಾರಣ ಎನ್ನುವ ಮೂಲಕ ಸರಕಾರದ ಜೀವವೈವಿಧ್ಯ ಮಂಡಳಿಯ ತಜ್ಞರು ತಿಪ್ಪೆ ಸಾರಿಸುವ ಕೆಲಸ ಮಾಡಿದ್ದಾರೆ. ಸಾವಿರಾರು ಎಕ್ರೆ ಪ್ರದೇಶದಲ್ಲಿ ಬೃಹತ್ ಪ್ರಮಾಣದಲ್ಲಿ ಬೆಟ್ಟ ಅಗೆದು, ಅರಣ್ಯ ನಾಶ ಮಾಡಿದ್ದು, ಅಲ್ಲಿನ ಸಹಜ ಅರಣ್ಯವನ್ನು ಹಾಳುಗೆಡವಿದ್ದು ಮಳೆಯಾಗುವ ಸಂದರ್ಭದಲ್ಲಿ ಮಳೆನೀರು ನೇರವಾಗಿ ಅಲ್ಲಿ ಇಂಗುವ ಮೂಲಕ ಬೇರೊಂದು ಕಡೆ ಒಡೆದು ಬರುತ್ತಿರುವುದೇ ಭೂಕುಸಿತಕ್ಕೆ ಕಾರಣ ಎನ್ನುವ ಅಂಶವನ್ನು ಖಾಸಗಿ ಅಧ್ಯಯನಕಾರರು ಬೊಟ್ಟು ಮಾಡಿದ್ದಾರೆ.
Extreme landslides in Karvali region are due to the Yettinahole reservoir says reports geology department top officials.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm